Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐಸಿಸಿ ಏಕದಿನ ರ‌್ಯಾಂಕಿಂಗ್‌ : ವಿರಾಟ್ ಕೊಹ್ಲಿಯನ್ನು ಮೊದಲ ಬಾರಿಗೆ ಹಿಂದಿಕ್ಕಿದ ರೋಹಿತ್ ಶರ್ಮಾ

Facebook
Twitter
Telegram
WhatsApp

 

ಸುದ್ದಿಒನ್ : ಐಸಿಸಿ ಏಕದಿನ ರ‌್ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮ್ಮ ಸಾಮರ್ಥ್ಯ ತೋರಿದ್ದಾರೆ. ಐಸಿಸಿ ಪ್ರಕಟಿಸಿರುವ ಇತ್ತೀಚಿನ ಬ್ಯಾಟ್ಸ್‌ಮನ್‌ಗಳ ರ‌್ಯಾಂಕಿಂಗ್‌ನಲ್ಲಿ ರೋಹಿತ್ ಶರ್ಮಾ ಆರನೇ ಸ್ಥಾನಕ್ಕೆ ತಲುಪಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್-2023ರಲ್ಲಿ ಆಡುತ್ತಿರುವ ರೋಹಿತ್ ಐದು ಸ್ಥಾನ ಮೇಲೇರಿ ಆರನೇ ಸ್ಥಾನಕ್ಕೆ ಏರಿದ್ದಾರೆ. ಅಫ್ಘಾನಿಸ್ತಾನ ವಿರುದ್ಧ ಶತಕ ಸಿಡಿಸಿದ ಹಿಟ್‌ಮ್ಯಾನ್ ಪಾಕಿಸ್ತಾನ ವಿರುದ್ಧವೂ 86 ರನ್‌ಗಳೊಂದಿಗೆ ಉತ್ತಮ ಆಟ ಪ್ರದರ್ಶಿಸಿದ್ದರು.

ಈ‌ ಮೂಲಕ ರೋಹಿತ್ ತಮ್ಮ ಶ್ರೇಯಾಂಕವನ್ನು ಆರನೆಯ ಸ್ಥಾನಕ್ಕೆ ಏರಿಸಿಕೊಂಡಿದ್ದಾರೆ. ರೋಹಿತ್ ಐಸಿಸಿ ಏಕದಿನ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿಯನ್ನು ಮೊದಲ ಬಾರಿಗೆ ಹಿಂದಿಕ್ಕಿದ್ದಾರೆ. ಸದ್ಯ ಕೊಹ್ಲಿ 9ನೇ ಸ್ಥಾನದಲ್ಲಿದ್ದಾರೆ.

ಪಾಕಿಸ್ತಾನದ ನಾಯಕ ಬಾಬರ್ ಅಜಮ್ ನಂ.1 ಸ್ಥಾನದಲ್ಲಿದ್ದರೆ, ಭಾರತದ ಯುವ ಆರಂಭಿಕ ಆಟಗಾರ ಶುಭಮನ್ ಗಿಲ್ ಎರಡನೇ ಸ್ಥಾನದಲ್ಲಿದ್ದಾರೆ. ಅದೇ ರೀತಿ ಈ ಮೆಗಾ ಟೂರ್ನಿಯಲ್ಲಿ ಸತತ ಎರಡು ಶತಕ ಸಿಡಿಸಿದ ದಕ್ಷಿಣ ಆಫ್ರಿಕಾದ ಸ್ಟಾರ್ ಓಪನರ್ ಕ್ವಿಂಟನ್ ಡಿ ಕಾಕ್ ಏಕದಿನ ರ್ಯಾಂಕಿಂಗ್ ನಲ್ಲಿ 3ನೇ ಸ್ಥಾನಕ್ಕೆ ತಲುಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!