Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಕ್ಕಿಗಾಗಿ ಡಿಮ್ಯಾಂಡ್ : ನಾಳೆ ರಾಜ್ಯದ ನ್ಯಾಯಬೆಲೆ ಅಂಗಡಿಗಳು ಬಂದ್..!

---Advertisement---

ಬೆಂಗಳೂರು : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಬ್ಬರಿಗೂ ಹತ್ತು ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಅಕ್ಕಿ ಸಿಗದೆ ಇರುವ ಕಾರಣ, ಐದು ಕೆಜಿ ಅಕ್ಕಿ, ಇನ್ನೈದು ಕೆಜಿ ಅಕ್ಕಿಗೆ ಹಣ ನೀಡುತ್ತಿದೆ. ಆದರೆ ಇದನ್ನು ಖಂಡಿಸಿ, ಇದೀಗ ಹೆಚ್ಚುವರಿ ಅಕ್ಕಿಗಾಗಿ ನಾಳೆ ನ್ಯಾಯಬೆಲೆ ಅಂಗಡಿಯನ್ನು ಬಂದ್ ಮಾಡಲಾಗುತ್ತಿದೆ.

ರಾಜ್ಯದ 20,350 ನ್ಯಾಯಬೆಲೆ ಅಂಗಡಿಗಳು ಬಂದ್ ಗೆ ಕರೆ ನೀಡಲಾಗಿದೆ. ನಾವುಗಳು ಪಡಿತರ ವಿತರಣೆಯನ್ನೇ ನಂಬಿಕೊಂಡಿದ್ದು, ಆರ್ಥಿಕ ಸಂಕಷ್ಟ ಎದುರಾಗಿದೆ. ಒಂದೆರಡು ತಿಂಗಳು ಅಂತ ಹೇಳಿ, ಡಿಬಿಟಿ ಮುಂದುವರಿಸಲಾಗುತ್ತಿದೆ. ರಾಜ್ಯದಲ್ಲಿ 1.14 ಕೋಟಿ ಪಡಿತರ ಚೀಟಿ, 4.30 ಕೋಟಿ ಫಲಾನುಭವಿಗಳು ಇದ್ದಾರೆ. ತಲಾ 5 ಕೆಜಿಯಂತೆ ಅಕ್ಕಿ ಬದಲಿಗೆ 170 ರೂಪಾಯಿ ನೀಡುತ್ತಿದೆ ಸರ್ಕಾರ. ಒಂದು ಕೆಜಿ ಅಕ್ಕಿಗೆ ಸರ್ಕಾರ ಪಡಿತರ ವಿತರಕರಿಗೆ 1.24 ರೂಪಾಯಿ ಕಮಿಷನ್. ಈಗ ಹಣ ಕೊಡುತ್ತಿರುವುದರಿಂದ ಪ್ರತಿ ವಿತರಕರಿಗೆ ಸುಮಾರು ₹13 ಸಾವಿರ ಕೈ ತಪ್ಪುತ್ತಿದೆ.

ಈ ಸಂಬಂಧ ಮಾತನಾಡಿದ ಸರ್ಕಾರಿ ಪಡಿತರ ವಿತರಕರ ಹಿತರಕ್ಷಣಾ ಸಂಘದ ಅಧ್ಯಕ್ಷ ಜೆ ಬಿ ಕುಮಾರ್, ಪಡಿತರ ವಿತರಣೆಯನ್ನು ನಂಬಿಕೊಂಡು ಮಂದಿಗೆ ಸರ್ಕಾರದ ನಡೆಯಿಂದ ಆರ್ಥಿಕ ಸಂಕಷ್ಟ ಎದುರಾಗಿದೆ. ತಮ್ಮ ಸಮಸ್ಯೆಯನ್ನು ಸಚಿವರು ಮತ್ತು ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಒಂದೆರಡು ತಿಂಗಳು ಅಂತ ಹೇಳಿ DBT ಮುಂದುವರೆಸಿಕೊಂಡು ಬರಲಾಗಿದೆ. ಈ ಸಂಬಂಧ ಸರ್ಕಾರ ಕ್ರಮವಹಿಸದೆ ಇದ್ದರೆ, ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.‌

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...