ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಇಂದು ಕೋರಮಂಗಲದ ಪಬ್ ಒಂದರಲ್ಲಿ ಇದ್ದಕ್ಕಿದ್ದ ಹಾಗೇ ಕಾಣಿಸಿಕೊಂಡ ಬೆಂಕಿ, ಐದು ಅಂತಸ್ತಿನ ಕಟ್ಟಡ ಧಗಧಗನೇ ಉರಿದಿದೆ. 20 ಸಿಲಿಂಡರ್ ಸ್ಪೋಟದಿಂದಾಗಿ ಕಟ್ಟಡದಲ್ಲಿ ದಟ್ಟ ಹೊಗೆ ಆಕ್ರಮಿಸಿಕೊಂಡಿತ್ತು. ಪ್ರಾಣ ಉಳಿಸಿಕೊಳ್ಳುವುದಕ್ಕೆ ಕಟ್ಟಡದ ಮೇಲಿಂದ ಪಬ್ ಸಿಬ್ಬಂದಿ ಕೆಳಗೆ ಜಿಗಿದೇ ಬಿಟ್ಟಿದ್ದಾನೆ.
ಐದು ಅಂತಸ್ತಿನ ಕಟ್ಟಡದಿಂದ ಜಿಗಿಯುವುದು ಅಂದ್ರೆ ಸುಮ್ನೆನಾ ಆದರೆ ಪ್ರೇಮ್ ಎಂಬ ಸಿಬ್ಬಂದಿ ಕೆಳಕ್ಕೆ ಜಿಗಿದಿದ್ದಾನೆ. ಪಾಪ ಬೆಂಕಿ ನೋಡಿದ ಗಾಬರಿಗೆ, ಮಹಡಿಯಿಂದ ಕೆಳಗೆ ಜಿಗಿದವನಿಗೆ ಗಂಭೀರ ಗಾಯಗಳಾಗಿದೆ. ಇದರಿಂದಾಗಿ ಕೈಕಾಲು ಡ್ಯಾಮೇಜ್ ಆಗಿದೆ. ಗಂಭೀರ ಸ್ಥಿತಿಯಲ್ಲಿರುವ ಪ್ರೇಮ್ ಗೆ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಇದೆ ಕಟ್ಟಡದಲ್ಲಿದ್ದ ವಾಹನಗಳಿಗೂ ಹಾನಿಯಾಗಿದೆ. ಕಟ್ಟಡದ ಕೆಳಗೆ ನಿಂತಿದ್ದ ನೆಕ್ಸಾ ಕಾರುಗಳು, ಬೈಕ್ ಬೆಂಕಿಗೆ ಆಹುತಿಯಾಗಿದೆ. ಸದ್ಯ ಕಟ್ಟಡಕ್ಕೆ ಹೊತ್ತಿದ್ದ ಬೆಂಕಿಯನ್ನು ಅಗ್ನಿಶಾಮಕ ಸಿಬ್ಬಂದಿ ನಂದಿಸಿದ್ದಾರೆ. ಒಬ್ ಗೆ ಲೈಸೆನ್ಸ್ ಇಲ್ಲ ಎಂಬ ಆರೋಪ ಕೇಳಿ ಬರುತ್ತಾ ಇದೆ. ಇದರ ನಡುವೆ ದೊಡ್ಡ ಅನಾಹುತ ತಪ್ಪಿದೆ ಎಂಬುದೇ ಸಮಾಧಾನಕರವಾಗಿದೆ. ಆದರೆ ಪಬ್ ಗೆ ಬೆಂಕಿ ಹತ್ತಿದ್ದನ್ನು ಕಂಡ ಜನ ಗಾಬರಿಯಾಗಿದ್ದಾರೆ. ನೋಡ ನೋಡುತ್ತಲೇ ದಟ್ಟ ಹೊಗೆ ಆವರಿಸಿಕೊಂಡಿದ್ದನ್ನು ಕಂಡು ಜನ ಆ ಕಡೆಗೆ ಸುಳಿಯುತ್ತಲೆ ಇಲ್ಲ. ಆದರೆ ಪ್ರಾಣ ಉಳಿಸಿಕೊಳ್ಳಲು ಮೇಲಿಂದ ಬಿದ್ದ ಯುವಕ ಈಗ ಪ್ರಾಣಾಪಾಯದಲ್ಲಿಯೇ ಇರುವುದು ದುರಂತ. ಆದಷ್ಟು ಬೇಗ ಗಾಯಾಳು ಪ್ರೇಮ್ ಗುಣಮುಖರಾಗಲಿ ಎಂದೇ ಹಾರೈಸುತ್ತಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್