Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟು ಹೋಗ್ತಾರಾ..? : ಕಾಂಗ್ರೆಸ್ ಮುಂದಿನ ನಡೆ ಏನು..?

Facebook
Twitter
Telegram
WhatsApp

 

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದರೂ. ಇಲ್ಲಿಯೂ ಸೋಲು ಕಂಡರು. ಆದರೆ ಕಾಂಗ್ರೆಸ್ ನಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಗೌರವಯುತವಾಗಿಯೇ ಕಾಣುತ್ತಿದ್ದಾರೆ. ಪ್ರಾಶಸ್ತ್ಯ ನೀಡುತ್ತಿದ್ದಾರೆ. ಇತ್ತಿಚೆಗಷ್ಟೇ ಬಿಜೆಪಿಯ ಒಂದಷ್ಟು ಮಂದಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿಯೇ ಕಾಂಗ್ರೆಸ್ ಕೂಡ ಸೇರಿದ್ದಾರೆ. ಇದರ ನಡುವೆ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆಯುತ್ತಾರೆ ಎಂಬ ಮಾತು ಕೇಳಿ ಬರುತ್ತಾ ಇದೆ.

ಈ ವಿಚಾರ ಹೈಕಮಾಂಡ್ ಗಮನಕ್ಕೂ ಬಂದಿದೆ. ಲೋಕಸಭಾ ಚುನಾವಣೆ ಹತ್ತಿರದಲ್ಲಿಯೇ ಇದೆ. ಹೀಗಾಗಿ ಸಣ್ಣ ಮಿಸ್ಟೇಕ್ ಪಕ್ಷಕ್ಕೆ ದೊಡ್ಡ ಡ್ಯಾಮೇಜ್ ಆಗಲಿದೆ. ಅಲರ್ಟ್ ಆಗಿರುವ ಕಾಂಗ್ರೆಸ್ ನಾಯಕರು, ಶೆಟ್ಟರ್ ಉಳಿಸಿಕೊಳ್ಳಲು ಚಿಂತನೆ ನಡೆಸುತ್ತಿದ್ದಾರೆ. ಜಗದೀಶ್ ಶೆಟ್ಟರ್ ಜೊತೆಗೆ‌ ಲಕ್ಷ್ಮಣ ಸವದಿಗೂ ದೊಡ್ಡ ಜವಬ್ದಾರಿ ಕೊಡಲು ಸಿದ್ಧವಾಗಿದ್ದಾರೆ.

ಈ ಬಾರಿಯ ಲೋಕಸಭ ಚುನಾವಣೆ ಎರಡು ಪಕ್ಷಕ್ಕೂ ಪ್ರತಿಷ್ಠೆಯಾಗಿದೆ. ಯಾಕಂದ್ರೆ ಬಿಜೆಪಿ ಸೋಲಿಸಲು ಇಂಡಿಯಾ ಮೈತ್ರಿಕೂಟ ಒಂದಾಗಿದೆ. ಇತ್ತ ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಸಲು ಜೆಡಿಎಸ್ ಮತ್ತು ಬಿಜೆಪಿ ಒಂದಾಗಿದೆ. ಹೀಗಾಗಿ ಲೋಕಸಭಾ ಚುನಾವಣೆ ಕಣ ಬಿಸಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್, ಬಿಜೆಪಿಯ ಮತಬ್ಯಾಂಕ್ ಗೆ ಕೈ ಹಾಕಲು ಹೊರಟಿದೆ. ಅಂದ್ರೆ ಲಿಂಗಾಯತ ಪತಗಳನ್ನು ಸೆಳೆಯುವ ಪ್ರಯತ್ನ ಇದಾಗಿದೆ. ಅದಕ್ಕಾಗಿಯೇ ಜಗದೀಶ್ ಶೆಟ್ಟರ್ ಅವರಿಗೆ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡಲು ಮುಂದಾಗಿದೆ. ಲಕ್ಷ್ಮಣ್ ಸವದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನೀಡಲು ಚಿಂತನೆ ನಡೆಸಿದೆ. ಇದಕ್ಕೆ ಇಬ್ಬರ ಸಮ್ಮತಿಯೂ ಸಿಕ್ಕಿದ್ದು, ಈ ಮೂಲಕ ಕಾಂಗ್ರೆಸ್ ಲಿಂಗಾಯತ ಮತ ಸೆಳೆಯುವುದಕ್ಕೆ ಹೊರಟಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!