Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಅಕ್ಟೋಬರ್ 21ರಂದು ಶಿಕ್ಷಕರ ಸ್ಥಳ ನಿಯುಕ್ತಿ ಕೌನ್ಸಿಲಿಂಗ್

Facebook
Twitter
Telegram
WhatsApp

 

ಚಿತ್ರದುರ್ಗ.ಅಕ್ಟೋಬರ್.19: ಪದವೀಧರ ಪ್ರಾಥಮಿಕ ಶಿಕ್ಷಕರ (6-8ನೇ ತರಗತಿ) ನೇಮಕಾತಿ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಇದೇ ಅಕ್ಟೋಬರ್ 21ರಂದು ಚಿತ್ರದುರ್ಗ ನಗರದ ಜಿಲ್ಲಾ ಉಪನಿರ್ದೇಶಕರ ಕಚೇರಿ ಆವರಣದ ಎಸ್.ಎಸ್.ಎ ಸಭಾಂಗಣದಲ್ಲಿ ನಡೆಯಲಿದೆ.

ಪದವೀಧರ ಪ್ರಾಥಮಿಕ ಶಿಕ್ಷಕರ (06 ರಿಂದ 08ನೇ ತರಗತಿ) ನೇಮಕಾತಿ 2022ರ ನೇಮಕಾತಿಗೆ ಸಂಬಂಧಿಸಿದಂತೆ 2023ರ ಮಾರ್ಚ್ 8ರಂದು ಪ್ರಕಟಿಸಲಾಗಿರುವ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಿಲಿಂಗ್‍ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ಅಕ್ಟೋಬರ್ 19ರಂದು ಶಾಲಾ ಶಿಕ್ಷಣ ಇಲಾಖೆಯ ವೆಬ್‍ಸೈಟ್ https://schooleducation.karnataka.giv.in  ನಲ್ಲಿ ಪ್ರಕಟಿಸಲಾಗುತ್ತದೆ.

ಈ ಪಟ್ಟಿಯಲ್ಲಿನ ಅಭ್ಯರ್ಥಿಗಳ ಕ್ರಮವಾಗಿ ಗಣಿತ & ವಿಜ್ಞಾನ, ಸಮಾಜ ವಿಜ್ಞಾನ, ಜೀವವಿಜ್ಞಾನ ಮತ್ತು ಆಂಗ್ಲಭಾಷಾ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸಿಲಿಂಗ್‍ನ್ನು ಇದೇ ಅಕ್ಟೋಬರ್ 21ರಂದು ಉಪನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆ, ಚಿತ್ರದುರ್ಗ ಜಿಲ್ಲೆ ಇಲ್ಲಿನ ಕಛೇರಿ ಆವರಣದ ಎಸ್.ಎಸ್.ಎ ಸಭಾಂಗಣದಲ್ಲಿ ಬೆಳಿಗ್ಗೆ 10.30 ರಿಂದ ಕೌನ್ಸಿಲಿಂಗ್ ಮುಗಿಯುವವರೆಗೆ ಇಲಾಖೆ ವೆಬ್ ಸೈಟ್‍ನಲ್ಲಿರುವಂತೆ 1:1 ಆಯ್ಕೆ ಪಟ್ಟಿಯಲ್ಲಿರುವ ಎಲ್ಲಾ ಅಭ್ಯರ್ಥಿಗಳಿಗೆ ನಡೆಸಲಾಗುವುದು.

ಅಭ್ಯರ್ಥಿಗಳು ಭಾವಚಿತ್ರವಿರುವ ಗುರುತಿನ ಚೀಟಿ ಮತ್ತು ನೇಮಕಾತಿಗೆ ಸಂಬಂಧಪಟ್ಟಂತೆ ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಾಗುವುದು.

ಹೆಚ್ಚಿನ ವಿವರಗಳಿಗೆ .ಕೆ.ರವಿಶಂಕರರೆಡ್ಡಿ, ಉಪನಿರ್ದೇಶಕರು (ಆಡಳಿತ) ಇವರ ದೂರವಾಣಿ ಸಂಖ್ಯೆ 9448999336, ನೋಡಲ್ ಅಧಿಕಾರಿ ಸಿದ್ದಪ್ಪ ದೂರವಾಣಿ ಸಂಖ್ಯೆ 7483662424, ಅಧೀಕ್ಷಕ ಮಲ್ಲಿಕಾರ್ಜುನ ದೂರವಾಣಿ ಸಂಖ್ಯೆ  9591516171,  ವಿಷಯ ನಿರ್ವಾಹಕ ಬಿ.ಶಿವಶಂಕರ ದೂರವಾಣಿ ಸಂಖ್ಯೆ 9845564258 ಕ್ಕೆ ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರರೆಡ್ಡಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

ಚಿತ್ರದುರ್ಗ | ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ : 100 ಕ್ಕೆ 100 ಫಲಿತಾಂಶ ಪಡೆದ 13 ಶಾಲೆಗಳು

ಸುದ್ದಿಒನ್, ಚಿತ್ರದುರ್ಗ, ಮೇ. 09 :   ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 35 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ ವಸತಿ ಶಾಲೆಗಳ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ

error: Content is protected !!