Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಸಚಿವರ ಹೆಸರು ರೆಕಾರ್ಡ್ ಮಾಡಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ..!

Facebook
Twitter
Telegram
WhatsApp

 

 

ಕಲಬುರಗಿ: ಕಾಂಗ್ರೆಸ್ ಕಾರ್ಯಕರ್ತರ ಕಿರುಕುಳಕ್ಕೆ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶಿರೋಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ. ‘ನನ್ನ ಸಾವಿಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಚಿವ ಶರಣ ಪ್ರಕಾಶ್ ಪಾಟೀಲ್ ಕಾರಣ’ ಎಂದು ಆಡಿಯೋ ರೆಕಾರ್ಡ್ ಮಾಡಿಟ್ಟು ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿ‌ ಮಾಡಿದ್ದ ಆಡಿಯೋದಲ್ಲಿ, ನಾನು ಹಿಂದೂ ಹುಲಿಯಾಗಿದ್ದೇನೆ. ಹಿಂದೂ ಹುಲಿಯಾಗಿಯೇ ಸಾಯುತ್ತೇನೆ. ಡಾ. ಶರಣ ಪ್ರಕಾಶ್ ಹಿಂದೂ ಧರ್ಮದ ಬಗ್ಗೆ ಮಾತನಾಡಬಾರದು. ಮಾತನಾಡಿದರೆ ಇವರಿಗೆ ಬೆಂಕಿ ಬೀಳುತ್ತದೆ ಎಂದು ಆಡಿಯೋ ರೆಕಾರ್ಡ್ ಮಾಡಿದ್ದಾರೆ. ಶಿವಕುಮಾರ್ ಆತ್ಮಹತ್ಯೆಗೂ ಮುನ್ನ ಕಾಂಗ್ರೆಸ್ ನವರ ಹೆಸರನ್ನು ಹೇಳಿರುವುದಕ್ಕೆ ಬಿಜೆಪಿ ನಾಯಕರು ಗರಂ ಆಗಿದ್ದಾರೆ.

ಈ ಸಂಬಂಧ ಕೇಂದ್ರ ಸಚಿವ ಭಗವಂತ ಖೂಬಾ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ, ಅನೇಕ ದೌರ್ಜನ್ಯಗಳು ನಡೆಯುತ್ತಿವೆ. ಧರ್ಮಕ್ಕಾಗಿ ಹೋರಾಟ ಮಾಡುವವರ ಹತ್ತಿಕ್ಕುವ ಕೆಲಸವಾಗುತ್ತಿದೆ. ಶಿವಕುಮಾರ್ ತನ್ನ ಸಾವಿಗೆ ಕಾರಣವಾದವರ ಬಗ್ಗೆಯೂ ಆಡಿಯೋ ರೆಕಾರ್ಡ್ ಮಾಡಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿಯಾಗಿರುವ ಪ್ರಿಯಾಂಗ್ ಖರ್ಗೆ ಒಂದು ಮಾತು ಆಡುತ್ತಿಲ್ಲ.‌ ಈ ಸಾವಿನ ನೈತಿಕ ಹೊಣೆಹೊತ್ತು, ಸಚಿವ ಡಾ ಶರಣ ಪ್ರಕಾಶ್ ಪಾಟೀಲ್ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!