Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಬಾರದಂತೆ ನೋಡಿಲೊಳ್ಳಿ : ಜಿಕೆ ಹೊನ್ನಯ್ಯ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್.20 : ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉದ್ಭವವಾಗದಂತೆ ನೋಡಿಕೊಳ್ಳಬೇಕು. ಸಭೆಗೆ ಬಾರದ ಪಿಡಿಒ ಹಾಗೂ ಇಂಜಿಯರ್‌ಗಳಿಗೆ ನೋಟಿಸ್ ಜಾರಿ ಮಾಡುವಂತೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಜಿಕೆ ಹೊನ್ನಯ್ಯ ಸೂಚಿಸಿದರು.

ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪಿಡಿಒ , ಕಂಪ್ಯೂಟರ್ ಆಪರೇಟರ್ ಹಾಗೂ ಇಂಜಿನಿಯರ್‌ಗಳಿಗೆ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ದ ಗರಂ ಆದರು.
ತಾಲೂಕಿನಲ್ಲಿ ಮಳೆ ಅಭಾವದಿಂದಾಗಿ ಕುಡಿಯುವ ನೀರಿಗೆ ಆ ಭಾವ ಉಂಟಾಗಬಹುದು ಪಿ ಡಿ ಓ ಗಳು ತಮ್ಮ ತಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು.ಕಚೇರಿಗಳಿಗೆ ಹೋಗದೆ ಜನರ ಸಂಪರ್ಕಕ್ಕೂ ಸಿಗದೆ ಕೆಲಸ ಮಾಡದೆ ಜನರನ್ನು ಅಲೆದಾಡಿಸುತ್ತಿರುವ ದೂರುಗಳು ಕೇಳಿ ಬಂದಿವೆ.ಇಂದು ಪ್ರಗತಿ ಪರಿಶೀಲನಾ ಸಭೆ ಮಾಹಿತಿ ಇದ್ದರೂ ಪ್ರಗತಿ ವರದಿಯನ್ನು ತರದೆ ಕೈಬೀಸಿಕೊಂಡು ಬಂದಿದ್ದೀರಿ. ವರದಿ ನೀಡಿದರೆ ತಾಳೆಯಾಗುತ್ತಿಲ್ಲ ನುಣುಚಿಕೊಳ್ಳಲು ತಪ್ಪು ಮಾಹಿತಿಯನ್ನು ನೀಡದೆ ನಿಖರವಾದ ಮಾಹಿತಿ ನೀಡ ಬೇಕು. ಕೆಲ ಪಿಡಿಒಗಳಿಂದ ಬೇರೆ ಬೇರೆ ಪಿಡಿಗಳಿಗೆ ಕೆಟ್ಟ ಹೆಸರು ಬರುತ್ತದೆ. ಕಚೇರಿಯಲ್ಲಿ ಕೂತು ಸರ್ಕಾರದಿಂದ ಬಂದ ಅನುದಾನದಿಂದ ಗ್ರಾಮೀಣ ಜನರಿಗೆ ಅರ್ಹ ಫಲಾನುಭವಿವಿಗಳಿಗೆ ತಲುಪಿಸುವ ಕೆಲಸ ಆಗಬೇಕು.

ನರೇಗಾ ಯೋಜನೆಯಡಿಯಲ್ಲಿ ಕ್ರಿಯಾಯೋಜನೆ ಮಾಡಿಕೊಂಡು ಪುಸ್ತಕದಲ್ಲಿಟ್ಟುಕೊಂಡರೆ ಸಾಲದು. ದುಡಿಯುವ ಕೈಗಳಿಗೆ ಕೆಲಸ ನೀಡುವ ಮೂಲಕ ಮಾನವ ದಿನಗಳನ್ನು ಹೆಚ್ಚಿಸಿ ಕಾರ್ಮಿಕರನ್ನು ಗುಳೆ ಹೋಗುವುದನ್ನು ತಪ್ಪಿಸ ಬೇಕು. ಮಳೆಯಿಲ್ಲದೆ ಗ್ರಾಮೀಣ ಜನರು ಸಂಕಷ್ಟ ಕೊಳಗಾಗಿದ್ದಾರೆ.

ನರೇಗಾ ಕ್ರಿಯಾ ಯೋಜನೆ, ನರೇಗಾ ಜಾಬ್ ಕಾರ್ಡ್ಗಳಿಗೆ ಆಧಾರ್ ಸೀಡ್, 15 ನೇ ಹಣಕಾಸು ಕ್ರಿಯಾಯೋಜನೆ, ವಿಶ್ವಕರ್ಮ ಯೋಜನೆ,ಕೂಲಿನ ಮನೆ, ವಸತಿ ಯೋಜನೆ, ಬಿಕ್ಷಕರ ಕರ ಪಾವತಿ, ಡಿಸಿಬಿ ಸಂಗ್ರಹ, ಇ-ಹಾಜರಾತಿ, ವ್ಯಾಲೆಟ್ ರೀಚಾರ್ಜ್, ಸೇರಿಂದ ವಿವಿಧ ಯೋಜನೆಗಳನ್ನು ನಿವಗಧಿತ ಸಮಯದೊಳಗೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಇಂನಿಯರ್‌ಗಳು ಸಭೆಗೆ ಗೈರು ಹಾಜರಿಯಾಗಿರುವುದನ್ನು ಕಂಡು ತಾಲೂಕು ತಾಂತ್ರಿಕ ಆಧಿಕಾರಿ ಇಂಜಿನಯರ್‌ಗಳನ್ನು ಕಂಟೋಲ್ ಇಟ್ಟುಕೊಳ್ಳಲು ಆಗದೆ ಏನು ಕರ್ತವ್ಯ ನಿರ್ವಹಿಸುತ್ತೀರಿ ಎಂದು ಗರಂ ಆದರು.

ಸಭೆಯಲ್ಲಿ ನರೇಗಾ ಸಹಾಯಕ ನಿರ್ದೇಶಕ ಸಂತೋಷ್.ಪಿಆರ್ ಡಿ ಸಹಾಯಕ ನಿರ್ದೇಶಕ ಸಂಪತ್ ಕಚೇರಿ ವ್ಯವಸ್ಥಾಪಕ ಪ್ರಭಾಕರ್ ಹಾಗೂ ಗ್ರಾಮ ಪಂಚಾಯತಿಯ ಪಿಡಿಒಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೈರುತ್ಯ ಪದವೀಧರ ಚುನಾವಣೆ : ಬಂಡಾಯವೆದ್ದ ರಘುಪತಿ ಭಟ್ ಗೆ ಬೆಂಬಲ ನೀಡಿದ ಈಶ್ವರಪ್ಪ

ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಹಾಗೂ ರಘುಪತಿ ಭಟ್ ಇಬ್ಬರು ಈಗ ಒಂದೇ ದೋಣಿಯ ಪಯಣಗಿರು. ಯಾಕಂದ್ರೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಈಶ್ವರಪ್ಪ ಅವರು ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ.

ನಮ್ಮ ವಿದ್ಯಾಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ : ಡಾ.ಕೆ.ಎಂ.ವಿರೇಶ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಮೇ. 21:  ನನ್ನ ವಿದ್ಯಾ ಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಾಧ್ಯವಾದಷ್ಟು ಉಚಿತವಾದ ಶಿಕ್ಷಣವನ್ನು ನೀಡಲಾಗುವುದು

ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಕೊಡಬೇಕೆಂಬ ಪರಿಕಲ್ಪನೆ ರಾಜೀವ್‍ಗಾಂಧಿಯವರಲ್ಲಿತ್ತು : ಕೆ. ಅನಂತ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 21: ತಳಮಟ್ಟದಿಂದ ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಕೊಡಬೇಕೆಂಬ ಪರಿಕಲ್ಪನೆ ರಾಜೀವ್‍ಗಾಂಧಿಯವರಲ್ಲಿತ್ತು ಎಂದು ಜಿಲ್ಲಾ ಕಾಂಗ್ರೆಸ್

error: Content is protected !!