ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ರಾಜ್ಯದಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಉತ್ತಮ ಆಡಳಿತ ನಡೆಸುತ್ತಿದೆ. ಸದ್ಯಕ್ಕೆ ಅವರಮುಂದಿರುವ ಟಾರ್ಗೆಟ್ ಲೋಕಸಭಾ ಚುನಾವಣೆ. ಇದಕ್ಕಾಗಿ ಈಗಾಗಲೇ ಬಾರೀ ತಯಾರಿಯನ್ನು ನಡೆಸುತ್ತಿದೆ. ಇದಕ್ಕೆ ವಿರುದ್ಧವಾಗಿ ಬಿಜೆಪಿ ಕೂಡ ಪಣ ತೊಟ್ಟಿದೆ. ಕಾಂಗ್ರೆಸ್ ಸೋಲಿಸಿ, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂಬ ಪ್ರತಿಷ್ಠೆ. ಹೀಗಾಗಿ ಆಡಳಿತ ಪಕ್ಷದ ಜುಟ್ಟು ಹಿಡಿಯಲು ಇರುವ ದಾರಿಯನ್ನ ಸ್ವಪಕ್ಷದವರೇ ಮಾಡುತ್ತಿದ್ದಾರೆ. ಈ ಕಾರಣಕ್ಕಾಗಿಯೇ ಡಿಕೆ ಶಿವಕುಮಾರ್ ಎಚ್ಚರಿಕೆಯನ್ನು ರವಾನಿಸಿದ್ದಾರೆ.ಪಲ
ಇತ್ತಿಚೆಗೆ ಸತೀಶ್ ಜಾರಕಿಹೊಳಿ ಪಕ್ಷದ ಬಗ್ಗೆ ಮಾತನಾಡಿದ್ದರು. ಕಾಂಪ್ರೂಮೈಸ್ ಆಗಿದ್ದೇನೆ. ಅದು ನನ್ನ ದೌರ್ಬಲ್ಯ ಅಲ್ಲ ಎಂದು ಡಿಕೆಶಿ ವಿರುದ್ಧ ಹರಿಹಾಯ್ದಿದ್ದರು. ಇನ್ನು ಲಕ್ಷ್ಮೀ ಹೆಬ್ಬಾಳ್ಕರ್ ಕೂಡ, ಬೆಳಗಾವಿಗೆ ಬಂದ ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಕ್ಕೆ ಶಾಸಕರು ಹೋಗಬೇಕಿತ್ತು. ಆದರೆ ನನ್ನ ಮೌನ ದೌರ್ಬಲ್ಯ ಅಲ್ಲ ಅಂತ ಹೇಳಿದ್ದರು. ಈ ಮೂಲಕ ಕಾಂಗ್ರೆಸ್ ವಿರುದ್ಧ ವಿಪಕ್ಷದವರಿಗಿಂತ ಸ್ವಪಕ್ಷದವರೇ ಮಾತನಾಡುತ್ತಿದ್ದರು.
ಈ ಸಂಬಂಧ ಎಚ್ಚರಿಕೆ ನೀಡಿರುವ ಡಿಕೆ ಶಿವಕುಮಾರ್, ಯಾರೂ ಪಕ್ಷದ ಬಗ್ಗೆ ಮಾತನಾಡಬಾರದು. ಬಹಿರಂಗವಾಗಿ ಹೇಳಿಕೆಗಳನ್ನು ನೀಡಬಾರದು. ಮಾತನಾಡಲು ನಾನು ಮತ್ತು ಸಿದ್ದರಾಮಯ್ಯ ಇದ್ದೇವೆ ಎಂದಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆಗೆ ಹೊಡೆತ ಬೀಳುವುದನ್ನು ತಪ್ಪಿಸಿದ್ದಾರೆ. ಸ್ವಪಕ್ಷದವರೇ ಮಾತನಾಡಿದಾಗ ಪಕ್ಷಕ್ಕೆ ಡ್ಯಾಮೇಜ್ ಆಗುವ ಸಾಧ್ಯವಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್