Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ವರ್ತೂರು ಸಂತೋಷ್ ಅರೆಸ್ಟ್ : ಹುಲಿ ಉಗುರು ಎಂದು ದೂರು ಕೊಟ್ಟವರು ಯಾರು..?

---Advertisement---

 

 

ಬಿಗ್ ಬಾಸ್ ಸೀಸನ್ 10 ಈಗ ಕಾಂಪಿಟೇಷನ್ ಮೂಲಕ ನಡೆಯುತ್ತಿದೆ. ಹೊಸ ಹೊಸ ಟಾಸ್ಕ್ ಗಳನ್ನು ನೀಡುವುದರ ಮೂಲಕ ಬಿಗ್ ಬಾಸ್ ಮಂದಿ ಸೀರಿಯಸ್ ಆಗಿದ್ದಾರೆ. ಇದರ ಮಧ್ಯೆ ವರ್ತೂರು ಸಂತೋಷ್ ಪೊಲೀಸರ ಅತಿಥಿಯಾಗಿದ್ದಾರೆ. ಬಿಗ್ ಬಾಸ್ ಮನೆಗೆ ಬಂದಾಗ ವರ್ತೂರು ಸಂತೋಷ್ ಮೈತುಂಬಾ ಒಡವೆಗಳನ್ನು ಹಾಕಿಕೊಂಡು ಬಂದಿದ್ದರು. ಮನೆಯೊಳಗೂ ಅದೇ ಒಡವೆಗಳನ್ನೇ ಹಾಕಿಕೊಂಡು ಇರುತ್ತಿದ್ದರು. ಆದರೆ ಅದರಲ್ಲಿ ಹುಲಿ ಉಗುರು ಇರುವುದನ್ನೇ ಮರೆತಿದ್ದಾರೆ ಎನಿಸುತ್ತದೆ. ಈಗ ಅರಣ್ಯಾಧಿಕಾರಿಗಳ ಕಣ್ಣಿಗೆ ಅದೇ ಉಗುರು ಬಿದ್ದಿದ್ದು, ಅರೆಸ್ಟ್ ಮಾಡಿದ್ದಾರೆ.

 

ಆರೋಪ ಸಾಬೀತಾದ್ರೆ 3 ರಿಂದ 7 ವರ್ಷ ಜೈಲು ಶಿಕ್ಷೆ ನೀಡುವುದಕ್ಕೆ ಅವಕಾಶವಿದೆ. ವರ್ತೂರು ಪ್ರಕಾಶ್ ಧರಿಸಿರುವುದು ಅಸಲಿ ಹುಲಿ ಉಗುರು. ವನ್ಯಜೀವಿಗಳ ಅಂಗಾಂಗವನ್ನು ಯಾರು ಬಳಸಬಾರದು. ಮತ್ತೊಮ್ಮೆ ದೃಢಪಡಿಸಿಕೊಳ್ಳಲು ಉಗುರನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಡಿಸಿಎಫ್, ರವೀಂದ್ರ ಕುಮಾರ್ ಹೇಳಿದ್ದಾರೆ.

ದೂರನ್ನು ಯಾರಾದರೂ ನೀಡಿದ್ದಾರಾ ಎಂಬ ಪ್ರಶ್ನೆ ಎಲ್ಲರನ್ನು ಕಾಡಿದೆ. ಈ ಬಗ್ಗೆ ರವೀಂದ್ರ ಕುಮಾರ್ ಅವರು ಹೇಳುವ ಮೂಲಕ, ನಮ್ಮ ಮೇಲಾಧಿಕಾರಿಗಳು ಇದರ ಬಗ್ಗೆ ತನಿಖೆ ಮಾಡಲು ಹೇಳಿದರು. ಅದು ಹುಲಿ ಉಗುರಿನಂತೆ ಇದ್ದ ಕಾರಣ, ವರ್ಜಿನಲ್ ಇರಬಹುದಾ ಎಂಬುದನ್ನು ತನಿಖೆ ನಡೆಸಲು ತಿಳಿಸಿದ್ದರು. ಹೀಗಾಗಿ ತನಿಖೆ ಮಾಡಿದಾಗ ಅದರ ನಿಜಾಂಶ ಹೊರಗೆ ಬಂದಿದೆ ಎಂದಿದ್ದಾರೆ. ಹಳ್ಳಿಕಾರ್ ಸಂತೋಷ್ ಎಂದೇ ಖ್ಯಾತಿ ಪಡೆದಿದ್ದ ಸಂತೋಷ್, ತಳಿ ಹಸುಗಳನ್ನು ಸಾಕುವ ಮೂಲಕ ಖ್ಯಾತಿ ಪಡೆದಿದ್ದರು. ಬಿಗ್ ಬಾಸ್ ಮನೆಗೆ ಹೋಗಿದ್ದ ಸಂತೋಷ್ ಅಲ್ಲಿಯೂ ಚಿನ್ನಾಭರಣಗಳನ್ನು ಹಾಕಿಕೊಂಡೇ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...