Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವರ್ತೂರು ಸಂತೋಷ್ ಅರೆಸ್ಟ್ : ಹುಲಿ ಉಗುರು ಎಂದು ದೂರು ಕೊಟ್ಟವರು ಯಾರು..?

Facebook
Twitter
Telegram
WhatsApp

 

 

ಬಿಗ್ ಬಾಸ್ ಸೀಸನ್ 10 ಈಗ ಕಾಂಪಿಟೇಷನ್ ಮೂಲಕ ನಡೆಯುತ್ತಿದೆ. ಹೊಸ ಹೊಸ ಟಾಸ್ಕ್ ಗಳನ್ನು ನೀಡುವುದರ ಮೂಲಕ ಬಿಗ್ ಬಾಸ್ ಮಂದಿ ಸೀರಿಯಸ್ ಆಗಿದ್ದಾರೆ. ಇದರ ಮಧ್ಯೆ ವರ್ತೂರು ಸಂತೋಷ್ ಪೊಲೀಸರ ಅತಿಥಿಯಾಗಿದ್ದಾರೆ. ಬಿಗ್ ಬಾಸ್ ಮನೆಗೆ ಬಂದಾಗ ವರ್ತೂರು ಸಂತೋಷ್ ಮೈತುಂಬಾ ಒಡವೆಗಳನ್ನು ಹಾಕಿಕೊಂಡು ಬಂದಿದ್ದರು. ಮನೆಯೊಳಗೂ ಅದೇ ಒಡವೆಗಳನ್ನೇ ಹಾಕಿಕೊಂಡು ಇರುತ್ತಿದ್ದರು. ಆದರೆ ಅದರಲ್ಲಿ ಹುಲಿ ಉಗುರು ಇರುವುದನ್ನೇ ಮರೆತಿದ್ದಾರೆ ಎನಿಸುತ್ತದೆ. ಈಗ ಅರಣ್ಯಾಧಿಕಾರಿಗಳ ಕಣ್ಣಿಗೆ ಅದೇ ಉಗುರು ಬಿದ್ದಿದ್ದು, ಅರೆಸ್ಟ್ ಮಾಡಿದ್ದಾರೆ.

 

ಆರೋಪ ಸಾಬೀತಾದ್ರೆ 3 ರಿಂದ 7 ವರ್ಷ ಜೈಲು ಶಿಕ್ಷೆ ನೀಡುವುದಕ್ಕೆ ಅವಕಾಶವಿದೆ. ವರ್ತೂರು ಪ್ರಕಾಶ್ ಧರಿಸಿರುವುದು ಅಸಲಿ ಹುಲಿ ಉಗುರು. ವನ್ಯಜೀವಿಗಳ ಅಂಗಾಂಗವನ್ನು ಯಾರು ಬಳಸಬಾರದು. ಮತ್ತೊಮ್ಮೆ ದೃಢಪಡಿಸಿಕೊಳ್ಳಲು ಉಗುರನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಡಿಸಿಎಫ್, ರವೀಂದ್ರ ಕುಮಾರ್ ಹೇಳಿದ್ದಾರೆ.

ದೂರನ್ನು ಯಾರಾದರೂ ನೀಡಿದ್ದಾರಾ ಎಂಬ ಪ್ರಶ್ನೆ ಎಲ್ಲರನ್ನು ಕಾಡಿದೆ. ಈ ಬಗ್ಗೆ ರವೀಂದ್ರ ಕುಮಾರ್ ಅವರು ಹೇಳುವ ಮೂಲಕ, ನಮ್ಮ ಮೇಲಾಧಿಕಾರಿಗಳು ಇದರ ಬಗ್ಗೆ ತನಿಖೆ ಮಾಡಲು ಹೇಳಿದರು. ಅದು ಹುಲಿ ಉಗುರಿನಂತೆ ಇದ್ದ ಕಾರಣ, ವರ್ಜಿನಲ್ ಇರಬಹುದಾ ಎಂಬುದನ್ನು ತನಿಖೆ ನಡೆಸಲು ತಿಳಿಸಿದ್ದರು. ಹೀಗಾಗಿ ತನಿಖೆ ಮಾಡಿದಾಗ ಅದರ ನಿಜಾಂಶ ಹೊರಗೆ ಬಂದಿದೆ ಎಂದಿದ್ದಾರೆ. ಹಳ್ಳಿಕಾರ್ ಸಂತೋಷ್ ಎಂದೇ ಖ್ಯಾತಿ ಪಡೆದಿದ್ದ ಸಂತೋಷ್, ತಳಿ ಹಸುಗಳನ್ನು ಸಾಕುವ ಮೂಲಕ ಖ್ಯಾತಿ ಪಡೆದಿದ್ದರು. ಬಿಗ್ ಬಾಸ್ ಮನೆಗೆ ಹೋಗಿದ್ದ ಸಂತೋಷ್ ಅಲ್ಲಿಯೂ ಚಿನ್ನಾಭರಣಗಳನ್ನು ಹಾಕಿಕೊಂಡೇ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಜ್ಯದಲ್ಲಿ ಮುಂದಿನ 6 ದಿನ ಧಾರಾಕಾರ ಮಳೆ : ಹವಮಾನ ಇಲಾಖೆ ಮುನ್ಸೂಚನೆ

    ಬೆಂಗಳೂರು: ರಾಜ್ಯದಾದ್ಯಂತ ಈಗಾಗಲೇ ಮಳೆ ಶಯರುವಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಯಲ್ಲೂ ಜೋರು ಮಳೆ ಬರುತ್ತಿದೆ. ಮುಂದಿನ 6 ದಿನಗಳ ಕಾಲ ಜೋರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು

ವೀರಶೈವ ಸಮಾಜದಿಂದ ಅದ್ದೂರಿಯಾಗಿ ಜರುಗಿದ ಬಸವಜಯಂತಿ ಮೆರವಣಿಗೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ.11 : ಹನ್ನೆರಡನೇ ಶತಮಾನದ ಭಕ್ತಿ ಭಂಡಾರಿ, ಕ್ರಾಂತಿಕಾರಿ, ಮಹಾನ್ ಮಾನವತಾವಾದಿ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ವೀರಶೈವ

ಕೊಡಗಿನಲ್ಲಿ ಬಾಲಕಿಯನ್ನು ಕೊಂದವ ಸತ್ತಿಲ್ಲ ಬದುಕಿದ್ದಾನೆ : ಪೊಲೀಸರ ಅತಿಥಿಯಾದ ಪ್ರಕಾಶ್..!

ಕೊಡಗಿನ ಸೂರ್ಲಬಿಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೀನಾರನ್ನ ಪ್ರಕಾಶ್ ಎಂಬಾತ ರುಂಡ, ಮುಂಡ ಕತ್ತರಿಸಿ ಕ್ರೂರವಾಗಿ ಹತ್ಯೆ ಮಾಡಿದ್ದ. ನಿನ್ನೆಯೇ ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗಿದೆ. ಆದರೆ ಇದೀಗ ಆತ ಸತ್ತಿಲ್ಲ ಬದುಕಿದ್ದಾನೆ ಎಂಬುದು ತಿಳಿದು

error: Content is protected !!