Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯಾಧ್ಯಕ್ಷರಾಗಿ ಆಯ್ಕೆ ವಿಚಾರ : ಶೋಭಾ ಕರಂದ್ಲಾಜೆಗೆ ಅಮಿತ್ ಶಾ ಕರೆ..!

---Advertisement---

 

ಪ್ರತಿ ವರ್ಷದಂತೆ ಮಾವುತರಿಗೆ, ಕಾವಾಡಿಗರಿಗೆ ಉಪಹಾರ ಬಡಿಸುತ್ತಾರೆ. ಈ ವರ್ಷ ಕೂಡ ದಸರಾ ಸಮಯದಲ್ಲಿ ತಾಯಿಯ ದರ್ಶನ ಪಡೆದು, ಮಾವುತರು ಹಾಗೂ ಕಾವಾಡಿಗರಿಗೆ ಊಟ ಬಡಿಸಿದ್ದಾರೆ. ಇದೇ ಸಮಯದಲ್ಲಿ ಶೋಭಾ ಕರಂದ್ಲಾಜೆಗೆ ಅಮಿತ್ ಶಾ ಕಡೆಯಿಂದ ಕರೆ ಬಂದಿದೆ. ಕರೆ ಸ್ವೀಕರಿಸಿದ ಶೋಭಾ ಕರಂದ್ಲಾಜೆ ಖುಷಿಯಾಗಿದ್ದಾರೆ.

ಮಾವುತರಿಗೆ ಊಟ ಬಡಿಸುತ್ತಿದ್ದಾಗ ಕರೆ ಬಂದಿದೆ. ಇಂದು ಶೋಭಾ ಕರಂದ್ಲಾಜೆ ಅವರ ಹುಟ್ಟುಹಬ್ಬ ಕೂಡ. ಇದೇ ಕಾರಣಕ್ಕೆ ಕರೆ ಮಾಡಿದ ಅಮಿತ್ ಶಾ ಶುಭ ಕೋರಿದ್ದಾರೆ. ಇನ್ನು ಮುಂದೆ ಎಲ್ಲವೂ ಒಳ್ಳೆಯದೇ ಆಗುತ್ತದೆ ಎಂದು ವಿಶ್ ಮಾಡಿದ್ದಾರಂತೆ. ಇದು ಶೋಭಾ ಕರಂದ್ಲಾಜೆಯ ಹುಟ್ಟುಹಬ್ಬಕ್ಕೆ ಮತ್ತಷ್ಟು ಖುಷಿ ನೀಡಿದೆ. ರಾಜ್ಯಾಧ್ಯಕ್ಷ ಹುದ್ದೆ ವಿಚಾರ ಚರ್ಚೆ ನಡೆದಿದೆಯಾ ಎಂಬ ಕುತೂಹಲ ಮೂಡಿದೆ

ಬಿಜೆಪಿಯಲ್ಲಿ ಇನ್ನು ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆಯೇ ಆಗಿಲ್ಲ. ಇದರ ನಡುವೆ ಲೋಕಸಭಾ ಚುನಾವಣೆ ಬೇರೆ ಹತ್ತಿರವಾಗುತ್ತಿದೆ. ಹೀಗಾಗಿ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಲೇ ಬೇಕಾಗಿದೆ. ಶೋಭಾ ಕರಂದ್ಲಾಜೆಯನ್ನೆ ರಾಜ್ಯಾಧ್ಯಕ್ಷರನ್ನಾಗಿ ಮಾಡಲು ಹೈಕಮಾಂಡ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಇದರ ಮಧ್ಯೆಯೇ ಅಮಿತ್ ಶಾ ಅವರು ಎಲ್ಲವೂ ಒಳ್ಳೆಯದಾಗುತ್ತೆ ಎಂದು ಶುಭ ಹಾರೈಸಿರುವುದು ಶೋಭಾ ಕರಂದ್ಲಾಜೆಗೆ ಖುಷಿ ನೀಡಿದೆ. ಆದರೆ ಹೈಕಮಾಂಡ್ ನಿಂದ ಯಾವುದೇ ರೀತಿಯ ಮಾಹಿತಿ ಬಂದಿಲ್ಲ ಎಂದೇ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment