Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುಮಾರಸ್ವಾಮಿ ವೆಸ್ಟ್ ಎಂಡ್ ಹೊಟೇಲ್ ನಲ್ಲಿದ್ದದ್ದು ಯಾಕೆ..? : ಸಿದ್ದರಾಮಯ್ಯ ಹೇಳಿದ್ದೇನು..?

---Advertisement---

 

 

ಬೆಂಗಳೂರು: ಇತ್ತಿಚೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕ್ರಿಕೆಟ್ ಪಂದ್ಯ ನೋಡುವುದಕ್ಕೆ ಸ್ಟೇಡಿಯಂಗೆ ಹೋಗಿದ್ದರು. ಆದರೆ ಈ ವಿಚಾರವನ್ನು ಮುಂದಿಟ್ಟುಕೊಂಡು, ಕುಮಾರಸ್ವಾಮಿ ವ್ಯಂಗ್ಯವಾಡಿದ್ದರು. ಇದೀಗ ಆ ಮಾತಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಕುಮಾರಸ್ವಾಮಿ ಅವರು ವೆಸ್ಟ್ ಎಂಡ್ ಹೊಟೇಲ್ ನಲ್ಲಿ ಇದ್ದಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.

ನಾವೂ ಹೋಗಿದ್ದು ಕ್ರೀಡೆಯನ್ನು ಬೆಂಬಲಿಸುವುದಕ್ಕೆ ವಿನಃ, ಬೇರೆ ಯಾವ ಉದ್ದೇಶಕ್ಕೂ ಅಲ್ಲ. ಮುಖ್ಯಮಂತ್ರಿಯಾಗಿದ್ದಾಗ ವೆಸ್ಟ್ ಎಂಡ್ ಹೊಟೇಲ್ ನಲ್ಲಿ ಇದ್ದರಲ್ಲ ಅದು ಯಾಕೆ..? ಕೇಳಿದ್ದರೆ ಕಾವೇರಿ ನಿವಾಸವನ್ನು ಬಿಟ್ಟು ಕೊಡುತ್ತಿದ್ದೆ ಎಂದಿದ್ದಾರೆ. ಬಿ ಎಸ್ ಯಡಿಯೂರಪ್ಪ ಅವರು ಕಾವೇರಿ ನಿವಾಸದಲ್ಲಿ ಕೊನೆಯ ತನಕ ವಾಸವಿದ್ದರು. ಜಾರ್ಜ್ ಅವರಿಗೆ ಹಂಚಿಕೆಯಾಗಿದ್ದ ನಿವಾಸದಲ್ಲಿ ನಾನು ವಾಸವಿದ್ದೆ. ನಾನು ವಾಸವಿದ್ದ ವಸತಿಗೃಹ ಮೀಸಲಾದ ವಸತಿಗೃಹವಾಗಿರಲಿಲ್ಲ. ಯಾರೂ ಬೇಕಾದರೂ ವಾಸವಿರಬಹುದಿತ್ತು ಎಂದು ವಸತಿಗೃಹ ಹಿಂತಿರುಗಿಸಿರಲಿಲ್ಲ ಎಂಬ ಕುಮಾರಸ್ವಾಮಿ ಮಾತಿಗೆ ತಿರುಗೇಟು ನೀಡಿದ್ದಾರೆ.

ಇನ್ನು ಇದೇ ವೇಳೆ ಸಮ್ಮಿಶ್ರ ಸರ್ಕಾರ ಬೀಳುವುದಕ್ಕೆ ಸಿದ್ದರಾಮಯ್ಯ ಕಾರಣ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ಕುಣಿಯದವರು ನೆಲ ಡೊಂಕು ಎಂದರಂತೆ. ತಮಗೆ ಸರ್ಕಾರವನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಕಾರಣ, ಬೇರೆಯವರ ಮೇಲೆ ಆರೋಪಿಸುವುದು ನಿರರ್ಥಕ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment