Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಿಸರ್ವೇಶನ್ ತೆಗೆದು ಒಗೆಯಿರಿ : ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ..!

---Advertisement---

 

ಕುಲಕುಲವೆಂದು ಬಡಿದಾಡದಿರಿ. ಕುಲದ ನೆಲೆಯನ್ನೇನಾದರೂ ಬಲ್ಲೀರಾ ಎಂದು ಕನಕದಾಸರ ನುಡಿಗಳನ್ನೇ ಹೇಳುವ ಮೂಲಕ ಬಿಜೆಪಿ ಶಾಸಕ ರಿಸರ್ವೇಷನ್ ಬಗ್ಗೆ ಮಾತನಾಡಿದ್ದಾರೆ. ಜಮಖಂಡಿಯ ಶಾಸಕ ಜಗದೀಶ್ ರಿಸರ್ವೇಸನ್ ಬಗ್ಗೆ ಮಾತನಾಡಿದ್ದು, ಆ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಜಮಖಂಡಿ ತಾಲೂಕಿನ ಸಿದ್ಧಾಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ, ಶಾಸಕ ಜಗದೀಶ್, ಕುಲಕುಲವೆಂದು ಬಡಿದಾಡದಿರಿ ಎಂದು ಕನಕದಾಸರು ಹೇಳಿದ್ದಾರೆ. ಕುಲದ ನೆಲೆಯನ್ನೇನಾದರೂ ಬಲ್ಲೀರಾ ಎಂದು ಹಿಂದಿನ ಕಾಲದಲ್ಲಿಯೇ ಹೇಳಿದ್ದರು. ಹಾಗೇ ನೋಡಿದರೆ ಕುಲ ಎನ್ನುವುದು ಇಲ್ಲವೆ ಇಲ್ಲ. ಏನಾದರೂ ಸಿಗುತ್ತೆ ಎಂಬ ಕಾರಣಕ್ಕೆ ಮೀಸಲಾತಿ ಸಂಬಂಧ ಬಡಿದಾಟ ನಡೆಯುತ್ತಿದೆ. ಮೀಸಲಾತಿಯನ್ನು ತೆಗೆದು ಒಗೆಯರಿ, ಎಲ್ಲರೂ ಟಾಪ್ ಕ್ಲಾಸ್ ನಲ್ಲಿ ಬಂದು ಬಿಡುತ್ತೀರಿ ಎಂಬ ಹೇಳಿಕೆ ನೀಡಿದ್ದಾರೆ.

ಮೀಸಲಾತಿ ಬಗ್ಗೆ ಶಾಸಕ ಜಗದೀಶ್ ನೀಡಿದ ಹೇಳಿಕೆ ವೈರಲ್ ಆಗುತ್ತಿದೆ. ಇದನ್ನು ಗಮನಿಸಿದ ದಲಿತ ಪರ ಸಂಘಟನೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ರಾತ್ರೋ ರಾತ್ರಿ ಶಾಸಕ ಜಗದೀಶ್ ಅವರ ಮನೆಗೂ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದೆ. ಆದ್ರೆ ರಾತ್ರಿ ಪೊಲೀಸರು ಈ ಮುತ್ತಿಗೆಯನ್ನು ತಡೆದಿದ್ದಾರೆ. ಇಂದು ಬೆಳಗ್ಗೆ ಜಮಖಂಡಿಯ ದೇಸಾಯಿ ಸರ್ಕಲ್ ನಲ್ಲಿ ಅಂಬೇಡ್ಕರ್ ಸೇನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಬಿಜೆಪಿ ಶಾಸಕ ಜಗದೀಶ್‌ ಗುಡಗಂಟಿಯವರ ಹೇಳಿಕೆಯನ್ನು ಖಂಡಿಸಿದ್ದಾರೆ. ಬಿಜೆಪಿ ಹಾಗೂ ಸಂಘಪರಿವಾರದವರು ಹಿಂದಿನಿಂದಲೂ ಮೀಸಲಾತಿಯ ವಿರೋಧಿಗಳು. ಆದರೆ ಜನಪ್ರತಿನಿಧಿಗಳು ಮೀಸಲಾತಿ ಸಂಬಂಧ ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment