ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಳಗಾವಿ ರಾಜಕಾರಣದಲ್ಲಿ ಇತ್ತಿಚೆಗೆ ಕೊಂಚ ಏರುಪೇರಾಗಿತ್ತು. ಸತೀಶ್ ಜಾರಕಿಹೊಳಿ ಶಾಸಕರೊಂದಿಗೆ ಪ್ರವಾಸ ಹೊರಟಿದ್ದರು. ಆದರೆ ಅದು ಆಮೇಲೆ ನಿಂತಿತ್ತು. ಈ ಮುನಿಸಿನ ಬಗ್ಗೆ ಮಾತನಾಡಿದ್ದ ರಮೇಶ್ ಜಾರಕಿಹೊಳಿ, ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿಯೇ ಸತೀಶ್ ಜಾರಕಿಹೊಳಿ ಕಿರುಕುಳ ಅನುಭವಿಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಆ ಮಾತಿಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.
ಸಹೋದರ ಮಾಡಿರುವ ಆರೋಪವನ್ನು ಸತೀಶ್ ಜಾರಕಿಹೊಳಿ ತಳ್ಳಿ ಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ನನಗೆ ಯಾವುದೇ ಹಿಂಸೆ ಆಗಿಲ್ಲ. ನನಗೆ ಯಾವುದೇ ತೊಂದರೆ ಆಗಿಲ್ಲ. ಇದುವರೆಗೂ ಯಾವುದೇ ಕಿರುಕುಳ ಆಗಿಲ್ಲ. ನಮ್ಮದು ಯಾವ ಬಂಡಾಯವೂ ಇಲ್ಲ ಎಂದಿದ್ದಾರೆ. ಸತೀಶ್ ಜಾರಕಿಹೊಳಿ ಬಂಡಾಯವೆದ್ದಿದ್ದ ಕಾರಣ, ಡಿಸಿಎಂ ಡಿಕೆ ಶಿವಕುಮಾರ್, ಯಾರು ನೇರವಾಗಿ ಪಕ್ಷದ ಮಾತನಾಡುವಂತೆ ಇಲ್ಲ ಎಂಬ ಸೂಚನೆ ನೀಡಿದ್ದರು. ಆ ಬಳಿಕ ಸತೀಶ್ ಜಾರಕಿಹೊಳಿಯೂ ಸುಮ್ಮನೆ ಆಗಿದ್ದರು.
ಇನ್ನು ಇದೇ ವೇಳೆ ಕಾರ್ಣಿಕದ ಬಗ್ಗೆ ಮಾತನಾಡಿದ್ದಾರೆ, ನಾನು ಅದನ್ನು ನಂಬಲ್ಲ. ಇದು ಹಳೆಯದ್ದು ಇರಬೇಕು. ಹೊಸ ವಿಚಾರ ಅಲ್ಲ ಎನಿಸುತ್ತದೆ ಎಂದಿದ್ದಾರೆ. ಹೆಣ್ಣಿನ ಕಂಟಕದಿಂದ ಸರ್ಕಾರಕ್ಕೆ ಕಂಟಕ ಎಂದು ಮೈಲಾರ ಕಾರ್ಣೀಕ ನುಡಿದಿತ್ತು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್