ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ನವದೆಹಲಿ: ಇಂಡಿಯಾ ಎಂಬ ಹೆಸರನ್ನು ತೆಗೆದು ಭಾರತ್ ಎಂದು ಇಡಬೇಕು ಎಂಬ ವಾದ ಹಲವು ದಿನಗಳಿಂದಲು ನಡೆಯುತ್ತಲೆ ಇದೆ. ಸಾಕಷ್ಟು ಪರ ವಿರೋಧವೂ ಎದ್ದಿದೆ. ಇದರ ನಡುವೆ ಮಕ್ಕಳ ಶಾಲಾ ಪಠ್ಯಪುಸ್ತಕದಲ್ಲಿ ಇಂಡಿಯಾ ಬದಲು ಭಾರತ್ ಎಂದು ಬಳಸಿ ಎಂಬ ಸೂಚನೆಯನ್ನು ಎನ್ ಸಿ ಇ ಆರ್ ಟಿ ಸೂಚನೆ ನೀಡಿದೆ
ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಆ್ಯಂಡ್ ಟ್ರೈನಿಂಗ್, ಈಗಾಗಲೇ ಉನ್ನತಮಟ್ಟದ ಸಮಿತಿಯ ಅನುಮೋದನೆಯನ್ನು ಪಡೆದಿದೆ. ಹೀಗಾಗಿಯೇ ಪಠ್ಯಪುಸ್ತಕದಲ್ಲಿ ಇಂಡಿಯಾ ಬದಲು ಭಾರತ್ ಬಳಸಲು ಸೂಚನೆ ನೀಡಲಾಗಿದೆ. ಮುಂದಿನ ಪಠ್ಯಪುಸ್ತಕಗಳಲ್ಲಿ ಇಂಡಿಯಾ ಬದಲಿಗೆ ಭಾರತ್ ಎಂದು ಬದಲಿಸಲಾಗುತ್ತಿದೆ. ಅಷ್ಟೇ ಅಲ್ಲ ಪ್ರಾಚೀನ ಇತಹಾಸದ ಬದಲಿಗೆ ಶಾಸ್ತ್ರೀಯ ಇತಿಹಾಸ ಪರಿಚಯಿಸಲು ಅವಿರೋಧವಾಗಿ ಶಿಫಾರಸು ಮಾಡಿದೆ.
ಭಾರತ್ ಎಂಬುದು ಹಳೆಯ ಹೆಸರು. ಭಾರತ ಎಂಬ ಹೆಸರಿನ ಬಳಕೆಯು 7,000 ವರ್ಷಗಳಷ್ಟು ಹಳೆಯದು. ಅಂದರೆ ವಿಷ್ಣು ಪುರಾಣದಂತಹ ಪ್ರಾಚೀನ ಗ್ರಂಥಗಳಲ್ಲೂ ಕೂಡ ಅದರ ಉಲ್ಲೇಖವಿದೆ. ಹಾಗಾಗಿ, ಹೊಸ ಎನ್ಸಿಇಆರ್ಟಿ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸಂಬಂಧಿಸಿ ನೇಮಕ ಮಾಡಲಾಗಿದ್ದ ಏಳು ಸದಸ್ಯರ ಸಮಿತಿಯು ಸರ್ವಾನುಮತದಿಂದ ಈ ಶಿಫಾರಸು ಮಾಡಿದೆ ಎಂದು ಸಮಿತಿಯ ಅಧ್ಯಕ್ಷ ಸಿಐ ಐಸಾಕ್ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್