Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಠ್ಯ ಪುಸ್ತಕದಲ್ಲಿ ಇನ್ಮುಂದೆ ‘ಇಂಡಿಯಾ’ ಬದಲಿಗೆ ‘ಭಾರತ್’ ಬಳಕೆ ; ಎನ್‌ಸಿಇಆರ್‌ಟಿ ನಿರ್ಧಾರ

Facebook
Twitter
Telegram
WhatsApp

 

ನವದೆಹಲಿ: ಇಂಡಿಯಾ ಎಂಬ ಹೆಸರನ್ನು ತೆಗೆದು ಭಾರತ್ ಎಂದು ಇಡಬೇಕು ಎಂಬ ವಾದ ಹಲವು ದಿನಗಳಿಂದಲು ನಡೆಯುತ್ತಲೆ ಇದೆ. ಸಾಕಷ್ಟು ಪರ ವಿರೋಧವೂ ಎದ್ದಿದೆ. ಇದರ ನಡುವೆ ಮಕ್ಕಳ ಶಾಲಾ ಪಠ್ಯಪುಸ್ತಕದಲ್ಲಿ ಇಂಡಿಯಾ ಬದಲು ಭಾರತ್ ಎಂದು ಬಳಸಿ ಎಂಬ ಸೂಚನೆಯನ್ನು ಎನ್ ಸಿ ಇ ಆರ್ ಟಿ ಸೂಚನೆ ನೀಡಿದೆ

ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಆ್ಯಂಡ್ ಟ್ರೈನಿಂಗ್, ಈಗಾಗಲೇ ಉನ್ನತಮಟ್ಟದ ಸಮಿತಿಯ ಅನುಮೋದನೆಯನ್ನು ಪಡೆದಿದೆ. ಹೀಗಾಗಿಯೇ ಪಠ್ಯಪುಸ್ತಕದಲ್ಲಿ ಇಂಡಿಯಾ ಬದಲು ಭಾರತ್ ಬಳಸಲು ಸೂಚನೆ ನೀಡಲಾಗಿದೆ. ಮುಂದಿನ ಪಠ್ಯಪುಸ್ತಕಗಳಲ್ಲಿ ಇಂಡಿಯಾ ಬದಲಿಗೆ ಭಾರತ್ ಎಂದು ಬದಲಿಸಲಾಗುತ್ತಿದೆ. ಅಷ್ಟೇ ಅಲ್ಲ ಪ್ರಾಚೀನ ಇತಹಾಸದ ಬದಲಿಗೆ ಶಾಸ್ತ್ರೀಯ ಇತಿಹಾಸ ಪರಿಚಯಿಸಲು ಅವಿರೋಧವಾಗಿ ಶಿಫಾರಸು ಮಾಡಿದೆ.

ಭಾರತ್ ಎಂಬುದು ಹಳೆಯ ಹೆಸರು. ಭಾರತ ಎಂಬ ಹೆಸರಿನ ಬಳಕೆಯು 7,000 ವರ್ಷಗಳಷ್ಟು ಹಳೆಯದು. ಅಂದರೆ ವಿಷ್ಣು ಪುರಾಣದಂತಹ ಪ್ರಾಚೀನ ಗ್ರಂಥಗಳಲ್ಲೂ ಕೂಡ ಅದರ ಉಲ್ಲೇಖವಿದೆ. ಹಾಗಾಗಿ, ಹೊಸ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸಂಬಂಧಿಸಿ ನೇಮಕ ಮಾಡಲಾಗಿದ್ದ ಏಳು ಸದಸ್ಯರ ಸಮಿತಿಯು ಸರ್ವಾನುಮತದಿಂದ ಈ ಶಿಫಾರಸು ಮಾಡಿದೆ ಎಂದು ಸಮಿತಿಯ ಅಧ್ಯಕ್ಷ ಸಿಐ ಐಸಾಕ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!