Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಗ ಧರಿಸಿದ್ದ ಹುಲಿ ಉಗುರಿನ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಿಯಾಕ್ಷನ್..!

Facebook
Twitter
Telegram
WhatsApp

ಬೆಳಗಾವಿ: ವರ್ತೂರು ಸಂತೋಷರ ಬಂಧನವಾದ ಮೇಲೆ ರಾಜ್ಯಾದ್ಯಂತ ಹುಲಿ ಉಗುರಿನ ಪ್ರಕರಣಗಳು ಹೆಚ್ಚಾಗುತ್ತಿವೆ. ದೊಡ್ಡ ದೊಡ್ಡವರ ಕೊರಳಲ್ಲಿಯೇ ಹುಲಿ ಉಗುರಿನ ಪೆಂಡೆಂಟ್ ಗಳು ಕಾಣಿಸುತ್ತಿವೆ. ಇದು ಅರಣ್ಯಾಧಿಕಾರಿಗಳಿಗೆ ಬಹು ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಇತ್ತಿಚೆಗಷ್ಟೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರನ ಫೋಟೋ ಕೂಡ ವೈರಲ್ ಆಗಿತ್ತು. ಹುಲಿ ಉಗುರು ಇರುವಂತ ಪೆಂಡೆಂಟ್ ಅನ್ನು ಧರಿಸಿದ್ದರು. ಆ ಫೋಟೋ ಹಾಕಿ ದೊಡ್ಡವರ ತನಿಖೆ ಯಾವಾಗ ಎಂದೇ ಕೇಳಲಾಗಿತ್ತು‌. ಇದೀಗ ಮಗ ಹಾಕಿದ್ದ ಪೆಂಡೆಂಟ್ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಮಗ ಹಾಕಿದ್ದು ಒರಿಜಿನಲ್ ಅಥವಾ ಡೂಪ್ಲಿಕೇಟ್ ಎಂಬುದನ್ನು ತಿಳಿಸಿದ್ದಾರೆ.

‘ಮದುವೆ ಸಮಯದಲ್ಲಿ ಯಾರೋ ಗಿಫ್ಟ್ ಕೊಟ್ಟಿದ್ದರು ಅಂತ ಅದನ್ನ ಹಾಕಿದ್ದ. ಮೃಣಾಲ್‌ ಹಾಕಿದ್ದ ಪೆಂಡೆಂಟ್ ಪ್ಲಾಸ್ಟಿಕ್ ನದ್ದು, ಒರಿಜಿನಲ್ ಅಲ್ಲ. ನಾನು ಸಸ್ಯಹಾರಿ. ಹುಲಿ, ಜಿಂಕೆ, ಕೋಳಿ ಇನ್ಯಾವುದರ ಬಲಿಯನ್ನು ಬಯಸುವುದಿಲ್ಲ’ ಎಂದಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಮದುವೆಗೆ ಪ್ಲಾಸ್ಟಿಕ್ ಉಡುಗೊರೆ ಬಂದಿತ್ತಾ ಎಂಬ ಪ್ರಶ್ನೆ ಅವರ ಹೇಳಿಕೆಯಿಂದ ಕಾಡುವುದಕ್ಕೆ ಶುರುವಾಗಿದೆ‌.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಗಾಳಿ ಮಳೆಗೆ ಹಾರಿಹೋದ ಶಾಲೆಯ ಮೇಲ್ಛಾವಣಿ ಶೀಟುಗಳು, ಹ್ಯಾಂಗ್ಲರುಗಳು

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,     ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 11 : ಶುಕ್ರವಾರ ರಾತ್ರಿ ಸುರಿದ ಮಳೆ ಗಾಳಿಗೆ ಮಲ್ಲಾಪುರದಲ್ಲಿರುವ ಬಾಪೂಜಿ ಹಿರಿಯ ಪ್ರಾಥಮಿಕ

ಬೆಂಗಳೂರಿನಲ್ಲಿ KAS ಆಫೀಸರ್ ಹೆಂಡತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

ಬೆಂಗಳೂರು: ಹೈಕೋರ್ಟ್ ವಕೀಲೆಯಾಗಿದ್ದ ಚೈತ್ರಾ ಬಿ.ಗೌಡ ಎಂಬುವವರು ಸಾವನ್ನಪ್ಪಿದ್ದಾರೆ. ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದರಿಂದ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಚೈತ್ರಾಗೆ ಇನ್ನು 35 ವರ್ಷ ವಯಸ್ಸಾಗಿತ್ತಷ್ಟೆ. ಸಂಜಯ್ ನಗರ ಪೊಲೀಸ್ ಠಾಣಾ

ಟೀಂ ಇಂಡಿಯಾ ಕೋಚ್ ಹುದ್ದೆಗೆ ಮೂವರ ಹೆಸರು ರೇಸ್ ನಲ್ಲಿ : ದ್ರಾವಿಡ್ ಗೆ ಸಿಗಲ್ವಾ ಮತ್ತೆ ಹುದ್ದೆ..?

ಐಪಿಎಲ್ ಮುಗಿದ ಕೂಡಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಅದಕ್ಕೆ ಉಳಿದಿರುವುದು ಇನ್ನು ಕೇವಲ 20 ದಿನಗಳಷ್ಟೇ. ಆದರೆ ಈ ಬೆನ್ನಲ್ಲೇ ಟೀಂ ಇಂಡಿಯಾ ಕೋಚ್ ಬಗ್ಗೆ ಚರ್ಚೆ ಶುರುವಾಗಿದೆ. ಈಗ ಇರುವ ಟೀಂ ಇಂಡಿಯಾದ

error: Content is protected !!