Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನಗಣತಿ ಆದಾಗಲೇ ಶೋಷಿತ ಸಮುದಾಯಗಳಿಗೆ ಶಿಕ್ಷಣ, ಆರೋಗ್ಯ, ನೌಕರಿ ಸಿಗಲು ಸಾಧ್ಯ : ಬಿ.ಕೆ.ಹರಿಪ್ರಸಾದ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.27 : ಜನಗಣತಿ ಆದಾಗಲೇ ಶೋಷಿತ ಸಮುದಾಯಗಳಿಗೆ ಶಿಕ್ಷಣ, ಆರೋಗ್ಯ, ನೌಕರಿ ಸಿಗಲು ಸಾಧ್ಯ ಎಂದು ವಿಧಾನಪರಿಷತ್ ಸದಸ್ಯ ಮಾಜಿ ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು.

ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಜಿಲ್ಲಾ ಹಿಂದುಳಿದ ಹಾಗೂ ಅತಿ ಹಿಂದುಳಿದ ಸಮುದಾಯ ವರ್ಗಗಳ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ದಲಿತರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದವರು, ಅಲ್ಪಸಂಖ್ಯಾತರು, ತಳಸಮುದಾಯದವರು ಆಯಾ ಜನಸಂಖ್ಯೆಗನುಗುಣವಾಗಿ ಸರ್ಕಾರದಿಂದ ಸಿಗುವ ಸೌಲತ್ತುಗಳನ್ನು ಪಡೆದುಕೊಳ್ಳಬೇಕಾಗಿರುವುದರಿಂದ ಜಾಗೃತಿ ಮೂಡಿಸುವುದಕ್ಕಾಗಿ ರಾಜಧಾನಿ ಬೆಂಗಳೂರಿನಲ್ಲಿ ದೊಡ್ಡ ಸಮಾವೇಶ ನಡೆಸಿದೆವು. ಅದರಂತೆ ಪ್ರತಿ ಜಿಲ್ಲೆಯಲ್ಲಿಯೂ ಸಮಾವೇಶಗಳನ್ನು ನಡೆಸಿ ಸರ್ಕಾರದ ಗಮನಕ್ಕೆ ತರಬೇಕಾಗಿರುವುದರಿಂದ ಮೊದಲು ಒಗ್ಗಟ್ಟಾಗಿ ಎಂದು ಕರೆ ನೀಡಿದರು.

ರಾಜೀವ್‍ಗಾಂಧಿ ದೇಶದ ಪ್ರಧಾನಿಯಾಗಿದ್ದಾಗ ಮಹಿಳೆಯರಿಗೆ ಮೀಸಲಾತಿ ನೀಡಿದರು. ಹಿಂದುಳಿದವರು, ಅಲ್ಪಸಂಖ್ಯಾತರು, ಎಸ್ಸಿ, ಎಸ್ಟಿ.ಗಳಿಗೆ ಸಮಾನ ಅವಕಾಶ ಸಿಗಬೇಕಾಗಿರುವುದರಿಂದ ದೇಶದಲ್ಲಿ ಜನಗಣತಿ ಆಗಬೇಕು. ಮೀಸಲಾತಿಗೂ ಜನಗಣತಿಗೂ ವ್ಯತ್ಯಾಸವಿದೆ. ಸರ್ಕಾರಕ್ಕೆ ಹೆಚ್ಚು ತೆರಿಗೆ ಕಟ್ಟುವವರು ತಳಸಮುದಾಯದವರು.
ಶ್ರಮಜೀವಿಗಳು ಮೊದಲು ಒಂದಾಗಬೇಕಿದೆ. ಸಂವಿಧಾನದ ಆಶಯದಂತೆ ಎಲ್ಲರಿಗೂ ಮೂಲಭೂತ ಸೌಲಭ್ಯಗಳು ಸಿಗಬೇಕು. ಬೆಂಗಳೂರಿನಲ್ಲಿ ಪಕ್ಷಾತೀತವಾಗಿ ಸೇರಿಕೊಂಡು ಸಮಾವೇಶ ನಡೆಸಿದ್ದೇವೆ. ಮುಂದಿನ ದಿನಗಳಲ್ಲಿ ಎಲ್ಲರನ್ನು ಎಚ್ಚರಿಸುವುದಕ್ಕಾಗಿ ಪ್ರತಿ ಜಿಲ್ಲೆಯಲ್ಲಿಯೂ ಸಮಾವೇಶಗಳು ನಡೆಯಬೇಕು. ಆಗ ಆಹ್ವಾನಿಸಿ ನಾನು ಕೂಡ ಬರುತ್ತೇನೆಂದರು.
ಇಲ್ಲಿಯವರೆಗೂ ರಾಜ್ಯದಲ್ಲಿ ಕೇವಲ ನಾಲ್ಕೈದು ಸಮುದಾಯದವರು ಮಾತ್ರ ಅಧಿಕಾರ ನಡೆಸಿದ್ದಾರೆ. ರಾಜಕೀಯವಾಗಿ ದೊಡ್ಡ ಶಕ್ತಿಯನ್ನು ತೋರಿಸಬೇಕಾಗಿರುವುದರಿಂದ ತಳಸಮುದಾಯದವೆರಲ್ಲಾ ಒಂದಾಗಿ ಸೇರಬೇಕೆಂದು ಹೇಳಿದರು.

ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಮಾತನಾಡಿ ಹಿಂದುಳಿದವರು, ಶೋಷಿತರು, ತಳಸಮುದಾಯದವರು, ಅಲ್ಪಸಂಖ್ಯಾತರು, ಎಸ್ಸಿ.ಎಸ್ಟಿ.ಗಳ ಜೊತೆ ನಾನಿದ್ದೇನೆ. ಯಾವುದೇ ಜಾತಿಯಿಂದ ನಾನು ಗುರುತಿಸಿಕೊಂಡಿಲ್ಲ. ಜಾತಿ ಬಗ್ಗೆ ಮಾತನಾಡುವಷ್ಟು ದೊಡ್ಡ ಮನುಷ್ಯ ನಾನಲ್ಲ. ಮನೆಯಲ್ಲಿಯೂ ಅದನ್ನು ಪಾಲಿಸಿಕೊಂಡು ಬರುತ್ತಿದ್ದೇನೆ. ನಿಮ್ಮ ಸಭೆಗೆ ನನ್ನ ಬೆಂಬಲವಿದೆ ಎಂದು ಭರವಸೆ ನೀಡಿದರು.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಪ್ರಬಲ ಸ್ಪರ್ಧಾಕಾಂಕ್ಷಿ, ಜೆಜೆ.ಹಟ್ಟಿಯ ಡಾ.ಬಿ.ತಿಪ್ಪೇಸ್ವಾಮಿ, ಮಡಿವಾಳ ಸಮಾಜದ ಶಿವಲಿಂಗಪ್ಪ, ಸವಿತಾ ಸಮಾಜದ ಎನ್.ಡಿ.ಕುಮಾರ್, ಅಖಿಲಭಾರತ ವಿಶ್ವಕರ್ಮ ಪರಿಷತ್ ರಾಜ್ಯಾಧ್ಯಕ್ಷ ಪ್ರಸನ್ನಕುಮಾರ್, ಜಿಲ್ಲಾಧ್ಯಕ್ಷ ಶಂಕರ್‍ಮೂರ್ತಿ, ಛಲವಾದಿ ಸಮಾಜದ ಶ್ರೀಮತಿ ರೇಣುಕಶಿವು, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‍ಕುಮಾರ್, ನಗರಾಧ್ಯಕ್ಷ ಯು.ಲಕ್ಷ್ಮಿಕಾಂತ್ ಸೇರಿದಂತೆ ವಿವಿಧ ಸಮುದಾಯದವರು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ

RCB ಅಭಿಮಾನಿಗಳು ಕಡೆಯ ತನಕ ತಮ್ಮ ಟೀಂ ಬಗ್ಗೆ ಹೋಪ್ ಕಳೆದುಕೊಳ್ಳುವುದೇ ಇಲ್ಲ. ಯಾಕಂದ್ರೆ ಆರ್ಸಿಬಿ ಆಟಗಾರರು ಸಹ ಅದೇ ಥರ ಕೊನೆಯಲ್ಲಿ ಚೋಕ್ ಕೊಡ್ತಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದ ಅಷ್ಟು

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

error: Content is protected !!