Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಟ ಪುನೀತ್ ರಾಜ್‍ಕುಮಾರ್ 2ನೇ ಪುಣ್ಯಸ್ಮರಣೆ : ಕುಟುಂಬಸ್ಥರಿಂದ ಸಮಾಧಿಗೆ ಪೂಜೆ

Facebook
Twitter
Telegram
WhatsApp

 

ಬೆಂಗಳೂರು: ಇಂದು ಅಪ್ಪು ಎರಡನೇ ವರ್ಷದ ಪುಣ್ಯಸ್ಮರಣೆ. ಅವರು ಭೌತಿಕವಾಗಿ ನಮ್ಮ‌ ನಡುವೆ ಇಲ್ಲದಂತೆ ಆಗಿ ಎರಡು ವರ್ಷಗಳು ಕಳೆದಿವೆ. ಇದರ ನಡುವೆ ಕರ್ನಾಟಕ ರತ್ನವನ್ನು ನೆನೆಯದ ದಿನವಿಲ್ಲ. ವಿಧಿಯನ್ನು ಶಪಿಸದ ಸಮಯವಿಲ್ಲ. ಇಂದು ಕಂಠೀರವ ಸ್ಟುಡಿಯೋದಲ್ಲಿ ಪೂಜೆ ಸಲ್ಲಿಸಲಾಗಿದೆ.

ಅಪ್ಪು ಸಮಾಧಿ ಹೂವುಗಳಿಂದ ಅಲಂಕಾರಗೊಂಡಿದೆ. ಲೈಟುಗಳಿಂದ ಕಂಗೊಳಿಸುತ್ತಿದೆ. ಬೆಳಗ್ಗೆಯೇ ಮನೆಯವರೆಲ್ಲ ಸೇರಿ, ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಪ್ಪುಗೆ ಇಷ್ಟವಾದ ತಿನಿಸುಗಳನ್ನೆಲ್ಲಾ ಸಮಾಧಿ‌ವಮುಂದೆ‌ ಇಟ್ಟು ಪೂಜೆ ಸಲ್ಲಿಸಲಾಗಿದೆ. ಕುಟುಂಬಸ್ಥರೆಲ್ಲಾ ಸೇರಿ, ಪೂಜೆ ಮಾಡಿದ್ದಾರೆ.

ಇನ್ನೂ ಸಮಾಧಿ ಬಳಿ ಅಭಿಮಾನಿಗಳ ದಂಡು ಹರಿದು ಬಂದಿದೆ. ಜಿಲ್ಲೆಯ ನಾನಾ ಭಾಗಗಳಿಂದಾನೂ ಅಭಿಮಾನಿಗಳು ಬಂದಿದ್ದಾರೆ. ಅಪ್ಪುಗಾಗಿ ತಿನಿಸು, ಹೂಗಳನ್ನು ತಂದು, ಸಮಾಧಿ ಬಳಿ ಇಟ್ಟು ಪೂಜೆ ಸಲ್ಲಿಸಿದ್ದಾರೆ. ನೆಚ್ಚಿನ ನಟನಿಗೆ ನಮಸ್ಕರಿಸಿದ್ದಾರೆ.

ಅಂದು 2021 ಅಕ್ಟೋಬರ್ 29 ರಾಜ್ಯಾದ್ಯಂತ ಭಜರಂಗಿ2 ಸಿನಿಮಾ ತೆರೆಗೆ ಬಂದಿತ್ತು. ಅದಕ್ಕೂ ಮುನ್ನ ಭಜರಂಗಿ 2 ಸಿನಿಮಾ ಇವೆಂಟ್ ನಲ್ಲಿ ಅಣ್ಣನ ಜೊತೆ ಸೇರಿ, ಅಪ್ಪು ಕೂಡ ಕುಣಿದು ಕುಪ್ಪಳಿಸಿದ್ದರು. ಆದರೆ ಸಿನಿಮಾ ಶುರುವಾಗಿ ಒಂದು ಗಂಟೆಯಾಗಿತ್ತಷ್ಟೆ, ಅಪ್ಪು ಆಸ್ಪತ್ರೆ ಸೇರಿದ ವಿಚಾರ ಬಂದಿತ್ತು. ಮಧ್ಯಾಹ್ನದ ವೇಳೆಗೆ ಎಲ್ಲರನ್ನು ಅಗಲಿದ್ದರು. ಮೂರು ದಿನಗಳ ಕಾಲ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿತ್ತು. ಹಗಲು – ರಾತ್ರಿ ಅಭಿಮಾನಿಗಳ ಜನ ಸಾಗರವೇ ಅಂತಿಮ ದರ್ಶನಕ್ಕೆ ನೆಲೆಸಿತ್ತು. ಇಡೀ ಕರ್ನಾಟಕ ಕಣ್ಣೀರಾಗಿತ್ತು. ಇಂದು ಆ ಕರಾಳ ದಿನಕ್ಕೆ ಎರಡು ವರ್ಷ ಅಭಿಮಾನಿಗಳ ಕಣ್ಣೀರು ಈಗಲು ಬತ್ತಿಲ್ಲ. ಆದರೆ ಅವರ ನೆನಪಿನೊಂದಿಗೆ ಅಪ್ಪುರನ್ನು ಸೆಲೆಬ್ರೇಟ್ ಮಾಡುತ್ತಾ ಕಾಲ ದೂಡುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!