ನವದೆಹಲಿ: ರಾಜ್ಯದಲ್ಲಿ ಭೀಕರ ಬರ ಬಂದಿದೆ. ಈಗಾಗಲೇ ಕಾವೇರಿ ಒಡಲಲ್ಲಿರುವ ನೀರು ಖಾಲಿಯಾಗುತ್ತಿದೆ. ಪರಿಸ್ಥಿತಿ ತೀರಾ ಶೋಚನೀಯವಾಗಿರುವಾಗಲೂ ಮುಂದಿನ 15 ದಿನಗಳ ಕಾಲ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲು ಸೂಚನೆ ನೀಡಲಾಗಿದೆ. ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಮುಂದಿನ 15 ದಿನಗಳ ಕಾಲ ಪ್ರತಿದಿನ 2,600 ಕ್ಯೂಸೆಕ್ ನೀರು ಹರಿಸಲು ಸೂಚನೆ ನೀಡಲಾಗಿದೆ. ಅಕ್ಟೋಬರ್ ಅಂತ್ಯದವರೆಗೂ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿತ್ತು. ಇದೀಗ ಅವಧಿ ಮುಕ್ತಾಯದ ಬಳಿಕ 2,600 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದೆ. ಕರ್ನಾಟಕದಿಂದ ನಿಜವಾದ ಪರಿಸ್ಥಿತಿಯನ್ನು ಅರ್ಥ ಮಾಡಿಸುವುದಕ್ಕೆ ಪ್ರಯತ್ನ ಪಟ್ಟರು, ಅದು ವ್ಯರ್ಥವಾಗುತ್ತಿದೆ.
ಈ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಸದ್ಯಕ್ಕೆ ತಮಿಳುನಾಡಿಗೆ ನೀರು ಬಿಡುವ ಸ್ಥಿತಿಯಲ್ಲಿ ನಾವಿಲ್ಲ ಎಂದೇ ಹೇಳಿದ್ದಾರೆ. ಕಾವೇರಿ ನೀರಿಗಾಗಿ ಕರ್ನಾಟಕದಲ್ಲಿ ಸಾಕಷ್ಟು ಹೋರಾಟಗಳು ನಡೆಯುತ್ತಿವೆ. ಇತ್ತಿಚೆಗಷ್ಟೇ ಕಾವೇರಿ ಹೋರಾಟಗಾರರು ಐವತ್ತು ದಿನದ ಕರಾಳ ದಿನವನ್ನು ಆಚರಣೆ ಮಾಡಿದ್ದಾರೆ. ಈಗಲೂ ಕಾವೇರಿಗಾಗಿ ಹೋರಾಟ ಮುಂದುವರೆದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










