Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಸ್ಕೃತಿ ಶ್ರೀ ಪ್ರಶಸ್ತಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ : ಡಾ.ಬಿ.ರಾಜಶೇಖರಪ್ಪ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ : ಇತಿಹಾಸ ಅಕಾಡೆಮಿಯ ಅತ್ಯುನ್ನತ ಇತಿಹಾಸ ಸಂಸ್ಕೃತಿ ಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಚಿತ್ರದುರ್ಗದ ಸಂಶೋಧಕ ಡಾ.ಬಿ.ರಾಜಶೇಖರಪ್ಪನವರನ್ನು ಅವರ ನಿವಾಸದಲ್ಲಿ ಕೋಟೆ ವಾಯುವಿಹಾರಿಗಳ ಸಂಘದಿಂದ ಸನ್ಮಾನಿಸಲಾಯಿತು.

ಬಿ.ರಾಜಶೇಖರಪ್ಪನರನ್ನು ಸನ್ಮಾನಿಸಿ ಮಾತನಾಡಿದ ಕೋಟೆ ವಾಯುವಿಹಾರಿಗಳ ಸಂಘದ ಅಧ್ಯಕ್ಷ ಆರ್.ಸತ್ಯಣ್ಣ ಸಂಶೋಧನೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ
ಬಿ.ರಾಜಶೇಖರಪ್ಪನವರು ಇನ್ನು ಹೆಚ್ಚು ಸಂಶೋಧನೆಗಳನ್ನು ಕೈಗೊಂಡು ಇತಿಹಾಸಕ್ಕೆ ನಿರಂತರ ಸೇವೆ ಸಲ್ಲಿಸುವಂತಾಗಲಿ. ಇವರ ಸೇವೆಯನ್ನು ಗುರುತಿಸಿ ಇತಿಹಾಸ ಅಕಾಡೆಮಿ ರಾಜ್ಯ ಮಟ್ಟದ ಪ್ರಶಸ್ತಿ ಹಾಗೂ ಒಂದು ಲಕ್ಷ ರೂ. ನೀಡಿ ಗೌರವಿಸುತ್ತಿರುವುದು ಚಿತ್ರದುರ್ಗಕ್ಕೆ ಸಂದ ಕೀರ್ತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಬಿ.ರಾಜಶೇಖರಪ್ಪವರು ಅಪಾರ ಅಭಿಮಾನಿಗಳು ನನ್ನ ಮೇಲೆ ಗೌರವವಿಟ್ಟು ಸನ್ಮಾನಿಸುತ್ತಿರುವುದಕ್ಕೆ ಚಿರಋಣಿಯಾಗಿದ್ದೇನೆ. ನ.7 ರಂದು ಇತಿಹಾಸ ಅಕಾಡೆಮಿ ಪಾವಗಡದಲ್ಲಿ ಪ್ರದಾನ ಮಾಡಲಿರುವ ಇತಿಹಾಸ ಸಂಸ್ಕøತಿಶ್ರಿ ಪ್ರಶಸ್ತಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ. ಸ್ಮಾರಕಗಳ ಸಂರಕ್ಷಣಾ ಸಮಿತಿಯನ್ನು ಪುನರ್ ರಚಿಸುವ ಅಗತ್ಯವಿದೆ. ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ಸದಾ ಸಂಶೋಧನೆಯಲ್ಲಿ ತೊಡಗಿರುತ್ತೇನೆಂದು ಹೇಳಿದರು.

ಮಡಿವಾಳ ಸಮಾಜದ ಜಿಲ್ಲಾಧ್ಯಕ್ಷ ಬಿ.ರಾಮಜ್ಜ ಮಾತನಾಡಿ ಸಂಶೋಧನೆಯ ಮೂಲಕವೇ ಮನೆ ಮಾತಾಗಿರುವ ಡಾ.ಬಿ.ರಾಜಶೇಖರಪ್ಪನವರಿಗೆ ಇತಿಹಾಸ ಅಕಾಡೆಮಿ ನೀಡುವ ಅತ್ಯುನ್ನತ ಇತಿಹಾಸ ಸಂಸ್ಕøತಿಶ್ರಿ ಪ್ರಶಸ್ತಿ ಸಿಕ್ಕಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಇನ್ನು ಹೆಚ್ಚು ಕಾಲ ಸಂಶೋಧನೆಯಲ್ಲಿ ತೊಡಗಿಕೊಳ್ಳುವಂತೆ ಭಗವಂತ ಶಕ್ತಿ ನೀಡಲಿ ಎಂದು ಶುಭ ಹಾರೈಸಿದರು.

ಮದಕರಿನಾಯಕ ಸಾಂಸ್ಕøತಿಕ ಕೇಂದ್ರದ ಅಧ್ಯಕ್ಷ ಡಿ.ಗೋಪಾಲಸ್ವಾಮಿ ನಾಯಕ ಮಾತನಾಡುತ್ತ ಇತಿಹಾಸ ಸಂಸ್ಕøತಿಶ್ರಿ ಪ್ರಶಸ್ತಿ ಸಿಕ್ಕಿರುವುದು ನಿಮ್ಮ ಸಂಶೋಧನೆಗೆ ತಕ್ಕ ಫಲ. ಮುಂದಿನ ದಿನಗಳಲ್ಲಿ ಇನ್ನು ಉನ್ನತ ಮಟ್ಟದ ಪ್ರಶಸ್ತಿಗಳು ಲಭಿಸಲಿ ಎಂದು ಆಶಿಸಿದರು.

ಇಂದೂಶೇಖರ್, ಶ್ರೀಮತಿ ಯಶೋಧ ಬಿ.ರಾಜಶೇಖರಪ್ಪ ಈ ಸಂದರ್ಭದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!