Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಂಸ್ಕೃತಿ ಶ್ರೀ ಪ್ರಶಸ್ತಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ : ಡಾ.ಬಿ.ರಾಜಶೇಖರಪ್ಪ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ : ಇತಿಹಾಸ ಅಕಾಡೆಮಿಯ ಅತ್ಯುನ್ನತ ಇತಿಹಾಸ ಸಂಸ್ಕೃತಿ ಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಚಿತ್ರದುರ್ಗದ ಸಂಶೋಧಕ ಡಾ.ಬಿ.ರಾಜಶೇಖರಪ್ಪನವರನ್ನು ಅವರ ನಿವಾಸದಲ್ಲಿ ಕೋಟೆ ವಾಯುವಿಹಾರಿಗಳ ಸಂಘದಿಂದ ಸನ್ಮಾನಿಸಲಾಯಿತು.

ಬಿ.ರಾಜಶೇಖರಪ್ಪನರನ್ನು ಸನ್ಮಾನಿಸಿ ಮಾತನಾಡಿದ ಕೋಟೆ ವಾಯುವಿಹಾರಿಗಳ ಸಂಘದ ಅಧ್ಯಕ್ಷ ಆರ್.ಸತ್ಯಣ್ಣ ಸಂಶೋಧನೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ
ಬಿ.ರಾಜಶೇಖರಪ್ಪನವರು ಇನ್ನು ಹೆಚ್ಚು ಸಂಶೋಧನೆಗಳನ್ನು ಕೈಗೊಂಡು ಇತಿಹಾಸಕ್ಕೆ ನಿರಂತರ ಸೇವೆ ಸಲ್ಲಿಸುವಂತಾಗಲಿ. ಇವರ ಸೇವೆಯನ್ನು ಗುರುತಿಸಿ ಇತಿಹಾಸ ಅಕಾಡೆಮಿ ರಾಜ್ಯ ಮಟ್ಟದ ಪ್ರಶಸ್ತಿ ಹಾಗೂ ಒಂದು ಲಕ್ಷ ರೂ. ನೀಡಿ ಗೌರವಿಸುತ್ತಿರುವುದು ಚಿತ್ರದುರ್ಗಕ್ಕೆ ಸಂದ ಕೀರ್ತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಬಿ.ರಾಜಶೇಖರಪ್ಪವರು ಅಪಾರ ಅಭಿಮಾನಿಗಳು ನನ್ನ ಮೇಲೆ ಗೌರವವಿಟ್ಟು ಸನ್ಮಾನಿಸುತ್ತಿರುವುದಕ್ಕೆ ಚಿರಋಣಿಯಾಗಿದ್ದೇನೆ. ನ.7 ರಂದು ಇತಿಹಾಸ ಅಕಾಡೆಮಿ ಪಾವಗಡದಲ್ಲಿ ಪ್ರದಾನ ಮಾಡಲಿರುವ ಇತಿಹಾಸ ಸಂಸ್ಕøತಿಶ್ರಿ ಪ್ರಶಸ್ತಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ. ಸ್ಮಾರಕಗಳ ಸಂರಕ್ಷಣಾ ಸಮಿತಿಯನ್ನು ಪುನರ್ ರಚಿಸುವ ಅಗತ್ಯವಿದೆ. ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ಸದಾ ಸಂಶೋಧನೆಯಲ್ಲಿ ತೊಡಗಿರುತ್ತೇನೆಂದು ಹೇಳಿದರು.

ಮಡಿವಾಳ ಸಮಾಜದ ಜಿಲ್ಲಾಧ್ಯಕ್ಷ ಬಿ.ರಾಮಜ್ಜ ಮಾತನಾಡಿ ಸಂಶೋಧನೆಯ ಮೂಲಕವೇ ಮನೆ ಮಾತಾಗಿರುವ ಡಾ.ಬಿ.ರಾಜಶೇಖರಪ್ಪನವರಿಗೆ ಇತಿಹಾಸ ಅಕಾಡೆಮಿ ನೀಡುವ ಅತ್ಯುನ್ನತ ಇತಿಹಾಸ ಸಂಸ್ಕøತಿಶ್ರಿ ಪ್ರಶಸ್ತಿ ಸಿಕ್ಕಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಇನ್ನು ಹೆಚ್ಚು ಕಾಲ ಸಂಶೋಧನೆಯಲ್ಲಿ ತೊಡಗಿಕೊಳ್ಳುವಂತೆ ಭಗವಂತ ಶಕ್ತಿ ನೀಡಲಿ ಎಂದು ಶುಭ ಹಾರೈಸಿದರು.

ಮದಕರಿನಾಯಕ ಸಾಂಸ್ಕøತಿಕ ಕೇಂದ್ರದ ಅಧ್ಯಕ್ಷ ಡಿ.ಗೋಪಾಲಸ್ವಾಮಿ ನಾಯಕ ಮಾತನಾಡುತ್ತ ಇತಿಹಾಸ ಸಂಸ್ಕøತಿಶ್ರಿ ಪ್ರಶಸ್ತಿ ಸಿಕ್ಕಿರುವುದು ನಿಮ್ಮ ಸಂಶೋಧನೆಗೆ ತಕ್ಕ ಫಲ. ಮುಂದಿನ ದಿನಗಳಲ್ಲಿ ಇನ್ನು ಉನ್ನತ ಮಟ್ಟದ ಪ್ರಶಸ್ತಿಗಳು ಲಭಿಸಲಿ ಎಂದು ಆಶಿಸಿದರು.

ಇಂದೂಶೇಖರ್, ಶ್ರೀಮತಿ ಯಶೋಧ ಬಿ.ರಾಜಶೇಖರಪ್ಪ ಈ ಸಂದರ್ಭದಲ್ಲಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment