Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಳಲ್ಕೆರೆ | ಅಮೃತಾಪುರದಲ್ಲಿ ರಾಷ್ಟ್ರಿಯ ಏಕತಾ ದಿನಾಚರಣೆ

Facebook
Twitter
Telegram
WhatsApp

 

ಸುದ್ದಿಒನ್, ಹೊಳಲ್ಕೆರೆ,ಅಕ್ಟೋಬರ್.31 : ಭಾರತ ದೇಶ ನಮ್ಮೆಲ್ಲರ ಜನ್ಮಭೂಮಿ. ಭಾರತದ ಏಕತೆ ಹಾಗು ಅಖಂಡತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯ ಶಿಕ್ಷಕರಾದ ಡಿ.ಸಿದ್ದಪ್ಪ ಹೇಳಿದರು.

ಅಮೃತಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಸರದಾರ ವಲ್ಲಭಬಾಯಿಯವರ ಜನ್ಮದಿನ ಹಾಗು ರಾಷ್ಟ್ರೀಯ ಏಕತಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸ್ವಾತಂತ್ರ್ಯ ಪೂರ್ವದಲ್ಲಿ ಹಾಗು ನಂತರದಲ್ಲಿ ಭಾರತ ದೇಶ ಬ್ರಿಟೀಷರು, ಪ್ರೆಂಚರು, ಪೋರ್ಚುಗೀಸರು ಮತ್ತು ವಿವಿಧ ದೇಶೀಯ ರಾಜರ ಸಂಸ್ಥಾನಗಳ ಆಳ್ವಿಕೆಯಲ್ಲಿ ಛಿದ್ರವಾಗಿದ್ದಿತು. ಇದನ್ನು ಹಿಡಿಯಾಗಿ ಒಂದು ಮಾಡಿ ಭಾರತ ಗಣರಾಜ್ಯ ಸ್ಥಾಪಿಸಿ, ಭಾರತದ ನೆಲ ಜಲಕ್ಕೆ ಭದ್ರತೆ ಹಾಗು ಎಲ್ಲ ಭಾರತ ನಿವಾಸಿಗಳಿಗೆ ರಕ್ಷಣೆ ಮತ್ತು ಗೌರವ ತಂದುಕೊಟ್ಟ ಧೀಮಂತ ಸ್ವಾತಂತ್ರ್ಯ ಹೋರಾಟಗಾರ ಸರದಾರ ವಲಭಬಾಯಿಯವರು.

ಭಾರತ ಸರ್ಕಾರದ ಮೊದಲ ಗೃಹ ಮಂತ್ರಿಗಳಾದ ಅವರು ದೇಶದ ಸಾರ್ವಭೌಮತೆ ಕಾಪಾಡಲು ಸುಸಜ್ಜಿತ ಸೈನ್ಯ ಹಾಗು ದಕ್ಷ ರಾಷ್ಟ್ರೀಯ ಪೋಲೀಸ್ ವ್ಯವಸ್ಥೆಯನ್ನು ನಿರ್ಮಿಸಿದರು. ಇಂದಿಗು ಭಾರತ ವಿಶ್ವದಲ್ಲಿ ಬಲಾಢ್ಯ ಸೇನೆ ಹೊಂದಿ ದೇಶದ ಗಡಿಗಳಲ್ಲಿ ಶತೃದಾಳಿಗಳ ಹಿಮ್ಮೆಟ್ಟಿಸುತ್ತ ಭಾರತದ ನೆಲ ಜಲ ರಕ್ಷಿಸುತ್ತಿವೆ. ಭಾರತದ ದೇಶವಾಸಿಗಳಾದ ನಾವೆಲ್ಲ ಸುರಕ್ಷಿತವಾಗಿ ನಮ್ಮ ಕೆಲಸ ಕಾರ್ಯಗಳ ಮಾಡುತ್ತ ಸಂತಸದ ಜೀವನ ನಡೆಸುತ್ತಿದ್ದೇವೆ. ಇದಕ್ಕೆ ಕಾರಣಪುರುಷರಾದ ಎಲ್ಲ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸೋಣ ಎಂದರು.

ಏಕತಾ ದಿನದ ಪ್ರತಿಜ್ಞಾ ವಿಧಿಯನ್ನು ಸಹಶಿಕ್ಷಕಿ ಜಿ.ಎನ್.ರೇಷ್ಮಾರವರು ವಿದ್ಯಾರ್ಥಿಗಳಿಗೆ ಬೋಧಿಸಿದರು. ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಗು ವಂದೇಮಾತರಂ ಹಾಡಿದರು. ಕಾರ್ಯಕ್ರಮದಲ್ಲಿ ಟಿ.ಪಿ.ಉಮೇಶ್, ಅಂಗನವಾಡಿ ಶಿಕ್ಷಕಿ ಜ್ಯೋತಿ ಕಾಶಿಪುರ, ಅಡಿಗೆ ಸಹಾಯಕರಾದ ತಿಮ್ಮಮ್ಮ, ಶಾರದಮ್ಮ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!