Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ : ಅನ್ಯಾಯವಾಗಿದ್ದರೆ ನ್ಯಾಯ ಕೊಡಿಸುತ್ತೇವೆ ಎಂದ ಸಚಿವ ಪರಮೇಶ್ವರ್

Facebook
Twitter
Telegram
WhatsApp

ತುಮಕೂರು: ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ಯಾಯವಾಗಿದ್ದರೆ ಅವರಿಗೆ ನ್ಯಾಯ ಒದಗಿಸಿಕೊಡುತ್ತೇವೆ. ಅವರು ಸಿಡಿ ವಿಚಾರಕ್ಕೆ ದಾಖಲೆಗಳನ್ನು ನೀಡಿದರೆ ಪೊಲೀಸರು ಅದರ ತನಿಖೆ ನಡೆಸುತ್ತಾರೆ ಎಂದಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಹನಿಟ್ರ್ಯಾಪ್ ಮೂಲಕ ನನ್ನ ಸಿಡಿ ಮಾಡಿಸಿದ್ದಾರೆ. ಸಿಬಿಐನಿಂದ ತನಿಖೆ ನಡೆಸಿದರೆ ಖಂಡಿತ ಸತ್ಯ ಹೊರಬರಲಿದೆ ಎಂದು ಆರೋಪ ಮಾಡಿದ್ದರು. ಹೀಗಾಗಿ ಸೂಕ್ತ ದಾಖಲೆ‌ ನೀಡಿದರೆ ತನಿಖೆ ನಡೆಸುತ್ತೇವೆ ಎಂದಿದ್ದಾರೆ.

ಇನ್ನು ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಗರಂ ಆದ ಗೃಹ ಸಚಿವ ಪರಮೇಶ್ವರ್, ರಾಜ್ಯ ಬರದಿಂದ ತತ್ತರಿಸಿದ್ದರೆ, ಕೇಂದ್ರದಿಂದ ಬಂದಿದ್ದಂತ ಅಧ್ಯಯನ ತಂಡದ ಅಧಿಕಾರಿಗಳಿಗೆ, ಇಲ್ಲಿನ ಬರ ಕಾಣಿಸುತ್ತಿಲ್ಲ. ಹಸಿರು ಚೆನ್ನಾಗಿದೆ ಎಂದು ವರದಿ ನೀಡಿದ್ದಾರೆ. ಇವರಿಗೆ ಕಣ್ಣು ಕಾಣಿಸುವುದಿಲ್ಲವೆ..? ಬರ ಅಂದಾಜಿಸಿ 17 ಸಾವಿರ ಕೋಟಿ ಹಣ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಆದರೆ ಇಲ್ಲಿಯ ತನಕ ಒಂದೇ ಒಂದು ಪೈಸೆ ಹಣವನ್ನು ಬಿಡುಗಡೆ ಮಾಡಿಲ್ಲ ಎಂದು ಬೇಸರ ಹೊರ ಹಾಕಿದ್ದಾರೆ.

 

ಸಿಎಂ ಸಿದ್ದರಾಮಯ್ಯ ಕೂಡ ಇತ್ತೀಚೆಗೆ ಈ ವಿಚಾರದ ಬಗ್ಗೆ ಬೇಸರ ಹೊರ ಹಾಕಿದ್ದರು. ಮನವಿ ಕಳುಹಿಸಿದ್ದರು ಕೂಡ ಕೇಂದ್ರದಿಂದ ಬರ ಪರಿಹಾರಕ್ಕಾಗಿ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ ಎಂದು ತಿಳಿಸಿದ್ದರು. ಎಲ್ಲೆಡೆ ಮಳೆ ಸಂಪೂರ್ಣವಾಗಿ ಹೋಗಿದ್ದು, ರೈತರ ಜಮೀನಿನಲ್ಲಿ ಹಾಕಿರುವ ಪೈರುಗಳೆಲ್ಲಾ ಸೀದು ಹೋಗಿದೆ. ಜನ ಹೇಗೋ ಕಾಲದೂಡುತ್ತಾರೆ. ಆದರೆ ಈ ಬೇಸಿಗೆಗೆ ಜಾನುವಾರುಗಳ ಕಥೆ ಏನು ಎಂಬುದೇ ರೈತನ ಚಿಂತೆಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಪತ್ರ..!

  ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡಿ ಇಷ್ಟು ದಿನಗಳಾದರೂ ಪ್ರಜ್ವಲ್ ರೇವಣ್ಣ ಅವರು ರಾಜ್ಯಕ್ಕೆ ಬರುತ್ತಿಲ್ಲ, ಎಸ್ಐಟಿ ಅಧಿಕಾರಿಗಳಿಂದಾನೂ ಅವರನ್ನು ಕರೆತರುವುದಕ್ಕೆ ಆಗುತ್ತಿಲ್ಲ.‌ ದೇಶದಿಂದ ದೇಶಕ್ಕೆ ಓಡಾಡುತ್ತಾ ಪ್ರಜ್ವಲ್ ರೇವಣ್ಣ ಆರಾಮವಾಗಿ

ಮಳೆಗೆ ನಲುಗಿದ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ..!

ಬೆಂಗಳೂರು: ಕಳೆದ ಬಾರಿ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿತ್ತು. ಅದರ ಪರಿಣಾಮ ರಾಜ್ಯದೆಲ್ಲೆಡೆ ಭೀಕರ ಬರಗಾಲವನ್ನು ಎದುರಿಸಿದಂತೆ ಆಗಿತ್ತು. ಆದರೆ ಈ ವರ್ಷ ಆರಂಭದಲ್ಲಿಯೇ ಜಲಧಾರೆಯ ಸದ್ದು ಜೋರಾಗಿದೆ. ಆದರೆ ಮೊದಲ ಮಳೆಯಿಂದಾನೇ

ಮೊಳಕಾಲ್ಮೂರು| ಆಸ್ಪತ್ರೆಯಲ್ಲಿ ಕರೆಂಟ್ ಕಟ್, ಮೇಣದಬತ್ತಿ ಹಚ್ಚಿ ರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯರು

  ಸುದ್ದಿಒನ್, ಮೊಳಕಾಲ್ಮೂರು, ಮೇ. 21 : ಮಳೆ ಬಂದಾಗ ಒಂದಷ್ಟು ಸಮಸ್ಯೆಗಳಾಗುವುದು ಸಾಮಾನ್ಯ. ವಿದ್ಯುತ್ ಸಮಸ್ಯೆ, ರಸ್ತೆಗಳ ಕುಸಿತ, ನೀರು ತುಂಬಿಕೊಳ್ಳುವುದು. ಇದೆಲ್ಲದಕ್ಕೂ ಮುಂಜಾಗ್ರತ ಕ್ರಮ ತೆಗೆದುಕೊಳ್ಳಲೆಂದೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿರುತ್ತದೆ.

error: Content is protected !!