Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ನಾಯಕರಿಗೆ ಸುರ್ಜೆವಾಲ ಎಚ್ಚರಿಕೆ : ಬಣದ ರಾಜಕೀಯಕ್ಕೆ ಇಲ್ಲಿಂದ ಸಿಗುತ್ತಾ ಬ್ರೇಕ್..?

Facebook
Twitter
Telegram
WhatsApp

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲೂ ಬಣ ರಾಜಕೀಯ ಹೊರತಾಗಿ ಏನು ಇಲ್ಲ. ಡಿಸಿಎಂ ಡಿಕೆ ಶಿವಕುಮಾರ್ ಪರ ಒಂದಷ್ಟು ಮಂದಿ, ಸಿಎಂ ಸಿದ್ದರಾಮಯ್ಯ ಪರ ಒಂದಷ್ಟು ಮಂದಿ ಆಗಾಗ ಬ್ಯಾಟ್ ಬೀಸುತ್ತಲೆ ಇರುತ್ತಾರೆ. ಈ ಬಣ ರಾಜಕೀಯಕ್ಕೆ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

 

ಪಕ್ಷದ ಸಂಘಟನೆ, ಅಧಿಕಾರ ಹಾಗೂ ಸರ್ಕಾರದ ವಿಚಾರವಾಗಿ ಪಕ್ಷದ ಯಾವುದೇ ನಾಯಕರು ಸರ್ಕಾರದ ವಿಚಾರವಾಗಿ ಸಾರ್ವಜನಿಕವಾಗಿ ಮಾತನಾಡುವಂತೆ ಇಲ್ಲ. ಪಕ್ಷದ ಶಿಸ್ತು ಮೀರಿ, ಯಾರೇ ಮಾತನಾಡಿದರು ಕಠಿಣ ಕ್ರಮ ಕೈಗೊಳ್ಳಲಾಗುವುದು. ಪಕ್ಷದ ಶಾಸಕರು ತಮ್ಮ ಜಿಲ್ಲೆಗಳಲ್ಲಿ ಆಗಬೇಕಾದ ಅಭಿವೃದ್ಧಿ, ರಾಜ್ಯದ ಜನರಿಗೆ ಅನುಕೂಲವಾಗುವಂತಹ ನೀತಿಗಳ ಬಗ್ಗೆ ಯೋಚಿಸಿ, ಸಲಹೆ ನೀಡುವತ್ತ ಗಮನಹರಿಸಬೇಕು. ಅಧಿಕಾರ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವಂತೆ ಇಲ್ಲ. ಇದು ಶಿಸ್ತು ಉಲ್ಲಂಘನೆಯಾಗುತ್ತದೆ ಎಂದಿದ್ದಾರೆ.

 

ನಿಮ್ಮ ಧ್ವನಿಗೆ ಪಕ್ಷದಲ್ಲಿ ಅವಕಾಶವಿದೆ. ನೀವುಗಳು ನಿಮ್ಮ ದೂರು, ಸಲಹೆ, ಅಭಿಪ್ರಾಯಗಳನ್ನು ಮುಖ್ಯಮಂತ್ರಿಗಳು, ಪಕ್ಷದ ಅಧ್ಯಕ್ಷರು ಹಾಗೂ ನನ್ನ ಬಳಿ ಚರ್ಚೆ ಮಾಡಿ. ಅದರ ಹೊರತು ಸಾರ್ವಜನಿಕವಾಗಿ ಅಲ್ಲ ಎಂದಿದ್ದಾರೆ. ಇಂದು ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಚರ್ಚೆಗಳು ನಡೆದಿವೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ರಣದೀಪ್ ಸುರ್ಜೆವಾಲ್, ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಸೇರಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮುಂದಿನ ಲೋಕಸಭಾ ಚುನಾವಣೆಯ ತಯಾರಿ, ಅಭ್ಯರ್ಥಿಗಳ ಆಯ್ಕೆ, ನಿಗಮ ಮಂಡಳಿಗಳ ನೇಮಲ ಹಾಗೂ ಶಾಸಕರ ನೇರವಾದ ಆರೋಪಗಳಿಗೆ ಸಂಬಂಧಿಸಿದಂತೆ ಚರ್ಚೆಗಳು ನಡೆದಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!