Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ ಇಲ್ಲ: ಬಿ ಸಿ ಪಾಟೀಲ್

Facebook
Twitter
Telegram
WhatsApp

ಬೆಂಗಳೂರು: ರಾಜ್ಯದಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ ಇಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಪ್ರತಿಕಾ ಪ್ರಕಟಣೆ ಮೂಲಕ ತಿಳಿಸಿದರು. ರಾಜ್ಯದಲ್ಲಿ ಅಕ್ಟೋಬರ್ವರೆಗೆ 9,39,000 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯವಿದ್ದು, ಯಾವುದೇ ರೀತಿಯಲ್ಲಿ ರಸಗೊಬ್ಬರದ ಕೊರತೆ ಇರುವುದಿಲ್ಲ ಎಂದರು.

ರಾಜ್ಯದಲ್ಲಿ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗೆ ಅಕ್ಟೋಬರ್ 2021 ರಿಂದ ಮಾರ್ಚ್ 2022 ರವರೆಗೆ ಡಿಎಪಿ, ಎಂಒಪಿ, ಕಾಂಪ್ಲೆಕ್ಸ್, ಯೂರಿಯಾ ಗೊಬ್ಬರಗಳಿಗೆ 16 ಲಕ್ಷದ 94 ಸಾವಿರ ಮೆಟ್ರಿಕ್ ಟನ್ ಬೇಡಿಕೆಯಿದ್ದು, ಅಕ್ಟೋಬರ್ 2021ರ ಅಂತ್ಯದವರೆಗೆ 2,80,456 ಮೆಟ್ರಿಕ್ ಟನ್ ವಿವಿಧ ಗ್ರೇಡ್ಗಳ ರಸಗೊಬ್ಬರಗಳಿಗೆ ಬೇಡಿಕೆ ಇದೆ.

ಸೆಪ್ಟೆಂಬರ್ 2021ರ ಅಂತ್ಯದವರೆಗೆ 7,08850 ಮೆಟ್ರಿಕ್ ಟನ್ ಒಳಗೊಂಡಂತೆ ಅಕ್ಟೋಬರ್ 2,30,000 ಮೆಟ್ರಿಕ್ ಟನ್ ವಿವಿಧ ಗ್ರೇಡ್ಗಳ ರಸಗೊಬ್ಬರ ಸರಬರಾಜಾಗಿದೆ ಎಂದು ತಿಳಿಸಿದ್ದಾರೆ.ಒಟ್ಟು ರಾಜ್ಯದಲ್ಲಿ ಅಕ್ಟೋಬರ್ಗೆ 9,39,000 ಮೆಟ್ರಿಕ್ ಟನ್ ಲಭ್ಯವಿರುತ್ತದೆ. 26/10/2021ರವರೆಗೆ 3,33,000 ಮೆಟ್ರಿಕ್ ಮಾರಾಟವಾಗಿದೆ. ಉಳಿದ 6,05,760 ಮೆಟ್ರಿಕ್ ಟನ್ ರಸಗೊಬ್ಬರ (ಡಿಎಪಿ 33,570 ಮೆಟ್ರಿಕ್ ಟನ್, ಎಂಒಪಿ 28,420 ಮೆಟ್ರಿಕ್ ಟನ್, ಕಾಂಪ್ಲೆಕ್ಸ್ 3,16,140 ಮೆಟ್ರಿಕ್ ಟನ್ ಹಾಗೂ ಯೂರಿಯಾ 2,27,630 ಮೆಟ್ರಿಕ್ ಟನ್) ದಾಸ್ತಾನು ಇದೆ ಎಂದಿದ್ದಾರೆ.

ಮುಂಗಾರು ಹಂಗಾಮಿನಲ್ಲಿ 26,47,000 ಮೆಟ್ರಿಕ್ ಟನ್ ವಿವಿಧ ಗ್ರೇಡ್ನ ರಸಗೊಬ್ಬರಕ್ಕೆ ಬೇಡಿಕೆಯಿರುವುದನ್ನು ಯಾವುದೇ ಕೊರತೆಯಿಲ್ಲದೇ ಪೂರೈಸಲಾಗಿದೆ. ಆರಂಭಿಕ ಶಿಲ್ಕು(11,54,320 ಮೆ.ಟ)ಹಾಗೂ 24 ಲಕ್ಷ ಮೆಟ್ರಿಕ್ ಟನ್ ಸರಬರಾಜು ಒಳಗೊಂಡಂತೆ ಒಟ್ಟು 35,63,000 ಮೆಟ್ರಿಕ್ ಟನ್ ವಿವಿಧ ರಸಗೊಬ್ಬರ ಮುಂಗಾರಿನಲ್ಲಿ ಪೂರೈಸಲಾಗಿದೆ. ಮುಂಗಾರಿನಲ್ಲಿ 28,54,000 ಮೆಟ್ರಿಕ್ ಟನ್ ವಿವಿಧ ಗ್ರೇಡ್ನ ರಸಗೊಬ್ಬರ ಮಾರಾಟವಾಗಿದ್ದು, ಪೂರೈಕೆಯ ಬಳಿಕವೂ ಸೆಪ್ಟೆಂಬರ್ 2021 ಅಂತ್ಯಕ್ಕೆ ಸೆಪ್ಟೆಂಬರ್ 2021ರ ಅಂತ್ಯದವರೆಗೆ 7,08850 ಮೆಟ್ರಿಕ್ ಟನ್ ದಾಸ್ತಾನು ಇರುತ್ತದೆ. ಈ ದಾಸ್ತಾನನ್ನು ಹಿಂಗಾರಿಗೂ ಬಳಕೆ ಮಾಡಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!