ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ,ನವೆಂಬರ್.02 : ಕೇಂದ್ರ ಸರ್ಕಾರದ ಖೇಲೋ ಇಂಡಿಯಾದಿಂದ ಮಕ್ಕಳು ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಲು ಸಹಕಾರಿಯಾಗಲಿದೆ ಎಂದು ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಸುಚೇತ ನೆಲವಗಿ ಹೇಳಿದರು.
ಸ್ಟೇಡಿಯಂ ರಸ್ತೆಯಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಷಟಲ್ ಬ್ಯಾಡ್ಮಿಂಟನ್ ಉಚಿತ ಕೋಚಿಂಗ್ನಲ್ಲಿ ಕ್ರೀಡಾಪಟುಗಳಿಗೆ ಉಚಿತ ಸಮವಸ್ತ್ರ, ಪರಿಕರಗಳನ್ನು ವಿತರಿಸಿ ಮಾತನಾಡಿದರು.
ಖೇಲೋ ಇಂಡಿಯಾ ಉದಯೋನ್ಮುಖ ಕ್ರೀಡಾಪಟುಗಳು ತಮ್ಮಲ್ಲಿರುವ ಪ್ರತಿಭೆಯನ್ನು ಹೊರತರಲು ನೆರವಾಗಲಿದೆ. ಹಾಗಾಗಿ ಉಚಿತ ಕೋಚಿಂಗನ್ನು ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಅಂತರಾಷ್ಟ್ರೀಯ ಕ್ರೀಡಾಪಟು ಎನ್.ಡಿ.ಕುಮಾರ್ ಮಾತನಾಡಿ ಶಿಕ್ಷಣದ ಜೊತೆ ಮಕ್ಕಳು ಆಟಗಳಲ್ಲಿಯೂ ತೊಡಗಬೇಕು. ಆಗ ಮಾತ್ರ ಜೀವನದಲ್ಲಿ ಏನಾದರೂ ಸಾಧನೆ ಮಾಡಲು ಸಾಧ್ಯ. ಮಕ್ಕಳನ್ನು ಕೇವಲ ಅಂಕ ಗಳಿಕೆಯ ಯಂತ್ರಗಳನ್ನಾಗಿ ಮಾಡುವ ಬದಲು ಬಯಲು ಆಟದಲ್ಲಿ ತೊಡಗಿಕೊಳ್ಳುವಂತೆ ಪೋಷಕರುಗಳು ಉತ್ತೇಜನ ನೀಡಬೇಕು. ಇಂದಿನ ದಿನಗಳಲ್ಲಿ ಮಕ್ಕಳನ್ನು ಮೊಬೈಲ್ ಗೀಳಿನಿಂದ ಹೊರತರುವ ಜವಾಬ್ದಾರಿ ಶಿಕ್ಷಕರು ಹಾಗೂ ಪೋಷಕರುಗಳ ಮೇಲಿದೆ ಎಂದು ಹೇಳಿದರು.
ಷಟಲ್ ಬ್ಯಾಡ್ಮಿಂಟನ್ ಕೋಚ್ ಗುರುಮೂರ್ತಿ, ಬೆಸ್ಕಾಂ ಅಧಿಕಾರಿ ನಾಗರಾಜು ಈ ಸಂದರ್ಭದಲ್ಲಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್