Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆಯಿಂದ ನಮ್ಮ ಆಟ ಎಂದರೆ ದುಡ್ಡು ಹಂಚುವುದಾ ಸೋಮಣ್ಣನವರೇ ?

Facebook
Twitter
Telegram
WhatsApp

ವಿಜಯಪುರ: ಇವತ್ತು ಸಾಯಂಕಾಲದ ತನಕ ಹೆಚ್‌.ಡಿ.ಕುಮಾರಸ್ವಾಮಿ ಅವರನ್ನು ಸಿಂಧಗಿಯಲ್ಲಿ ಫ್ರೀ ಆಗಿ ಬಿಟ್ಟುಬಿಟ್ಟಿದ್ದೇವೆ. ನಾಳೆಯಿಂದ ನಮ್ಮ ಆಟ ಶುರುವಾಗುತ್ತದೆ ಎಂದು ಉಪ ಚುನಾವಣೆ ಬಹಿರಂಗ ಪ್ರಚಾರದ ಅಂತ್ಯವಾಗುವುದಕ್ಕೆ ಮೊದಲು ಹೇಳಿಕೆ ನೀಡಿರುವ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡರು.

ನಾಳೆಯಿಂದ ನಮ್ಮ ಆಟ ಆರಂಭ ಎಂದರೆ ಅರ್ಥವೇನು? ಆಟ ಎಂದರೆ ದುಡ್ಡು ಹಂಚುವುದಾ? ಎಂದು ಪ್ರಶ್ನಿಸಿದರು. ನಿಮ್ಮ ಆಟವನ್ನು ಬರೀ ಚುನಾವಣೆಗಷ್ಟೇ ಸೀಮಿತ ಮಾಡಿಕೊಳ್ಳುತ್ತೀರೋ ಅಥವಾ ಸುಳ್ಳು ಹೇಳಿಕೊಂಡು, ಸುಳ್ಳು ಜಾಹೀರಾತುಗಳನ್ನು ಕೊಟ್ಟುಕೊಂಡು ಐದು ಲಕ್ಷ ಮನೆ ಕೊಟ್ಟೆ, ಆರು ಲಕ್ಷ ಮನೆ ಕೊಟ್ಟೆ ಅಂತ ಹೇಳಿಕೊಂಡು ತಿರುಗ್ತೀರೋ? ಎಂದು ಸೋಮಣ್ಣ ಅವರಿಗೆ ಬಿಸಿ ಮುಟ್ಟಿಸಿದರು.

ಹಿಂದೆ ಐದು ವರ್ಷ ಆಡಳಿತ ನಡೆಸಿದಾಗ ಹಾಗೂ ಈಗ ಎರಡೂವರೆ ವರ್ಷದಿಂದ ಅಧಿಕಾರದಲ್ಲಿರುವ ಬಿಜೆಪಿ ಸರಕಾರದಿಂದ ಸಿಂಧಗಿ ಕ್ಷೇತ್ರಕ್ಕೆ ಯಾವುದೇ ಪ್ರಯೋಜನ ಆಗಿಲ್ಲ. ಈ ಕ್ಷೇತ್ರದತ್ತ ಸಚಿವರುಗಳು ತಲೆ ಹಾಕಿ ಮಲಗಿಲ್ಲ. ಆದರೆ, ನಾಳೆಯಿಂದ ಆಟ ಆಡೀವಿ ಎಂದು ಸಚಿವರು ಹೇಳಿರುವುದು ಬಿಜೆಪಿ ಉಪ ಚುನಾವಣೆಗಳನ್ನು ಹೇಗೆ ಗೆಲ್ಲುತ್ತಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದರು ಅವರು.

ಜೆಡಿಎಸ್‌ ಪಕ್ಷಕ್ಕೆ ಮತ ಹಾಕಿದರೆ ಬಿಜೆಪಿಗೆ ಮತ ಹಾಕಿದಂತೆ, ಜೆಡಿಎಸ್‌ ಬಿಜೆಪಿಯ ಬಿ ಟೀಂ ಎಂದು ಸಿದ್ದರಾಮಯ್ಯ ಅವರ ಸರಣಿ ಸುಳ್ಳು ಮಾತುಗಳನ್ನು ಕೇಳಿಕೇಳಿ ಮುಸ್ಲೀಮರಿಗೆ ಸಾಕಾಗಿ ಹೋಗಿದೆ. ಅವರಲ್ಲಿ ನಮ್ಮ ಪಕ್ಷದ ಬಗ್ಗೆ ಮಾತನಾಡಲು ಸರಕಿಲ್ಲ, ಜನರ ಮುಂದೆ ಮಾತನಾಡಲು ಅವರಲ್ಲಿ ಏನೂ ಉಳಿದಿಲ್ಲ. ಹೀಗಾಗಿ ಹೇಳಿದ್ದನ್ನೇ ಹೇಳ್ತಿದ್ದಾರೆ. ಗಾದೆ ಮಾತಿನಂತೆ “ಆಡಿದ್ದೇ ಆಡು ಕಿಸುಬಾಯಿ ದಾಸ” ಎನ್ನುವಂತೆ ಆಗಿದೆ ಸಿದ್ದರಾಮಯ್ಯ ಅವರ ಪರಿಸ್ಥಿತಿ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಸಿಂಧಗಿ ಕ್ಷೇತ್ರದಲ್ಲಿ ಜೆಡಿಎಸ್‌ ಪಕ್ಷಕ್ಕೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ದೇವೇಗೌಡರು ಹಾಗೂ ನಾನು ಈ ಕ್ಷೇತ್ರಕ್ಕೆ ಕೊಟ್ಟ ಕೊಡುಗೆಗಳನ್ನು ಜನರು ಮರೆತಿಲ್ಲ. ನಿರಂತರವಾಗಿ ದೇವೇಗೌಡರು, ನಾನು, ರೇವಣ್ಣ, ಪ್ರಜ್ವಲ್‌ ರೇವಣ್ಣ, ನಮ್ಮ ಶಾಸಕರು, ಮುಖಂಡರು ನಿರಂತರವಾಗಿ ಪ್ರಚಾರ ಮಾಡುತ್ತಿದ್ದೇವೆ. ಕ್ಷೇತ್ರದ ಪ್ರತಿ ಗ್ರಾಮಕ್ಕೂ ನಾವು ಭೇಟಿ ನೀಡಿದ್ದೇವೆ. ಬಹಿರಂಗ ಸಭೆಗಳ ಗೊಡವೆಯೇ ಇಲ್ಲದೆಯೇ ನೇರವಾಗಿ ಜನರ ಜತೆಯೇ ಸಂಪರ್ಕ ಸಾಧಿಸಿದ್ದೇವೆ, ಮನೆಗಳ ಜಗಲಿಯಲ್ಲೇ ಸಭೆಗಳನ್ನು ಮಾಡಿದ್ದೇವೆ. ಹೀಗಾಗಿ ಪಕ್ಷಕ್ಕೆ ಅತ್ಯುತ್ತಮ ಬೆಂಬಲ ಸಿಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಕ್ಷೇತ್ರಕ್ಕೆ ನಾವು ನೀಡಿರುವ ನೀರಾವರಿ ಯೋಜನೆಗಳ ಬಗ್ಗೆ ಜನರು ನಿರಂತರವಾಗಿ ಮಾತನಾಡುತ್ತಿದ್ದಾರೆ. ಆದರೆ ಕಾಂಗ್ರೆಸ್‌ ಮತ್ತು ಬಿಜೆಪಿಯ ಕೊಡುಗೆ ಈ ಕ್ಷೇತ್ರಕ್ಕೆ ಶೂನ್ಯ ಎಂಬುದನ್ನು ಜನರಿಗೆ ಗೊತ್ತಿದೆ ಎಂದು ಅವರು ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

error: Content is protected !!