Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪೇಜಾವರ ಶ್ರೀಗಳ ಮೇಲೆ ಬಿದ್ದ ತಕ್ಕಡಿ : ಈಗ ಶ್ರೀಗಳ ಆರೋಗ್ಯ ಹೇಗಿದೆ..?

---Advertisement---

ದೆಹಲಿ: ತುಲಭಾರ ನಡೆಸುತ್ತಿದ್ದ ವೇಳೆ ಪೇಜಾವರ ಶ್ರೀಗಳ ತಲೆಯ ಮೇಲೆ ತಕ್ಕಡಿಯ ಸರಳುಗಳು ಬಿದ್ದಿವೆ. ಸದ್ಯ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿಗಳು ಅಪಾಯದಿಂದ ಪಾರಾಗಿದ್ದಾರೆ. ದೆಹಲಿಯ ಪೇಜಾವರದ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಪೇಜಾವರ ಶ್ರೀಗಳಿಗೆ 60 ವರ್ಷ ತುಂಬಿದೆ. ಈ ಸುಸಮಯದಲ್ಲಿ ಶ್ರೀಗಳ ಪ್ರಸನ್ನಾಭಿನಂದನ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಭಕ್ತರೆಲ್ಲಾ ಸೇರಿ ಶ್ರೀಗಳಿಗೆ ತುಲಭಾರ ನಡೆಸಿದ್ದಾರೆ. ತುಲಭಾರದ ವೇಳೆ ಅವಘಡ ಒಂದು ಸಂಭವಿಸಿದ್ದು, ತಕ್ಕಡಿಯ ಚೈನ್ ಕಟ್ ಆಗಿ ಶ್ರೀಗಳ ತಲೆಯ ಮೇಲೆ ಬಿದ್ದಿದೆ.

ಶ್ರೀಗಳ ಮೇಲೆ ಶ್ರೀಕೃಷ್ಣ ಪರಮಾಪ್ತನ ಆಶೀರ್ವಾದವಿತ್ತು ಎನಿಸುತ್ತದೆ. ಅದಕ್ಕೆ ಶ್ರೀಗಳಿಗೆ ಅಷ್ಟೇನು ತೊಂದರೆ ಆಗಿಲ್ಲ. ತಲೆಗೆ ಕೊಂಚ ಪರಚಿದ ಗಾಯದಂತೆ ಆಗಿದೆ. ಶ್ರೀಗಳು ಆರೋಗ್ಯವಾಗಿದ್ದಾರೆ ಎನ್ನಲಾಗಿದ್ದು, ಅದರ ಜೊತೆಗೆ ಘಟನೆಯ ಬಳಿಕ ನಾಲ್ಕೈದು ಕಾರ್ಯಕ್ರಮದಲ್ಲೂ ಭಾಗವಹಿಸಿದ್ದಾರೆ ಎನ್ನಲಾಗಿದೆ. ಶ್ರೀಗಳು ಆರೋಗ್ಯವಾಗಿದ್ದಾರೆ ಎಂಬುದನ್ನು ಕೇಳಿದ ಭಕ್ತವೃಂದ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...