ನಾನೇ ಸಿಎಂ ಗೊಂದಲದ ನಡುವೆ ಬ್ರೇಕ್ ಫಾಸ್ಟ್ ಮೀಟಿಂಗ್ : ಏನೆಲ್ಲಾ ಚರ್ಚೆಯಾಗಲಿದೆ..?

suddionenews
1 Min Read

ಬೆಂಗಳೂರು: ಇತ್ತಿಚೆಗೆ ಕಾಂಗ್ರೆಸ್ ನಲ್ಲಿ ನಾನೇ ಸಿಎಂ ಎಂಬ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಷ್ಟೇ ಅಲ್ಲ ಮನಸ್ತಾಪಗಳಿಗೂ ದಾರಿ ಮಾಡಿಕೊಟ್ಟಿದೆ. ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಒಂದೇ ವೇದಿಕೆಯಲ್ಲಿ ಕುಳಿತರು ಮಾತನಾಡಿಲ್ಲ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ಕರೆದಿದ್ದಾರೆ.

ಸಿಎಂ ನಿವಾಸ ಕಾವೇರಿಯಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಅರೆಂಜ್ ಮಾಡಿದ್ದಾರೆ. ಡಿಕೆ ಶಿವಕುಮಾರ್ 15ಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಹಾಜರಾಗಲಿದ್ದಾರೆ. ಎಐಸಿಸಿ ನಾಯಕರು ಕೊಟ್ಟ ಸೂಚನೆಯನ್ನು ಸಚಿವರಿಗೆ ತಿಳಿಸಲು ಈ ಮೀಟಿಂಗ್ ಮಾಡಲಾಗುತ್ತಿದೆ.

ಲೋಕಸಭೆ ಚುನಾವಣೆಗೆ ತಯಾರಿ, ಗ್ಯಾರಂಟಿ ಯೋಜನೆಗಳನ್ನು ಪಡೆಯುತ್ತಿರುವವರಿಗೆ ಇದು ಕಾಂಗ್ರೆಸ್ ಭರವಸೆ ಎಂದು ಮನದಟ್ಟು ಮಾಡುವುದು. ಆಡಳಿತ ಪಕ್ಷದ ಶಾಸಕರ ಬೇಕು – ಬೇಡಗಳ ಬಗ್ಗೆ ಕಿವಿಯಾಗುವುದು. ಗೊಂದಲದ ಹೇಳಿಕೆಗಳಿಗೆ ಬ್ರೇಕ್ ಹಾಕುವುದು ಸೇರಿದಂತೆ ಹಲವು ವಿಚಾರಗಳ ಚರ್ಚೆ ನಡೆಯಲಿದೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks