Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಾಸನಾಂಬೆ ಉತ್ಸವದ ಕಳಸ ಪ್ರತಿಷ್ಠಾಪನೆಗೆ ಆಹ್ವಾನ ನೀಡದೆ ಇರುವ ಕಾರಣ : ಶಾಸಕ ಸ್ವರೂಪ್ ಪ್ರಕಾಶ್ ಗರಂ

---Advertisement---

ಹಾಸನ: ವರ್ಷಕ್ಕೊಮ್ಮೆ ತೆರೆಯುವ ಹಾಸನಾಂಬೆ ದೇವಸ್ಥಾನಕ್ಕೆ ಭಕ್ತಾಧಿಗಳ ದಂಡೇ ಹರಿದು ಬರುತ್ತಿದೆ. ಇದರ ನಡುವೆ ಹಾಸನಾಂಬೆಯ ಉತ್ಸವ ಕಳಸ ಪೂಜೆಯೂ ನೆರವೇರಿದೆ. ಈ ಉತ್ಸವದಲ್ಲಿ ತಮ್ಮನ್ನು ಕಡೆಗಣಿಸಿದ್ದಾರೆಂದು ಶಾಸಕ ಸ್ವರೂಪ್ ಪ್ರಕಾಶ್ ಗರಂ ಆಗಿದ್ದಾರೆ. ಅದರ ಜೊತೆಗೆ ಜಿಲ್ಲಾಧಿಕಾರಿ ತಮ್ಮ ಪತಿಯ ಜೊತೆಗೆ ಪೂಜೆ ಮಾಡಿರುವ ವಿಡಿಯೋ ವೈರಲ್ ಆಗಿದೆ.

 

ಜಿಲ್ಲಾಧಿಕಾರಿ ಸಿ ಸತ್ಯಭಾಮ ಅವರನ್ನು ಪ್ರಶ್ನಿಸಿದ್ದಾರೆ. ದೇಗುಲದ ಕಳಸ ಪ್ರತಿಷ್ಠಾಪನೆ ವೇಳೆ ನನ್ನನ್ನು ಕರೆದಿಲ್ಲ. ನಾನೇನು ದನ ಕಾಯೋಕೆ ಇದ್ದೀನಾ. ಇಡೀ ಕುಟುಂಬದ ಜೊತೆಗೆ ಅವರು ಪೂಜೆ ಯಾಕೆ ಮಾಡಿದ್ದು ಎಂದು ಪ್ರಶ್ನಿಸಿದ್ದಾರೆ. ದೇಗುಲಕ್ಕೆ ಕಳಸ ಪ್ರತಿಷ್ಠಾಪನೆ ಮಾಡಲಾಗಿದೆ. ಆದರೆ ಸ್ಥಳೀಯ ಶಾಸಕನಾದ ನನ್ನನ್ನು ಕರೆದಿಲ್ಲ. ನಾನೇನು ದನ ಕಾಯೋಕೆ ಇದ್ದೀನಾ ಅಂತ ಹಾಸನಾಂಬೆ ದೇವಸ್ಥಾನದ ಆವರಣದಲ್ಲಿಯೇ ಆಕ್ರೋಶ ಹೊರ ಹಾಕಿದ್ದಾರೆ.

 

ನೀವೂ ನಿಮ್ಮ ಪತಿ ಕುಳಿತುಕೊಂಡು ಹೇಗೆ ಹೋಮ ಮಾಡಿದ್ದೀರಿ..? ತಮ್ಮ ಕುಟುಂಬದ ಪೂಜೆ ಎಂಬಂತೆ ಕುಳಿತು ಪೂಜೆ ಮಾಡಿದ್ದೀರಿ. ಹೆಲಿ ಟೂರಿಸಂಗೆ ಚಾಲನೆ ನೀಡಿದ್ದೀರಿ, ಅದಕ್ಕೂ ನನ್ನನ್ನು ಆಹ್ವಾನ ಮಾಡಿಲ್ಲ. ಶಾಸಕರನ್ನೂ ಸೌಜನ್ಯಕ್ಕಾದರೂ ಕರೆದಿಲ್ಲ ಎಂದು ಜಿಲ್ಲಾಧಿಕಾರಿ ವಿರುದ್ಧ ಗರಂ ಆಗಿದ್ದಾರೆ. ಇನ್ನು ಹಾಸನಾಂಬೆಯ ದೇಗುಲ ನವೆಂಬರ್ 15ರ ತನಕ ತೆಗೆಯಲಾಗಿರುತ್ತದೆ. ಆದರೆ ನವೆಂಬರ್ 14ಕ್ಕೆ ಸಾರ್ವಜನಿಕರಿಗೆ ದರ್ಶನ ಭಾಗ್ಯಾ ಮುಗಿಯುತ್ತದೆ. ಕಡೆಯ ದಿನ ಪೂಜಾ ವಿಧಿ ವಿಧಾನಗಳನ್ನು ಮುಗಿಸಿ ದೇವಸ್ಥಾನದ ಬಾಗಿಲು ಹಾಕಲಾಗುತ್ತದೆ. ಹೀಗಾಗಿ ಕಡೆಯ ದಿನ ದರ್ಶನ ಭಾಗ್ಯ ಇರುವುದಿಲ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...