Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನವಂಬರ್ 8 ರಂದು ನಾಡೋಜ ಹಂಪನಾ ರಚಿಸಿದ ಚಾರುವಸಂತ ನಾಟಕದ ಉಚಿತ ಪ್ರದರ್ಶನ

---Advertisement---

ಸುದ್ದಿಒನ್, ಚಿತ್ರದುರ್ಗ, ನವಂಬರ್.06 :ಹಿರಿಯ ಲೇಖಕ, ನಾಡೋಜ ಹಂಪನಾ ವಿರಚಿತ ದೇಸೀ ಕಾವ್ಯದ ರಂಗರೂಪ ‘ಚಾರುವಸಂತ’ ನಾಟಕದ ಪ್ರದರ್ಶನ ನವೆಂಬರ್ 8 ರಂದು ಬುಧವಾರ ತರಾಸು ರಂಗಮಂದಿರದಲ್ಲಿ ಜರುಗಲಿದೆ.

ದಕ್ಷಿಣ ಕನ್ನಡ ಜಿಲ್ಲೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 40 ಕ್ಕೂ ಹೆಚ್ಚು ನುರಿತ ಕಲಾವಿದರ ತಂಡ ಪ್ರದರ್ಶನ ನೀಡಲಿದೆ. ಡಾ. ನಾ. ದಾಮೋದರ ಶೆಟ್ಟಿ ರಂಗರೂಪ ನೀಡಿದ್ದಾರೆ. ಡಾ.ಜೀವನ್ ರಾಂ ಸುಳ್ಯ ನಿರ್ದೇಶಿಸಿದ್ದಾರೆ.

ಸಭಾ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರ ಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೆಶಕ ಎಸ್.ಕೆ.ಮಲ್ಲಿಕಾರ್ಜುನ, ಕಸಾಪ ಅಧ್ಯಕ್ಷ ಕೆ.ಎಂ. ಶಿವಸ್ವಾಮಿ, ಕಾರ್ಯದರ್ಶಿಗಳಾದ ಕೆ.ಪಿ.ಎಂ.ಗಣೇಶ್, ವಿ.ಶ್ರೀನಿವಾಸ್ ಮಳಲಿ ಭಾಗವಹಿಲಿದ್ದಾರೆ.

ಚಿತ್ರದುರ್ಗ ನಗರದಲ್ಲಿ ಒಂದೇ ಪ್ರದರ್ಶನ ಮಾತ್ರ ನಿಗದಿಯಾಗಿದೆ. ಸಂಜೆ 6 ಗಂಟೆಗೆ ಆರಂಭವಾಗುವ ನಾಟಕ ಪ್ರದರ್ಶನಕ್ಕೆ ಹದಿನೈದು ನಿಮಿಷ ಮುಂಚಿತವಾಗಿ ಆಗಮಿಸಿಲು ಕೋರಲಾಗಿದೆ. ನಾಟಕ ಪ್ರದರ್ಶನ ಉಚಿತವಾಗಿದ್ದು, ಸಾಹಿತ್ಯ ಹಾಗೂ ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಜಿಲ್ಲಾ ಕಸಾಪ ಅಧ್ಯಕ್ಷ
ಕೆ.ಎಂ. ಶಿವಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...