Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಯವರು ಬರ ಅಧ್ಯಯನ ಮಾಡುತ್ತಿರುವುದೇಕೆ..? : ಸಿದ್ದರಾಮಯ್ಯ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ರಾಜ್ಯದಲ್ಲಿ ಮಳೆಯಿಲ್ಲದೆ ಬರ ತಾಂಡವವಾಡುತ್ತಿದೆ. ಈಗಾಗಲೇ ಕೇಂದ್ರದಿಂದ ತಂಡವೊಂದು ಬಂದು, ಬರ ಅಧ್ಯಯನ ಕೂಡ ನಡೆಸಿದ್ದಾರೆ. ರಾಜ್ಯದಿಂದ ಕೂಡ ಬರ ಅಧ್ಯಯನ ವರದಿ ನೀಡಲಾಗಿದೆ. ಆದರೆ ಇಲ್ಲಿಯ ತನಕ ಬರ ಪರಿಹಾರ ಮಾತ್ರ ಒಂದು ರೂಪಾಯಿ ಬಂದಿಲ್ಲ. ಇದರ ನಡುವೆ ರಾಜ್ಯ ಬಿಜೆಪಿ ನಾಯಕರು ಕೂಡ ಬರ ಅಧ್ಯಯನ ನಡೆಸುತ್ತಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈಗಾಗಲೇ ಬರ ಅಧ್ಯಯನ ನಡೆಸಿದೆ. ರಾಜಗಯ ಬಿಜೆಪಿಯವರು ಏನು ಅಧ್ಯಯನ ಮಾಡುತ್ತಾರೆ..? ಬಿಜೆಪಿಯವರು ಕೇವಲ ರಾಜಕೀಯ ಅಧ್ಯಯನಕ್ಕೆ ಹೋಗುತ್ತಾರೆ. ಬಿಜೆಪಿಯವರು ಮೊದಲು ಕೇಂದ್ರ ಸರ್ಕಾರದ ಬಳಿ ಚರ್ಚಿಸಿ, ಅನುದಾನ ಕೊಡಿಸಲಿ. ಬರ ಅಧ್ಯಯನ ಮಾಡಬೇಡಿ ಎಂದು ನಾವೂ ಹೇಳಲು ಹೋಗಲ್ಲ. ಬಿಜೆಪಿಯಿಂದ 25 ಸಂಸದರಿದ್ದಾರಲ್ಲ, ಚರ್ಚಿಸಿ ಕೊಡಿಸಲಿ ನೋಡೋಣಾ ಎಂದಿದ್ದಾರೆ.

ಕೇಂದ್ರ ಸರ್ಕಾರದ ಬಳಿ ಬರ ಪರಿಹಾರಕ್ಕಾಗಿ 17 ಸಾವಿರ ಕೋಟಿ ಕೇಳಿದ್ದೇವೆ. 33,700 ಕೋಟಿ ನಷ್ಟವಾಗಿದೆ. ಮೊದಲು ಅದನ್ನು ಕೊಡಿಸಲಿ. ಸಂಸದರು, ಕೇಂದ್ರ ಸರ್ಕಾರದ ಬಳಿ ಚರ್ಚಿಸಿ ಕೊಡಿಸಲಿ. ನಮ್ಮ ಸಚಿವರ ಭೇಟಿಗೆ ಕೇಂದ್ರ ಸರ್ಕಾರ ಸಮಯವನ್ನೇ ಕೊಟ್ಟಿಲ್ಲ. ಕೇಳಿರುವ ಬರ ಪರಿಹಾರವನ್ನು ಸಂಸದರೆಲ್ಲಾ ಸೇರಿ, ಚರ್ಚಿಸಿ ಕೊಡಿಸಿ ಎಂದಿದ್ದಾರೆ.

ರಾಜ್ಯದ ಹಕವೆಡೆ ಭೂಮಿಗೆ ಬಿತ್ತಿದ ಬೀಜವೆಲ್ಲ ನಶಿಸಿ ಹೋಗಿದೆ. ಇನ್ನು ಎಷ್ಟೋ ಕಡೆ ಬೆಳೆದ ಪೈರು ಒಣಗಿ ಹೋಗುತ್ತೆ. ಸದ್ಯ ಎರಡು ದಿನದಿಂದ ರಾಜ್ಯದಲ್ಲಿ ಮಳೆ ಉತ್ತಮವಾಗಿ ಬರುತ್ತಿದೆ. ಬೇಸೆಇಗೆ ಕಾಲಕ್ಕೆ ಜಾನುವಾರುಗಳಿಗೆ ಏನು ಮಾಡೋದು ಎಂಬ ರೈತರ ಚಿಂತೆ ಈ ಮಳೆಯಿಂದ ನೀಗ ಬಹುದು. ಆದರೆ ಬರಗಾಲದ ಚಿಂತೆ ಕಡಿಮೆಯಾಗಲು ಸಾಧ್ಯವಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!