Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಗರೀಕರಿಗೆ ಬಂದೂಕು ತರಬೇತಿ ನೀಡುವುದು ಪೊಲೀಸ್ ಇಲಾಖೆ ಜವಾಬ್ದಾರಿ : ಎಸ್.ಪಿ.ಧರ್ಮೇಂದ್ರಕುಮಾರ್ ಮೀನಾ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ : ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 7899864552

ಸುದ್ದಿಒನ್, ಚಿತ್ರದುರ್ಗ, ನವೆಂಬರ್.07 : ನಾಗರೀಕರಿಗೆ ಬಂದೂಕು ತರಬೇತಿ ನೀಡಿ ಸರ್ಟಿಫಿಕೇಟ್ ಕೊಡುವುದು ಪೊಲೀಸ್ ಇಲಾಖೆ ಜವಾಬ್ದಾರಿ. ಇದರಿಂದ ನಾಗರೀಕರು ಹಾಗೂ ಇಲಾಖೆ ನಡುವೆ ಸ್ನೇಹ ಸಂಬಂಧ ಬೆಸೆಯುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ ಹೇಳಿದರು.

ದಾವಣಗೆರೆ ರಸ್ತೆ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ರೈಫಲ್ ಕ್ಲಬ್‍ಗೆ ಸೋಮವಾರ ಭೇಟಿ ನೀಡಿ ಚರ್ಚಿಸಿ ನಂತರ ಮಾತನಾಡಿದ ಅವರು ಪೊಲೀಸ್ ಫ್ರೆಂಡ್ಲಿಗೆ ಸಿ.ಆರ್.ಟಿ.ಸಿ. ಅನುಕೂಲವಾಗುತ್ತದೆ. ಬಂದೂಕು ತರಬೇತಿ ಶಿಬಿರವನ್ನು ವ್ಯಸ್ಥಿತಗಾಗಿ ಮುನ್ನಡೆಸಿಕೊಂಡು ಹೋಗಬೇಕು. ಪೊಲೀಸ್ ರೇಂಜ್ ಕೂಡ ಮಾಡಬಹುದು. ನನ್ನಿಂದ ಏನು ಸಹಾಯ ಬೇಕೋ ಅದನ್ನು ಪಡೆದುಕೊಳ್ಳಿ. ಆದರೆ ಕಾನೂನಾತ್ಮಕವಾಗಿ ಎಲ್ಲವೂ ಸರಿಯಿರಬೇಕು ಎಂದು ರೈಫಲ್ ಕ್ಲಬ್‍ನವರಿಗೆ ತಿಳಿಸಿದರು.

ಹೋಂಗಾರ್ಡ್ ಕಮಾಂಡೆಂಟ್ ಸಂಧ್ಯಾ ಸನ್ಮಾನ ಸ್ವೀಕರಿಸಿ ಮಾತನಾಡುತ್ತ ಪೊಲೀಸ್ ಇಲಾಖೆ ಜೊತೆ ಸೇರಿಕೊಂಡು ಹೋಂಗಾರ್ಡ್‍ನಿಂದಲು ಸಾಕಷ್ಟು ತರಬೇತಿಗಳನ್ನು ಕೊಡುತ್ತೇವೆ. ಬಂದೂಕು ತರಬೇತಿಯಿಂದ ಸಿಗುವ ಸರ್ಟಿಫಿಕೇಟ್‍ನಿಂದ ಬಂದೂಕು ಪರವಾನಗಿ ಪಡೆಯಲು ಸುಲಭವಾಗುತ್ತದೆ. ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಇಲಾಖೆಯೊಂದಿಗೆ ಕೈಜೋಡಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಹಿರಿಯ ನ್ಯಾಯವಾದಿ ಫಾತ್ಯರಾಜನ್ ಮಾತನಾಡಿ ಪ್ರತಿ ವರ್ಷವೂ ಸಿ.ಆರ್.ಟಿ.ಸಿ.ಯಿಂದ ನಾಗರೀಕರಿಗೆ ಬಂದೂಕು ತರಬೇತಿಯನ್ನು ನೀಡಲಾಗುತ್ತಿದೆ. ರಕ್ಷಣಾಧಿಕಾರಿಗಳಾಗಿ ತಾವುಗಳು ಕೊಡುವ ಎಲ್ಲಾ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಕಾನೂನು ಅಡಿಯಲ್ಲಿ ರೈಫಲ್ ಕ್ಲಬ್ ಕಾರ್ಯನಿರ್ವಹಿಸಲಿದೆ ಎಂದು ಭರವಸೆ ನೀಡಿದರು.

ರೈಫಲ್ ಕ್ಲಬ್ ಅಧ್ಯಕ್ಷ ಎಂ.ಕೆ.ಅನಂತರೆಡ್ಡಿ, ಕಾರ್ಯದರ್ಶಿ ಫೈಜುಲ್ಲಾ, ಖಜಾಂಚಿ ವೈ.ಬಿ.ಮಹೇಂದ್ರನಾಥ್, ಅರುಣ್, ಎಂ.ಸಿ.ಶಂಕರ್, ಗಾಯತ್ರಿ ಶಿವರಾಂ, ಸುರೇಶ್, ಮಹಮದ್ ಆಲಿ ಈ ಸಂದರ್ಭದಲ್ಲಿದ್ದರು.

ಫೈಲ್ವಾನ್ ಸದ್ದಾಂಹುಸೇನ್, ಮೃತ್ಯುಂಜಯ, ಸ್ಪೂರ್ತಿ ಇವರುಗಳನ್ನು ಸನ್ಮಾನಿಸಲಾಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!