Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಂದು 39 ಜನರನ್ನು ಬಲಿ ಪಡೆದಿದ್ದ ವಿಸಿ ನಾಲೆಗೆ ಮತ್ತೆ ಐವರು ಬಲಿ..!

---Advertisement---

ಮಂಡ್ಯ: ಬೀಗರ ಊಟ ಮುಗಿಸಿ ಹೊರಟಿದ್ದ ಐವರು ವಿಸಿ ನಾಲೆಗೆ ಬಲಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯಲ್ಲಿರುವ ವಿಸಿ ನಾಲೆ ಎಂದರೆ ಹೆದರಿಕೆ ಕಾಡುತ್ತದೆ. ಯಾಕಂದ್ರೆ 2018ರಲ್ಲಿ ಈ ನಾಲೆಯಲ್ಲಿ ದೊಡ್ಡ ದುರಂತವೇ ನಡೆದಿತ್ತು. ಕನಕಮರಡಿಯ ವಿಸಿ ನಾಲೆಯಲ್ಲಿ ಬಸ್ ದುರಂತದಿಂದ ಅಂದು 39 ಜನ ಅಸುನೀಗಿದ್ದರು. ಅಂದಿನಿಂದ ಸಾವಿನ ಕೂಪವಾಗಿರುವ ವಿಸಿ ನಾಲೆ, ನಿನ್ನೆ ಮಂಗಳವಾರ ಮತ್ತೆ ಐವರನ್ನು ಬಲಿ ಪಡೆದಿದೆ.

ಕಾರು ಚಾಲಕನ ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿದೆ. ತಿಪಟೂರಿನ ಕೈದಾಳ ಗ್ರಾಮದವರೇ ಈ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬೀಗರ ಮನೆಗೆ ಊಟಕ್ಕೆಂದು ಹೋಗಿದ್ದರು. ಆದರೆ ಬರುವಾಗ ಹೆಣವಾವಿ ಬಂದಿದ್ದಾರೆ. ಮೈಸೂರಿನ ಬೆಟ್ಟದೂರು ಗ್ರಾಮದಲ್ಲಿ ಬೀಗರ ಊಟದ ವ್ಯವಸ್ಥೆ ಮಾಡಲಾಗಿತ್ತು. ಸ್ನೇಹಿತರೊಂದಿಗೆ ಬೀಗರೂಟಕ್ಕೆ ಹೋಗಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದಿದೆ. ಈ ಘಟನೆಯಿಂದ ಐವರು ಅಸುನೀಗಿದ್ದಾರೆ.

ಚಂದ್ರಪ್ಪ, ಕೃಷ್ಣಪ್ಪ, ಧನಂಜಯ, ಬಾಬು ಹಾಗೂ ಜಯಣ್ಣ ಎನ್ನುವವರು ಈ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಕಾರು ನಾಲೆಗೆ ಬಿದ್ದಿದ್ದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರ ಸಹಾಯದಿಂದ ಕಾರನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡಿದ್ದಾರೆ. ಮೇಲಕ್ಕೆ ಎತ್ತುವ ವೇಳೆಗೆ ಕಾರಲ್ಲಿದ್ದವರೆಲ್ಲ ಸಾವನ್ನಪ್ಪಿದ್ದರು. ಮೃತದೇಹಗಳನ್ನ ಪಾಂಡವಪುರ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಮೃತದೇಹಗಳನ್ನು ಹೊರ ತೆಗೆದಾಗ, ಒಬ್ಬನ ಜೇಬಲ್ಲಿ ಮೊಬೈಲ್ ರಿಂಗಣಿಸಿದೆ. ಈ ಮೂಲಕ ಸಿಬ್ಬಂದಿಗಳು, ಸಂಬಂಧಿಕರಿಗೆ ವಿಷಯ ಮುಟ್ಟಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment