Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಪರೇಷನ್ ಹಸ್ತಕ್ಕೆ ಬ್ರೇಕ್ ಹಾಕಲು ಕುಮಾರಸ್ವಾಮಿ ಮಾಡಿದ ಪ್ಲ್ಯಾನ್ ಏನು..?

---Advertisement---

ಹಾಸನ: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಈ ತಯಾರಿಯ ನಡುವೆ ಕಾಂಗ್ರೆಸ್ ಪಕ್ಷದಿಂದ ಆಪರೇಷನ್ ಹಸ್ತ, ಬಿಜೆಪಿಯಿಂದ ಆಪರೇಷನ್ ಕಮಲದ ಆತಂಕವೂ ಇದೆ. ಮಾಜಿ ಸಿಎಂ ಕುಮಾರಸ್ವಾಮಿ ತಮ್ಮ ಶಾಸಕರನ್ನು ಉಳಿಸಿಕೊಳ್ಳುವುದಕ್ಕಾಗಿ ಹಾಸನದಲ್ಲಿ ಪ್ಲ್ಯಾನ್ ಮಾಡಿದ್ದಾರೆ.

 

ಆಪರೇಷನ್ ಹಸ್ತಕ್ಕೆ ಬಲಿಯಾಗದಂತೆ ಕಾಪಾಡಿಕೊಳ್ಳಲು ಹಾಸನಾಂಬೆಯ ಮೊರೆ ಹೋಗಿದ್ದಾರೆ. ಹಾಸನಾಂಬೆಯ ಸನ್ನಿಧಿಯಲ್ಲಿ ಪಕ್ಷ ಬಿಟ್ಟು ಹೋಗಲ್ಲ ಅಂತ ಶಾಸಕರು ಭರವಸೆ ನೀಡಿದ್ದಾರೆ. ಹಾಸನಾಂಬೆಯ ದರ್ಶನಕ್ಕೆ ಬಂದಿದ್ದ ಜೆಡಿಎಸ್ ಶಾಸಕರು, ಎರಡು ದಿನಗಳ ಕಾಲ ಅಲ್ಲಿಯೇ ವಾಸ್ತವ್ಯ ಹೂಡಿದ್ದರು. ತಮ್ಮ 17 ಶಾಸಕರೊಂದಿಗೆ ಕುಮಾರಸ್ವಾಮಿ ಸಭೆ ಕೂಡ ನಡೆಸಿದ್ದರು. ಸಭೆಯಲ್ಲಿ ಪಕ್ಷ ತೊರೆಯದಂತೆ ಸೂಚನೆ ನೀಡಿದ್ದರು. ಈ ಸೂಚನೆ ಬೆನ್ನಲ್ಲೇ ಶಾಸಕರು ಕೂಡ ಭರವಸೆ ನೀಡಿದ್ದರು.

 

ಬಿಜೆಪಿ ಜೊತೆಗೆ ಈ ಬಾರಿ ಮೈತ್ರಿ ಮಾಡಿಕೊಳ್ಳುತ್ತಿರುವುದು ಸಾಕಷ್ಟು ಕಾರ್ಯಜರ್ತರಿಗೆ ಇಷ್ಟವಾಗುತ್ತಿಲ್ಲ. ಮನಸ್ತಾಪಗಳು ಹೆಚ್ಚಾಗಿದೆ. ಇದೆ ಸಭೆಯಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಯಾಕೆ ಅನಿವಾರ್ಯ ಅನ್ನುವುದುನ್ನು ಕುಮಾರಸ್ವಾಮಿ ತಿಳಿಸಿದ್ದಾರೆ. ಲೋಕಸಭಾ ಚುನಾವಣೆಯ ಬಳಿಕ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಹೀಗಾಗಿ ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ಕಾಂಗ್ರೆಸ್ ನಾಯಕರ ಆಮಿಷಕ್ಕೆ ಒಳಗಾಗಬೇಡಿ ಎಂದು ಕುಮಾರಸ್ವಾಮಿ ಬುದ್ದಿ ಹೇಳಿದ್ದಾರೆ. ಕುಮಾರಸ್ವಾಮಿ ಅವರ ಮಾತಿನ ಬಳಿಕ, ಶಾಸಕರೆಲ್ಲ ಆಣೆ – ಪ್ರಮಾಣ ಮಾಡಿದ್ದಾರೆ. ಹಾಸನಾಂಬೆಯ ಮೇಲೆ ಪ್ರಮಾಣ ಮಾಡಿ, ಪಕ್ಷ ಬಿಟ್ಟು ಎಲ್ಲೂ ಹೋಗಲ್ಲ ಎಂಬುದನ್ನು ಹೇಳಿದ್ದಾರೆ. ಈ ಮೂಲಕ ಆಪರೇಷನ್ ಹಸ್ತಕ್ಕೆ ನಮ್ಮ ಶಾಸಕರು ಮರುಳಾಗಲ್ಲ ಎಂಬ ಭರವಸೆ ಕುಮಾರಸ್ವಾಮಿ ಅವರಿಗೂ ಬಂದಂತೆ ಕಾಣುತ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment