Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿಗೆ ಪ್ರವೇಶ, ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

---Advertisement---

ಚಿತ್ರದುರ್ಗ. ನ.9 : ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ 9 ಮತ್ತು 11ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ನ. 15 ರವರೆಗೆ ವಿಸ್ತರಿಸಲಾಗಿದೆ.              

https://cbseitms.nic.in/2023/nvsix/PrincipalLogin/getafflictionno  ವೈಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಚಿತ್ರದುರ್ಗ ಜಿಲ್ಲೆಯ ಖಾಯಂ ನಿವಾಸಿಯಾಗಿರಬೇಕು. ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿರುವ ಸರ್ಕಾರ, ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ 2023-24ರ ಶೈಕ್ಷಣಿಕ ಅವಧಿಯಲ್ಲಿ 8ನೇ ಮತ್ತು 10ನೇ ತರಗತಿಯಲ್ಲಿ ಓದುತ್ತಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

9ನೇ ತರಗತಿಗೆ ಅರ್ಜಿ ಸಲ್ಲಿಸಲು 2009 ಮೇ 05 ರಿಂದ 2011ರ ಜುಲೈ 31 ರ ನಡುವೆ ಜನಿಸಿರಬೇಕು. 11ನೇ ತರಗತಿಗೆ ಅರ್ಜಿ ಸಲ್ಲಿಸಲು 2007 ಜೂನ್ 01 ರಿಂದ 2009 ಜುಲೈ 31 ರ ನಡುವೆ ಜನಿಸಿರಬೇಕು. ಎಸ್‍ಸಿ, ಎಸ್‍ಟಿ, ಒಬಿಸಿ ವರ್ಗಗಳಿಗೆ ಸೇರಿದಂತೆ ಎಲ್ಲಾ ವರ್ಗದ ಅಭರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರೇಣುಕಾಸ್ವಾಮಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌: ಬೆದರಿಕೆ ಪ್ರಕರಣದ ಉದ್ಯಮಿ ಜೊತೆ ವಿಜಯಲಕ್ಷ್ಮಿ ಕಾಣಿಸಿಕೊಂಡಿದ್ದೇಕೆ?

ಏತ ನೀರಾವರಿ ಯೋಜನೆಗೆ ಭೂಮಿ ಪೂಜೆ: ಮಾಯಕೊಂಡ ಕ್ಷೇತ್ರ ಅಭಿವೃದ್ಧಿಗೆ ಸರ್ಕಾರದ ಬದ್ಧ : ಸಚಿವ ಎಸ್.ಎಸ್. ಮಲ್ಲಿಕಾರ್ಜುನ

ಕಾವ್ಯ ಬರೆಯುವುದು, ಕಟ್ಟುವುದು ಹೃದಯಕ್ಕೆ ಸಂಬಂಧಿಸಿದ ಕೆಲಸ: ಇತಿಹಾಸ ಸಂಶೋಧಕ ಡಾ. ಬಿ. ರಾಜಶೇಖರಪ್ಪ

ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದವನ ವಿರುದ್ಧ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು : ಬೊಮ್ಮಾಯಿ

ಬಾಂಗ್ಲಾದೇಶದಲ್ಲಿ ನಿವೃತ್ತ ಶಿಕ್ಷಕ ಸೇರಿ ಒಂದೇ ಕುಟುಂಬದ ನಾಲ್ವರ ಸಾವು : ಮನೆಯಲ್ಲಿ ಮೃತದೇಹಗಳು ಪತ್ತೆ.!

Leave a Comment