Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬರ ಪರಿಹಾರ : ನಾವೂ ಕೇಳುತ್ತಿರುವ ಭಿಕ್ಷೆಯಲ್ಲ ಎಂದ ಸಚಿವ ದಿನೇಶ್ ಗುಂಡೂರಾವ್

Facebook
Twitter
Telegram
WhatsApp

ಬೆಂಗಳೂರು: ಬರ ಅಧ್ಯಯನ ನಡೆದರು ಕೂಡ ಕೇಂದ್ರದಿಂದ ಒಂದು ಪೈಸೆಯೂ ಪರಿಹಾರ ಸಿಕ್ಕಿಲ್ಲ. ಈ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಬರ ಪರಿಹಾರ ಕೊಡುವುದು ಕೇಂದ್ರ ಸರ್ಕಾರದ ಕರ್ತವ್ಯ. ನಾವೂ ಕೇಳುತ್ತಿರುವುದು ಭಿಕ್ಷೆಯಲ್ಲ ಎಂದಿದ್ದಾರೆ.

 

ಯಡಿಯೂರಪ್ಪನವರೆ, ಮಹಾರಾಷ್ಟ್ರ,ತಮಿಳುನಾಡು ಬಿಟ್ಟರೆ ಅತಿ‌ ಹೆಚ್ಚು GST ಕೊಡುಗೆಯಲ್ಲಿ ಕರ್ನಾಟಕವೇ ಮೂರನೆಯದು‌. ನಮ್ಮಿಂದ ಹೆಚ್ಚಿನ ತೆರಿಗೆ ಪಾಲು ಪಡೆದಿರುವ ಮೋದಿ ಸರ್ಕಾರ ನಮ್ಮ ರಾಜ್ಯಕ್ಕೆ ಏನು ಕೊಡುಗೆ ನೀಡಿದೆ.? ಹೇಳಿ ನೋಡೋಣ. ಬರ ಪರಿಹಾರಕ್ಕೆ ಹಣ ನೀಡುವುದು ಕೇಂದ್ರ ಸರ್ಕಾರದ ಕರ್ತವ್ಯವೇ ಹೊರತು, ಅದು ನಾವು ಕೇಳಿತ್ತಿರುವ ಭಿಕ್ಷೆಯಲ್ಲ.

 

ಮಾನ್ಯ ಯಡಿಯೂರಪ್ಪನವರೆ, ನಿಮ್ಮ ನೇತೃತ್ವದಲ್ಲಿ ಬರ ಅಧ್ಯಯನ ಮಾಡುತ್ತಿರುವುದನ್ನು ನಾನು ಶ್ಲಾಘಿಸುತ್ತೇನೆ. ನಿಮ್ಮ ಮೂಲಕವಾದರೂ ರಾಜ್ಯದ ಜನರ ಸಂಕಷ್ಟ ಮೋದಿಯವರಿಗೆ ಅರಿವಾಗಲಿ. ಈಗಾಗಲೇ ಬರದಿಂದ 31 ಸಾವಿರ ಕೋಟಿಗೂ ಹೆಚ್ಚು ನಷ್ಟ ಸಂಭವಿಸಿದೆ‌. SDRF&NDRF ನಿಯಮದ ಅನುಸಾರ 17,900 ಕೋಟಿ ಪರಿಹಾರ ರಾಜ್ಯಕ್ಕೆ ಬರಬೇಕು‌. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೇಂದ್ರಕ್ಕೆ ಮನವಿ ಕೂಡ ಸಲ್ಲಿಸಿದೆ‌. ಈ ಪರಿಹಾರದ ಹಣ ನಿಮಗೆ ಕೊಡಿಸಲು ಸಾಧ್ಯವೇ.?

 

ಯಡಿಯೂರಪ್ಪನವರೆ, ಪುಕ್ಕಟೆ ಭಾಗ್ಯಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದೆ ಎಂದು ಹೇಳಿದ್ದೀರಿ‌. ಜನರಿಗೆ ಆರ್ಥಿಕ ಸ್ವಾತಂತ್ರ್ಯ ಕಲ್ಪಿಸುವುದನ್ನು ನೀವು ಪುಕ್ಕಟೆ ಭಾಗ್ಯ ಎಂದು ಹೇಳಿರುವುದು ಖೇದಕರ‌. ಹೋಗಲಿ, ನಿಮ್ಮ ಪ್ರಕಾರ ಪುಕ್ಕಟೆ ಭಾಗ್ಯಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದೆ ಎಂದಿಟ್ಟುಕೊಳ್ಳೋಣ. ಆದರೆ ನಮ್ಮ ರಾಜ್ಯದಿಂದ ಅತಿ ಹೆಚ್ಚು ತೆರಿಗೆ ಪಡೆದು, ನಮ್ಮ ರಾಜ್ಯಕ್ಕೆ ನಿಮ್ಮ ಮೋದಿಯವರು ಒ‌ಂದು ನಯಾಪೈಸೆ ಪರಿಹಾರ ಕೊಡದಷ್ಟು ಅಶಕ್ತರಾಗಿದ್ದಾರೆ. ಹಾಗಾದರೆ ಮೋದಿ ಸರ್ಕಾರ ದಿವಾಳಿಯಾಗಿದೆ ಎಂದರ್ಥವಲ್ಲವೇ.?ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

error: Content is protected !!