Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

FDA ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್ ಡಿ ಪಾಟೀಲ್ ಬಂಧನ..!

Facebook
Twitter
Telegram
WhatsApp

ಬೆಂಗಳೂರು: ಪರೀಕ್ಷೆಯಲ್ಲಿ ಅಕ್ರಮದ ವಾಸನೆ ಬಂದ ಮೇಲೆ ಆರ್ ಡಿ ಪಾಟೀಲ್ ವಿಚಾರಣೆ ನಡೆಸಲಾಗಿತ್ತು. ಮನೆಯಲ್ಲಿ ಅಧಿಕಾರಿಗಳು ಇದ್ದಾಗಲೇ ತಪ್ಪಿಸಿಕೊಂಡಿದ್ದ ಆರ್ ಡಿ ಪಾಟೀಲ್, ಕೊನೆಗೂ ಪೊಲೀಸರ ಅತಿಥಿಯಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದು, ಸದ್ಯ ಕಲಬುರಗಿಗೆ ಪೊಲೀಸರು ಕರೆ ತರುತ್ತಿದ್ದಾರೆ.

 

ಪೊಲೀಸರ ಕೈಗೆ ಸಿಗದಂತೆ ಆರ್ ಡಿ ಪಾಟೀಲ್ ತಲೆ ಮರೆಸಿಕೊಂಡಿದ್ದ. ಜಾಮೀನಿಗಾಗಿ ಅಲ್ಲಿಂದಲೇ ಅರ್ಜಿಯನ್ನು ಹಾಕಿದ್ದ. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ವಿಚಾರಣೆಯನ್ನು ಮುಂದಕ್ಕೆ ಹಾಕಿತ್ತು. ಆದರೆ ಇಂದೇ ಅರೆಸ್ಟ್ ಕೂಡ ಆಗಿದ್ದಾರೆ.

 

ತನ್ನ ಅಪಾರ್ಟ್ಮೆಂಟ್ ಮೂಲಕ ತಪ್ಪಿಸಿಕೊಂಡ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಆಗ ಬಿಜೆಪಿಗರು ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದ್ದರು. ಇದರ ಹಿಂದೆ ಶಾಸಕರಿ, ಸಚಿವರ ಕೈವಾಡವಿದೆ ಎಂದು ವಾಗ್ದಾಳಿ ನಡೆಸಿದ್ದರು. ಆ ಸಮಯದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಇನ್ನೆರಡು ದಿನದಲ್ಲಿ ಆತನ ಬಂಧನವಾಗುತ್ತೆ ಎಂದು ಭರವಸೆ ನೀಡಿದ್ದರು. ಆ ಮಾತಿನಂತೆ ಇದೀಗ ಆರ್ ಡಿ ಪಾಟೀಲ್ ಬಂಧನವಾಗಿದೆ.

 

ಅ. 29ರಂದು ಕೆ.ಇ.ಎ ವತಿಯಿಂದ ನಡೆಸಲಾಗಿದ್ದ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಕಲಬುರಗಿಯಲ್ಲಿ ಕೆಲವು ಅಭ್ಯರ್ಥಿಗಳು ಬ್ಲೂಟೂತ್ ಬಳಸಿ ಉತ್ತರಗಳನ್ನು ಬರೆಯತ್ತಾ ಕೊಠಡಿ ಪರಿವೀಕ್ಷಕರಿಗೆ ಸಿಕ್ಕಿಬಿದ್ದಿದು ಅದು ದೊಡ್ಡದೊಂದು ಜಾಲವನ್ನು ಅನಾವರಣಗೊಳಿಸಿತು. ಈ ಜಾಲದ ರೂವಾರಿ ಆರ್.ಡಿ. ಪಾಟೀಲ್ ಎಂಬುದು ತಿಳಿದುಬಂದಿತ್ತು. ಆತ 2021ರಲ್ಲಿ ಹೊರಬಿದ್ದಿದ್ದ ಪಿಎಸ್ಐ ಹಗರಣದ ಆರೋಪಿಯೂ ಕೂಡ ಆಗಿದ್ದು, ಕೆಲವು ತಿಂಗಳುಗಳಿಂದ ಜಾಮೀನಿನ ಮೇಲೆ ಹೊರಗಿದ್ದ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!