Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿಷೇಧಿತ ಪಟಾಕಿಗಳು ವಶಕ್ಕೆ | ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಜಿಲ್ಲಾಧಿಕಾರಿ ಸೂಚನೆ

Facebook
Twitter
Telegram
WhatsApp

 

ಚಿತ್ರದುರ್ಗ ನ. 12 : ದೀಪಾವಳಿ ಹಬ್ಬದ ನಿಮಿತ್ತ ಚಿತ್ರದುರ್ಗ ನಗರದ ಸರ್ಕಾರಿ ಮಾಧ್ಯಮಿಕ ಶಾಲಾ ಮೈದಾನ (ಪ್ರವಾಸಿ‌ಮಂದಿರ ಎದುರು) ಆವರಣದ‌ ಮಳಿಗೆಗಳಲ್ಲಿ ಮಾರಾಟ ಮಾಡಲಾಗುತ್ತಿದ್ದ ನಿಷೇಧಿತ ಪಟಾಕಿಗಳನ್ನು ಅಧಿಕಾರಿಗಳ ತಂಡ ವಶಕ್ಕೆ ಪಡೆದುಕೊಂಡಿದ್ದು ಕಡ್ಡಾಯವಾಗಿ ಹಸಿರು ಪಟಾಕಿ ಗಳನ್ನು ಮಾತ್ರ ಮಾರಾಟ ಮಾಡಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಸೂಚನೆ ನೀಡಿದ್ದಾರೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ಪಟಾಕಿಗಳ ಮಾರಾಟ ಮತ್ತು ಬಳಕೆಗೆ ಸರ್ಕಾರ ನಿಷೇಧಿಸಿದ್ದು, ಪಟಾಕಿ ಮಾರಾಟಗಾರರಿಗೆ ಈ ಬಗ್ಗೆ ಈಗಾಗಲೆ ತಿಳುವಳಿಕೆ ನೀಡಲಾಗಿದೆ. ಉಪವಿಭಾಗಾಧಿಕಾರಿ ಕಾರ್ತಿಕ್ ಅವರ ನೇತೃತ್ವದಲ್ಲಿ ವಿವಿಧ ಅಧಿಕಾರಿಗಳ ತಂಡ ನಗರದ ಸರ್ಕಾರಿ ಮಾಧ್ಯಮಿಕ ಶಾಲಾ ಮೈದಾನದಲ್ಲಿ ಪಟಾಕಿ ಮಾರಾಟ ಮಾಡುತ್ತಿದ್ದ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದು ನಿಷೇಧಿತ ಪಟಾಕಿ ಮಾರಾಟ ಮಾಡುತ್ತಿದ್ದುದನ್ನು ಗಮನಿಸಿದೆ. ನಿಷೇಧಿತ ಪಟಾಕಿಗಳನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ಸೂಕ್ತ ಕ್ರಮ ಕೈಗೊಂಡಿದ್ದಾರೆ.

ಉಪವಿಭಾಗಾಧಿಕಾರಿ ಕಾರ್ತಿಕ್, ತಹಸಿಲ್ದಾರ್ ನಾಗವೇಣಿ, ನಗರಸಭೆ ಪೌರಾಯುಕ್ತೆ ರೇಣುಕಾ ಸೇರಿದಂತೆ ವಿವಿಧ ಅಧಿಕಾರಿಗಳು ಪಟಾಕಿ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದ್ದು, ಈ ದಿಸೆಯಲ್ಲಿ ಸರ್ಕಾರ ಪರಿಸರಕ್ಕೆ ಮಾರಕವಾದ ಪಟಾಕಿ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದ್ದು, ಎಲ್ಲರೂ ತಪ್ಪದೆ ಹಸಿರು ಪಟಾಕಿಯ ಪಾಕೆಟ್ ಗಳ ಮೇಲೆ ಲೋಗೋ ಹಾಗೂ ಪ್ರಮಾಣ ಪತ್ರ ಇರುವುದನ್ನು ಖಚಿತಪಡಿಸಿಕೊಂಡೇ ಖರೀದಿಸಬೇಕು, ಪಟಾಕಿ ಮಾರಾಟಗಾರರೂ ಕೂಡ ಹಸಿರು ಪಟಾಕಿಯನ್ನು ಮತ್ರ ಮಾರಾಟ ಮಾಡಬೇಕು, ಅಧಿಕಾರಿಗಳು ಮಾರಾಟ ಮಳಿಗೆಗೆ ಆಕಸ್ಮಿಕ ಭೇಟಿ ನೀಡಿ ಪರಿಶೀಲಿಸಲಿದ್ದು, ನಿಷೇಧಿತ ಪಟಾಕಿ ಕಂಡುಬಂದಲ್ಲಿ ವಶಕ್ಕೆ ಪಡೆದು ಕ್ರಮ‌ ಕೈಗೊಳ್ಳಲಾಗುವುದು. ಜಿಲ್ಲೆಯ ಎಲ್ಲ ಸಾರ್ವಜನಿಕರು ಹಾಗೂ ಪಟಾಕಿ ಮಾರಾಟಗಾರರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!