Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಿಸಾನ್ ಸಮ್ಮಾನ್ ಕರ್ನಾಟಕಕ್ಕೆ ಮೊದಲನೇ ರಾಜ್ಯ ಪ್ರಶಸ್ತಿ: ಕ್ಯಾಪ್ಟನ್ ಗಣೇಶ್ ಕಾರ್ಣಿಕ್

Facebook
Twitter
Telegram
WhatsApp

ಬೆಂಗಳೂರು: ಕೇಂದ್ರ ಸರಕಾರವು ಕಿಸಾನ್ ಸಮ್ಮಾನ್ ಯೋಜನೆಯಡಿ 6 ಸಾವಿರ ರೂಪಾಯಿಯನ್ನು ರೈತರಿಗೆ ನೀಡಿದರೆ, ರಾಜ್ಯ ಸರಕಾರವು ಅದಕ್ಕೆ ಪೂರಕವಾಗಿ 4 ಸಾವಿರ ರೂಪಾಯಿ ಹೆಚ್ಚುವರಿಯಾಗಿ ನೀಡಿದೆ. ರಾಜ್ಯದ 50 ಲಕ್ಷಕ್ಕೂ ಹೆಚ್ಚು ರೈತರಿಗೆ ಕೇಂದ್ರದಿಂದ 7,103 ಕೋಟಿ ಮತ್ತು ರಾಜ್ಯದಿಂದ 2,849 ಕೋಟಿ ರೂಪಾಯಿ ವಿತರಣೆಯಾಗಿದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯರೂ ಆದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶೇ 97ರಷ್ಟು ರೈತರ ಖಾತೆಗಳು ಆಧಾರ್ ಲಿಂಕ್ ಆಗಿದ್ದು, ನೇರ ವರ್ಗಾವಣೆ ಸಾಧ್ಯವಾಗಿದೆ. ಈ ಚಟುವಟಿಕೆಗೆ 2020- 21ನೇ ಸಾಲಿನಲ್ಲಿ ಕರ್ನಾಟಕಕ್ಕೆ ಮೊದಲನೇ ರಾಜ್ಯ ಪ್ರಶಸ್ತಿ ಲಭಿಸಿದೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಶೇಕಡಾ 1.5 ರಷ್ಟು ಮಾರುಕಟ್ಟೆ ಶುಲ್ಕ ವಿಧಿಸುತ್ತಿದ್ದವು. ಅದನ್ನು ಶೇಕಡಾ 0.60ಗೆ ಇಳಿಸಲಾಗಿದೆ. 2020ರ ಜನವರಿ 31ಕ್ಕೆ ಇದ್ದ ಮಧ್ಯಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲಗಳ ಬಡ್ಡಿಯನ್ನು ಮನ್ನಾ ಮಾಡಲಾಗಿದೆ. ಇದರಿಂದ 55,546 ರೈತರಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.

ಜಲ ಸಂಪನ್ಮೂಲ ಇಲಾಖೆಯಲ್ಲಿ ಕಳೆದ 2 ವರ್ಷಗಳಲ್ಲಿ ಭಾರಿ ಮತ್ತು ಮಧ್ಯಮ ನೀರಾವರಿಗೆ ರಾಜ್ಯದಲ್ಲಿ 33,465 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಇದರಿಂದ 61,147 ಹೆಕ್ಟೇರ್ ಹೆಚ್ಚು ಜಮೀನು ನೀರಾವರಿಗೆ ಒಳಪಟ್ಟಿದೆ. ಸಣ್ಣ ನೀರಾವರಿ ಇಲಾಖೆಯಲ್ಲಿ 1201.52 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದ 14 ಜಿಲ್ಲೆಗಳ 41 ತಾಲ್ಲೂಕುಗಳ 1,199 ಗ್ರಾಮ ಪಂಚಾಯತ್ಗಲಳಲ್ಲಿ 39,703 ಚದರ ಕಿಮೀ ಪ್ರದೇಶದಲ್ಲಿ ನೀರಾವರಿ ಯೋಜನೆ ಕಾರ್ಯಾನುಷ್ಠಾನ ಮಾಡಲಾಗಿದೆ ಎಂದು ವಿವರಿಸಿದರು.

ಕೋವಿಡ್ ಬಂದು ಶಾಲಾ ಕಾಲೇಜು ಬಂದ್ ಆಗಿದ್ದರೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರ ವರ್ಗಾವಣೆ ಮತ್ತು ಇತರ ಸೇವಾ ಸೌಲಭ್ಯಕ್ಕೆ ಸಂಬಂಧಿಸಿ ಶಿಕ್ಷಕ ಮಿತ್ರ ಆ್ಯಪ್ ಅಭಿವೃದ್ಧಿ ಪಡಿಸಿದ್ದು, ಶಿಕ್ಷಕರ ಕಚೇರಿ ಅಲೆದಾಟ ತಪ್ಪಿಸಲಾಗಿದೆ. 100 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗಾಗಿ ತಲಾ 2 ಕೋಟಿಯಂತೆ 200 ಕೋಟಿ ರೂಪಾಯಿ ಅನುದಾನ ಕೊಟ್ಟಿದ್ದೇವೆ ಎಂದರು. ಎಲ್ಲ ಸಮಸ್ಯೆಗಳ ನಡುವೆ ಎಸ್ಎಗಸ್ಎ2ಲ್ಸಿಂ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ತಿಳಿಸಿದರು

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!