Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

75 ವರ್ಷದಿಂದ ಮೇಲ್ಜಾತಿಗೆ ಜೈ ಅಂದಿದ್ದೇ ಆಯ್ತು, ದಲಿತರ ಪರವಾಗಿ ಯಾರೂ ಕೈ ಎತ್ತಿಲ್ಲ : ರಮೇಶ್ ಜಿಗಜಣಗಿ ಬೇಸರ

Facebook
Twitter
Telegram
WhatsApp

ವಿಜಯಪುರ: ದಲಿತರ ಪರವಾಗಿ ಯಾರೂ ಸಹ ಮಾತನಾಡಲ್ಲ ಎಂದು ಸಂಸದ ಜಿಗಜಣಗಿ ಬೇಸರ ಹೊರ ಹಾಕಿದ್ದಾರೆ. ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲೂ ನೋಡಿದ್ದೇವೆ. ಅಸೆಂಬ್ಲಿಯಲ್ಲಿ ದೊಡ್ಡ ದೊಡ್ಡ ಗೌಡರು, ಸಾಹುಕಾರುಗಳು ಬಂದರು. ಅವರ ಪರವಾಗಿ ನಾವೂಗಳು ಕೈಎತ್ತುತ್ತಲೇ ಇದ್ದೇವೆ. ಆದರೆ ನಮ್ಮ ಪರವಾಗಿ ಯಾರೂ ಕೈ ಎತ್ತುವುದಿಲ್ಲ. ನಾವೂ ದಲಿತರು. ನಮ್ಮ ಪರವಾಗಿ ಯಾರೂ ಕೈ ಎತ್ತಲ್ಲ ಎಂದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರನ್ನು ನಾವಂತು ನೇಮಕ ಮಾಡಿಲ್ಲ. ಪಕ್ಷದ ಹಿರಿಯರು ಯಾವುದ್ಯಾವುದೋ ಕಾರಣಕ್ಕೆ ನೇಮಕ ಮಾಡಿದ್ದಾರೆ. ಬಹಳ ಯೋಚಿಸಿ ಯಡಿಯೂರಪ್ಪ ಅವರ ಮಗನೇ ಆಗಬೇಕೆಂದು ನೇಮಕ ಮಾಡಿದ್ದಾರೆ. ವಿಜಯೇಂದ್ರ ರಾಜ್ಯಾಧ್ಯಕ್ಷನಾಗಿರುವುದು ನಮಗೇನು ಹೊಟ್ಟೆ ಉರಿ ಇಲ್ಲ. ನಾನೇ ಬಿಜೆಪಿ ರಾಜ್ಯಾಧ್ಯಕ್ಷರಾಗಬೇಕೆಂದು ನಾನಂತು ಅಂದುಕೊಂಡಿಲ್ಲ. ಆದರೆ ದಲಿತರಿಗೆ ಕೊಡಬೇಕು ಎಂಬುದು ನನ್ನ ಆಶಯ. ಆದರೆ ದಲಿತರ ಪರವಾಗಿ ಯಾರೂ ಕೈ ಎತ್ತುವುದಿಲ್ಲ. ಇದು ಬಹಳ ದುಃಖದ ಸಂಗತಿ ಎಂದಿದ್ದಾರೆ.

 

ಬಿಜೆಪಿಯಲ್ಲಿ ಸದ್ಯ ಅಸಮಧಾನ ಹಿಗೆ ಜೋರಾಗಿಯೇ ಆಡುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ಹಲವು ಹಿರಿಯ ನಾಯಕರೆ ಇದ್ದರು. ಆದರೆ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಯಡಿಯೂರಪ್ಪ ಅವರಿಗೆ ಬಿಜೆಪಿ ಮಣೆ ಹಾಕಿದೆ. ಹೀಗಾಗಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೇ ರಾಜ್ಯಾಧ್ಯಕ್ಷ ಪಟ್ಟ ಕಟ್ಟಿದೆ. ಇದರಿಂದ ಈಶ್ವರಪ್ಪ ಸೇರಿದಂತೆ ಹಲವರಿಗೆ ಬೇಸರವಾಗಿದೆ. ಇದೀಗ ಸಂಸದ ಜಿಗಜಣಗಿ ಕೂಡ ಬೇಸರ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

error: Content is protected !!