Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇಶ-ರಾಜ್ಯ ಮುಳುಗಿ ಹೋಗುವಂತ ಕೆಲಸ ಮಾಡಿಲ್ಲ : ಕರೆಂಟ್ ವಿಚಾರಕ್ಕೆ ಹೆಚ್ಡಿಕೆ ಪ್ರತಿಕ್ರಿಯೆ

Facebook
Twitter
Telegram
WhatsApp

 

ಬೆಂಗಳೂರು: ದೀಪಾವಳಿ ಹಬ್ಬದಂದು ದೀಪಲಂಕಾರಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಜೆಪಿ ನಗರ ನಿವಾಸಕ್ಕೆ, ಲೈಟ್ ಕಂಬದ ಮೂಲಕ ಅಕ್ರಮವಾಗಿ ಪವರ್ ಕನೆಕ್ಷನ್ ತೆಗೆದುಕೊಂಡಿದ್ದಾರೆ. ಈ ಸಂಬಂಧ ಕಾಂಗ್ರೆಸ್ ವಿಡಿಯೋ ಸಮೇತ ಪೋಸ್ಟ್ ಮಾಡಿ ಟೀಕೆ ಮಾಡಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ನಾನೇನು ದೇಶ – ರಾಜ್ಯ ಮುಳುಗಿ ಹೋಗುವ ಕೆಲಸ‌ ಮಾಡಿಲ್ಲ ಎಂದಿದ್ದಾರೆ.

ಸಾವಿರ ರೂಪಾಯಿ ಕರೆಂಟ್ ಕದಿಯುವ ಪ್ರಮೇಯ ನನಗೆ ಬಂದಿಲ್ಲ. ಕಾಂಗ್ರೆಸ್ ಬೇರೆ ಕೆಲಸ ಇಲ್ಲ. ಅದಕ್ಕೆ ಈ ವಿಚಾರ ಇಟ್ಟುಕೊಂಡು ಚರ್ಚೆ ಮಾಡುತ್ತಾ ಇದ್ದಾರೆ. ಅಚಾತುರ್ಯದಿಂದ ಈ ಕೆಲ ನಡೆದು ಹೋಗಿದೆ. ನಾನೇನು ದೇಶವನ್ನು ಲೂಟಿ ಹೊಡೆದಿಲ್ಲ. ವಿದ್ಯುತ್ ಕಳ್ಳತನ ಮಾಡುವಂತ ದರಿದ್ರ ನನಗೆ ಬಂದಿಲ್ಲ. ನನ್ನ ಎಲ್ಲಾ ವಿಚಾರಗಳು ತೆರೆದ ಪುಸ್ತಕವಿದ್ದಂತೆ. ಕಾಂಗ್ರೆಸ್ ನವರಂತೆ ಲೂಟಿ ಹೊಡೆಯುವ ಕೆಲಸ ನಾನು ಮಾಡಿಲ್ಲ ಎಂದಿದ್ದಾರೆ.

ಬಿಡದಿ ತೋಟದಿಂದ ಬಂದ ಕೂಡಲೇ ವಿಚಾರ ಗೊತ್ತಾಗಿದೆ. ಕೂಡಲೇ ಆ ಕನೆಕ್ಷನ್ ತೆಗೆಯುವಂತೆ ಸೂಚಿಸಿದ್ದೇನೆ. ಲೈನ್ ಮ್ಯಾನ್ ಅಕ್ರಮವಾಗಿ ಕನೆಕ್ಷನ್ ಕೊಡಿ ಎಂದು ನಾನು ಹೇಳಿದ್ದೇನಾ. ಏನೇ ಆದರೂ ಹೊಣೆ ನಾನೇ. ಬೆಸ್ಕಾಂನವರು ದಂಡ ಹಾಕಿದರೆ ನಾನು ಕಟ್ಟುತ್ತೇನೆ ಎಂದು ಅಕ್ರಮ ಕರೆಂಟ್ ಕನೆಕ್ಷನ್ ಗೆ ಕುಮಾರಸ್ವಾಮಿ ಅವರೇ ಸ್ಪಷ್ಟ ಉತ್ತರ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!