Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಮುರುಘಾ ಶರಣರ ಬಿಡುಗಡೆ, ಭಕ್ತರ ಸಂಭ್ರಮ

Facebook
Twitter
Telegram
WhatsApp

 ಸುದ್ದಿಒನ್, ಚಿತ್ರದುರ್ಗ, ನವೆಂಬರ್.16 : ತೀವ್ರ ಕುತೂಹಲ ಮೂಡಿಸಿದ್ದ ಮುರುಘಾ ಶರಣರ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು (ಗುರುವಾರ) ಡಾ.ಶಿವಮೂರ್ತಿ ಮುರುಘಾ ಶರಣರು ಬಿಡುಗಡೆಯಾಗಿದ್ದಾರೆ.

ಜಾಮೀನು ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ನವಂಬರ್.15 ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬಿಡುಗಡೆ ಮಾಡುವಂತೆ ಆದೇಶಿಸಿತ್ತು.
ಈ ಆದೇಶ ಪ್ರತಿಯನ್ನು ನಿನ್ನೆ ಸಂಜೆ ವೇಳೆಗೆ ಕಾರಾಗೃಹ ತಲುಪಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇಂದು ಪ್ರತಿಯನ್ನು ತಲುಪಿಸಿದ್ದಾರೆ‌. ಆದೇಶ ಪ್ರತಿಯನ್ನು ಪರಿಶೀಲಿಸಿದ ನಂತರ ಕಾರಾಗೃಹ ಅಧಿಕಾರಿಗಳು ಮುರುಘಾ ಶರಣರನ್ನು ಕಾರಾಗೃಹದಿಂದ ಬಿಡುಗಡೆ ಮಾಡಿದ್ದಾರೆ.

ಮುರುಘಾಶರಣರು ಬಿಡುಗಡೆ ವಿಷಯ ಮೊದಲೇ ತಿಳಿದಿದ್ದರಿಂದ ಕಾರಾಗೃಹ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು. ಹೊರಬಂದ ನಂತರ ಶ್ರೀಗಳನ್ನು ಅದ್ದೂರಿಯಾಗಿ ಸ್ವಾಗತಿಸಿ ಶ್ರೀಗಳ ಪರ ಘೋಷಣೆ ಕೂಗಿ, ಜೈಕಾರ ಹಾಕಿದರು.

ಹೈಕೋರ್ಟ್ ವಿಧಿಸಿದ ಷರತ್ತಿನನ್ವಯ ಚಿತ್ರದುರ್ಗ ಮುರುಘಾ ಮಠಕ್ಕೆ ಶ್ರೀಗಳು ಪ್ರವೇಶಿಸುವಂತಿಲ್ಲ. ಆದ್ದರಿಂದ ಶ್ರೀಗಳು ದಾವಣಗೆರೆಯ ವಿರಕ್ತಮಠದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ

RCB ಅಭಿಮಾನಿಗಳು ಕಡೆಯ ತನಕ ತಮ್ಮ ಟೀಂ ಬಗ್ಗೆ ಹೋಪ್ ಕಳೆದುಕೊಳ್ಳುವುದೇ ಇಲ್ಲ. ಯಾಕಂದ್ರೆ ಆರ್ಸಿಬಿ ಆಟಗಾರರು ಸಹ ಅದೇ ಥರ ಕೊನೆಯಲ್ಲಿ ಚೋಕ್ ಕೊಡ್ತಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದ ಅಷ್ಟು

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

error: Content is protected !!