Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿನ್ನೆಯ ಶಾಸಕಾಂಗ ಸಭೆಗೆ ರಮೇಶ್ ಜಾರಕಿಹೊಳಿ ಗೈರು : ಬಿಎಸ್ವೈಗೆ ರಾಜ್ಯಾಧ್ಯಕ್ಷ ಕೊಟ್ಟಿದ್ದರು ಬೇಸರ ಇರಲಿಲ್ಲ.. ಆದರೆ..!

Facebook
Twitter
Telegram
WhatsApp

ಬೆಂಗಳೂರು: ನಿನ್ನೆ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಅದುವೆ ವಿಪಕ್ಷ ನಾಯಕನ ಆಯ್ಕೆ. ಕಳೆದ ಆರು ತಿಂಗಳಿನಿಂದ ವಿಪಕ್ಷ ನಾಯಕನ ಹುದ್ದೆ ಹಾಗೂ ರಾಜ್ಯಾಧ್ಯಕ್ಷ ಹುದ್ದೆ ಖಾಲಿ ಇತ್ತು. ಲೋಕಸಭಾ ಚುನಾವಣೆಗೂ ಮುನ್ನ ಎರಡು ಹುದ್ದೆಗಳು ತುಂಬಿವೆ. ನಿನ್ನೆ ಶಾಸಕಾಂಗ ಸಭೆ ನಡೆದಿದ್ದು, ಕೇಂದ್ರದಿಂದ ಬಂದಿದ್ದ ವೀಕ್ಷಕರ ಎದುರು ಆರ್ ಅಶೋಕ್ ಹೆಸರು ಫೈನಲ್ ಆಗಿದೆ. ನೂತನವಾಗಿ ವಿಪಕ್ಷ ನಾಯಕರಾಗಿದ್ದಾರೆ.

ಆದರೆ ನಿನ್ನೆ ನಡೆದ ಶಾಸಕಾಂಗ ಸಭೆಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಇಬ್ಬರು ಹೊರ ನಡೆದಿದ್ದರು. ಒಂದೇ ಕಾರಿನಲ್ಲಿ ವಾಪಾಸ್ ಆಗಿದ್ದರು. ವಿಪಕ್ಷ ನಾಯಕನ ಹುದ್ದೆಗೆ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಆಕಾಂಕ್ಷಿಯಾಗಿದ್ದರು. ಆದರೆ ಆ ಹುದ್ದೆ ಕೈತಪ್ಪಿದ ಕಾರಣಕ್ಕೆ ವಾಪಾಸ್ ಆಗಿದ್ದರು. ಇದೀಗ ರಮೇಶ್ ಜಾರಕಿಹೊಳಿ ಅವರು ವಾಪಾಸ್ ಆದ ಕಾರಣ ಈಗ ಹೊರಬಿದ್ದಿದೆ.

ಕೇಂದ್ರದಿಂದ ಆಗಮಿಸಿದ್ದಂತ ವೀಕ್ಷಕರ ಎದುರು ರಮೇಶ್ ಜಾರಕಿಹೊಳಿ ಅವರು ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ. ಅದುವೆ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ. ನಮಗಿಂತ ಕಿರಿಯ‌ ವಯಸ್ಸಿನ ವಿಜಯೇಂದ್ರ ಕೆಳಗೆ ನಾವು ಕೆಲಸ ಮಾಡೋದು ಹೇಗೆ?. ಬಿಎಸ್​ವೈಗೆ ರಾಜಾಧ್ಯಕ್ಷ ಸ್ಥಾನ ನೀಡಿದ್ದರೇ ಒಪ್ಪಿಕೊಳ್ಳುತ್ತಿದ್ದೇವು. ಆ ಸ್ಥಾನಕ್ಕೆ ಪಕ್ಷದಲ್ಲಿನ ಇತರೆ ಹಿರಿಯರನ್ನ ಪರಿಗಣಿಸಬೇಕಿತ್ತು. ನಮಗಿಂತ ಕಿರಿಯರ ಮುಂದೆ ನಾವು ಕೆಲಸ ಮಾಡುವುದು ಹೇಗೆ ಎಂದು ಸಾಹುಕಾರ ಪ್ರಶ್ನೆ ಮಾಡಿದ್ದಾರೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!