ಚಿತ್ರದುರ್ಗ. ನವೆಂಬರ್.18 : ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡಿದೆ. ಇದನ್ನು ರಾಜ್ಯದಲ್ಲಿನ ಅಂದಿನ ಕರ್ನಾಟಕ ಸರ್ಕಾರ ಜಾರಿ ಮಾಡಲು ಮುಂದಾಗಿತ್ತು. ಆದರೆ ಈಗ ಆಧಿಕಾರದಲ್ಲಿನ ಕಾಂಗ್ರೆಸ್ ಸರ್ಕಾರ ಇದನ್ನು ರದ್ದು ಮಾಡಿ ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಲು ಮುಂದಾಗಿರುವುದು ದುರಂತ ಇದರ ವಿರುದ್ದ ಜನಾಂದೋಲನ ಕೈಗೊಂಡು ಸಹಿ ಸಂಗ್ರಹ ಕಾರ್ಯವನ್ನು ಮಾಡುವುದಾಗಿ ಸರ್ಕಾರಕ್ಕೆ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್ ಎಚ್ಚರಿಕೆಯನ್ನು ನೀಡಿದ್ದಾರೆ.
ನಗರದ ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೇಸದ ವಿವಿದೆಗಳಲ್ಲಿ ಬ್ರಟಿಷರ ಕಾಲದ ಶಿಕ್ಷಣ ನೀತಿ ಜಾರಿಯಲ್ಲಿ ಇತ್ತು ಇದನ್ನು ತೆಗೆಯುವ ಹಿನ್ನಲೆಯಲ್ಲಿ ಬಿಜೆಪಿ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡಿತು. ಇದನ್ನು ಕರ್ನಾಟಕದಲ್ಲಿ ಜಾರಿ ಮಾಡಲಾಗಿತ್ತು. ಇದರಿಂದಾಗಿ ಸರ್ಕಾರಿ ಶಾಲೆಗಳಲ್ಲಿ ಅಭ್ಯಾಸವನ್ನು ಮಾಡುವ ಮಕ್ಕಳಿಗೆ ಅನುಕೂಲವಾಗುತ್ತಿತು.

ಆದರೆ ಈಗ ಅಧಿಕಾರದಲ್ಲಿರುವ ಕಾಂಗ್ರಸ್ ಸರ್ಕಾರ ಇದನ್ನು ರದ್ದು ಮಾಡಿ ತನ್ನದೆ ಆದ ರಾಜ್ಯ ಶಿಕ್ಷಣ ನೀತಿಯನ್ನು ಜಾರಿ ಮಾಡಲು ಹೊರಟ್ಟಿರುವುದೆ ಇದಕ್ಕಾಗಿ 15 ಜನರ ಸಮಿತಿಯನ್ನು ರಚನೆ ಮಾಡಿ ಎಸ್ ಇಪಿಯನ್ನು ಜಾರಿ ಮಾಡಲು ಮುಂದಾಗಿರುವುದು ದುರಂತವಾಗಿದೆ ಎಂದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















