Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನವೆಂಬರ್ 21 ಹಾಗೂ 29 ರಂದು ಜಿಲ್ಲಾಧಿಕಾರಿಗಳಿಂದ ತಾಲ್ಲೂಕು ಮಟ್ಟದ ಜನತಾದರ್ಶನ

---Advertisement---

ಚಿತ್ರದುರ್ಗ ನ. 18 : ಇದೇ ನ. 21 ರಂದು ಹೊಸದುರ್ಗ ತಾಲ್ಲೂಕು ಅತ್ತಿಮಗ್ಗೆ ಗ್ರಾಮ ಹಾಗೂ ನ. 29 ರಂದು ಚಿತ್ರದುರ್ಗ ತಾಲ್ಲೂಕು ಕುರುಮರಡಿಕೆರೆ ಗ್ರಾಮದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ತಾಲ್ಲೂಕು ಮಟ್ಟದ ಜನತಾದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸ್ಥಳೀಯವಾಗಿ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸುವಂತಾಗಲು ಹಾಗೂ ಸಾರ್ವಜನಿಕರ ಕುಂದುಕೊರತೆಗಳನ್ನು ತ್ವರಿತವಾಗಿ ನಿವಾರಿಸುವ ಸಲುವಾಗಿ ಪ್ರತಿ ತಿಂಗಳು ಹದಿನೈದು ದಿನಗಳಿಗೊಮ್ಮೆ ಜಿಲ್ಲಾಧಿಕಾರಿಗಳು ತಾಲ್ಲೂಕು ಮಟ್ಟದ ಜನತಾದರ್ಶನ ಏರ್ಪಡಿಸುವಂತೆ ಸರ್ಕಾರ ನಿರ್ದೇಶನ ನೀಡಿದ್ದು,

ಇದರನ್ವಯ ನ. 21 ರಂದು ಬೆಳಿಗ್ಗೆ 10 ಗಂಟೆಗೆ ಹೊಸದುರ್ಗ ತಾಲ್ಲೂಕು ಅತ್ತಿಮಗ್ಗೆ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಲ್ಲಿ ಹಾಗೂ ನ. 29 ರಂದು ಬೆ. 10 ಗಂಟೆಗೆ ಚಿತ್ರದುರ್ಗ ತಾಲ್ಲೂಕು ಇಂಗಳದಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುರುಮರಡಿಕೆರೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲ್ಲೂಕು ಮಟ್ಟದ ಜನತಾದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ತಾಲ್ಲೂಕು ಮಟ್ಟದ ಜನತಾದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ವಿವಿಧ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.  ಸಾರ್ವಜನಿಕರಿಂದ ಅರ್ಜಿಗಳನ್ನು ಪಡೆದು, ಸ್ವೀಕೃತಿ ನೀಡುವ ಸಲುವಾಗಿ ಸಮರ್ಪಕ ರೀತಿಯಲ್ಲಿ ಕೌಂಟರ್ ಗಳ ವ್ಯವಸ್ಥೆ ಮಾಡಲಾಗುವುದು.

ಸಾರ್ವಜನಿಕರು ತಮ್ಮ ಕುಂದುಕೊರತೆ ಕುರಿತ ಅಹವಾಲು, ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...