ಸುದ್ದಿಒನ್, ಚಿತ್ರದುರ್ಗ: ನಗರದ ವಿ.ಪಿ ಬಡಾವಣೆಯ ಜಿಲ್ಲಾ ತೋಟಗಾರಿಕೆ ಇಲಾಖೆ ಸಮೀಪದ ಮಾತೃಶ್ರೀ ಎಜುಕೇಷನ್ ಸೊಸೈಟಿಯ ಲಿಟ್ಲ್ ರೋಜಸ್ ಶಾಲೆಯಲ್ಲಿ ಈಚಗೆ ರಾಷ್ಟ್ರೀಯ ಶಿಕ್ಷಣ ದಿನ ಹಾಗೂ ಮಕ್ಕಳ ದಿನಾಚರಣೆ ಆಚರಿಸಲಾಯಿತು.
ಚಿತ್ರದುರ್ಗ ನಗರದ ಉತ್ತರ ಕ್ಲಸ್ಟರ್ ಸಿಆರ್ಪಿ ರವಿಶಂಕರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಶಿಕ್ಷಣದ ಗುರಿ ಮತ್ತು ಉದ್ದೇಶಗಳನ್ನು ಮಕ್ಕಳಿಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಶಾಲಾ ಹಂತದಲ್ಲಿ ನಡೆಸಿದ ವಿವಿಧ ಕಾರ್ಯಕ್ರಮಗಳಿಗೆ ಅನುಸಾರವಾಗಿ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮಾತೃಶ್ರೀ ಎಜುಕೇಷನ್ ಸೊಸೈಟಿ ಕಾರ್ಯದರ್ಶಿ ನಾಗಮಣಿ, ಮುಖ್ಯ ಶಿಕ್ಷಕಿ ಕೌಸರ್ಭಾನು, ಸಹ ಶಿಕ್ಷಕರಾದ ರೇಷ್ಮಾಭಾನು, ಅನುಷಾ, ಸಿಂಧು, ಎಂ.ಜೆ.ಜಯಲಕ್ಷ್ಮಿ ಸೇರಿದಂತೆ ಮಕ್ಕಳು, ಪೋಷಕರು ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













