Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಯಲ್ಲಿನ ಅತೃಪ್ತ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ : ಯಾವಾಗ, ಯಾರು ಎಂಬ ಮಾಹಿತಿ ತಿಳಿಸಿದ ಸವದಿ

Facebook
Twitter
Telegram
WhatsApp

ಬಾಗಲಕೋಟೆ: ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವಾಗಲೇ ಬಿಜೆಪಿಯಲ್ಲಿನ ಹಲವರು ಕಾಂಗ್ರೆಸ್ ಗೆ ಬರಲಿದ್ದಾರೆ ಎಂಬ ಮಾತನ್ನು ಶಾಸಕ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಬಿಜೆಪಿಯಲ್ಲಿನ ಅತೃಪ್ತ ಶಾಸಕರು ಕಾಂಗ್ರೆಸ್ ಗೆ ಸೇರಲಿದ್ದಾರೆ ಎಂದಿದ್ದಾರೆ.

ಬಿಜೆಪಿಯ ಹಲವು ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ನಾವೂ ಜನವರಿ 26ರ ನಂತರ ಅದರ ಪ್ರಕ್ರಿಯೆ ಮುಂದುವರೆಸುತ್ತೇವೆ. ಎಷ್ಟು ಮಂದಿ ಕಾಂಗ್ರೆಸ್ ಸೇರುತ್ತಾರೆ ಎಂಬುದನ್ನು ನೀವೆ ನೋಡುತ್ತೀರಿ. ಬಿಜೆಪಿಯಿಂದ ಬಂದವರಿಗೆ ಅನ್ಯಾಯ ಆಗಬಾರದು. ಹೀಗಾಗಿ ಅವರ ಇಚ್ಛೆಯಂತೆ ಕಾಂಗ್ರೆಸ್ ಗೆ ಸೇರುವವರನ್ನು ಗೌರವಯುತವಾಗಿ ಸ್ವಾಗತಿಸಲಾಗುವುದು. ಲಿಂಗಾಯತರು ಮಾತ್ರವಲ್ಲ, ಕಾಂಗ್ರೆಸ್ ಎಲ್ಲರನ್ನು ಸ್ವಾಗತಿಸುತ್ತದೆ.

ಸಂಸತ್ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲಲು ಈಗಾಗಲೇ ಸಿದ್ಧತೆ ನಡೆಸಿದ್ದೇವೆ. ಇವತ್ತಿನ ಪರಿಸ್ಥಿತಿಯಲ್ಲಿ ಯಾರೇ ಅಧ್ಯಕ್ಷರಾದರೂ ಸಹಿಸಿಕೊಳ್ಳುವುದು ಕಷ್ಟವಿದೆ. ಈಗಾಗಲೇ ಬಿಜೆಪಿಯಲ್ಲಿ ಸಾಕಷ್ಟು ಅಸಮಾಧಾನವಿದೆ. ಅದು ಸ್ಪೋಟ ಆಗುವುದು ಒಂದೇ ಬಾಕಿ. ಉತ್ತರ ಕರ್ನಾಟಕದಲ್ಲಿ ಲಿಂಗಾಯತರು ಹೆಚ್ಚು ಕೇಂದ್ರೀಕೃತವಾಗಿದ್ದರೆ, ವಿಜಯೇಂದ್ರ ಅವರು ದಕ್ಷಿಣ ಕರ್ನಾಟಕದ ಮೈಸೂರು, ಬೆಂಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಸೀಮಿತರಾಗಿದ್ದಾರೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಪಕ್ಷದ ನಿರ್ಧಾರಕ್ಕೆ ಬಿಜೆಪಿಯ ಹಲವು ನಾಯಕರಿಗೆ ಒಪ್ಪಿಗೆಯಿಲ್ಲ. ವಿಜಯೇಂದ್ರ ಅವರಂತಹ ಕಿರಿಯ ನಾಯಕರ ಅಡಿಯಲ್ಲಿ ಕೆಲಸ ಮಾಡುವುದು ಹೇಗೆ ಎಂದು ಹಿರಿಯ ನಾಯಕರು ಗೊಂದಲಕ್ಕೊಳಗಾಗಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!