Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಮೈತ್ರಿ ಬೆನ್ನಲ್ಲೇ ಕುಮಾರಸ್ವಾಮಿ ಹಳೇ ವಿಡಿಯೋ ವೈರಲ್..!

Facebook
Twitter
Telegram
WhatsApp

ಲೋಕಸಭಾ ಚುನಾವಣೆಗಾಗಿ ಜೆಡಿಎಸ್, ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುತ್ತಿದೆ. ಇದಕ್ಕೆ ಎರಡು ಪಕ್ಷದಲ್ಲೂ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಜೆಡಿಎಸ್ ಸಿದ್ಧಾಂತವೇ ಬೇರೆ, ಬಿಜೆಪಿ ಸಿದ್ಧಾಂತವೇ ಬೇರೆ ಆಗಿದೆ. ಹೀಗಾಗಿ ಹಲವರು ಮೈತ್ರಿಗೆ ವಿರೋಧಿಸುತ್ತಿದ್ದಾರೆ. ಈ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ವೈರಲ್ ಆಗುತ್ತಾ ಇದೆ. ದತ್ತ ಮಾಲೆ ಬಗ್ಗೆ ಕುಮಾರಸ್ವಾಮಿ ಅವರ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಾ ಇದೆ.

 

ಸಮಯ ಬಂದರೆ ದತ್ತ ಮಾಲೆ ಹಾಕುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ್ದರು. ಆದರೆ 2018ರಲ್ಲಿ ದತ್ತಮಾಲೆಯನ್ನು ವಿರೋಧಿಸಿ ಹೇಳಿಕೆ ನೀಡಿದ್ದರು. 2018ರಲ್ಲಿ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ಮೂಡಿಗೆರೆಯ ಅಡಂತ್ಯಾಯ ರಂಗಮಂದಿರದಲ್ಲಿ ಜೆಡಿಎಸ್ ಸಭೆ ನಡೆದಿತ್ತು. ಈ ಸಭೆಯಲ್ಲಿ ದತ್ತಮಾಲೆಯನ್ನು ವಿರೋಧಿಸುವ ಮಾತನ್ನು ಆಡಿದ್ದರು.

 

‘ಶ್ರೀರಾಮನ ಹೆಸರಿನಲ್ಲಿ ಪ್ರತಿ ವರ್ಷ ಮಾಲೆ ಬೇರೆ ಹಾಕುತ್ತಾರೆ. ಮಾಲೆ ಹಾಕಿಕೊಂಡಿ, ತಾಳ ಬಡಿದುಕೊಂಡು ಚಿಕ್ಕಮಗಳೂರಿನ ಬೀದ ಬೀದಿಯಲ್ಲಿ ಹೋಗುತ್ತಾರೆ. ಅದನ್ನು ನೀವೂ ಮೆಚ್ಚಿಕೊಳ್ಳುತ್ತೀರಾ..? ಭಿಕ್ಷೆ ಬೇರೆ ಬೇಡುತ್ತಾರೆ. ಅದೆಂಥದ್ದೋ ದತ್ತಮಾಲೆ ಹಾಕಿಕೊಂಡು ಮನೆ ಮನೆಗೆ ಹೋಗಿ ಭಿಕ್ಷೆ ಬೇಡುತ್ತಾರೆ. ದೇವರೇ ಕಾಪಾಡಬೇಕು. ಇದೆಲ್ಲ ಬೇಡ ನಮಗೆ. ಮೊದಲು ನೀವೂ ಉಳಿದರೆ ತಾನೇ ದೇವರನ್ನು ಉಳಿಸಲು ಸಾಧ್ಯ’ ಎಂಬ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆ ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು.

ಇದೀಗ ಕುಮಾರಸ್ವಾಮಿ ಅವರು ತಮ್ಮ ನಿಲುವನ್ನೇ ಬದಲಾತಿಸುವಂತ ಹೇಳಿಕೆ ನೀಡಿದ್ದಾರೆ. ದತ್ತಮಾಲೆ ಯಾಕೆ ಹಾಕಬಾರದು..? ದೇವರ ಕಾರ್ಯಕ್ರಮ ಹಾಕುವ ಸಮಯ ಬಂದರೆ ದತ್ತಮಾಲೆ ಹಾಕುತ್ತೇನೆ. ನಮ್ಮ ಧರ್ಮದ ಧರ್ಮಾಭಿಮಾನಕ್ಕೆ ಭಯ ಪಡುತ್ತೀನಾ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!